ಮಂಗಳೂರು ವಿಶ್ವ ವಿದ್ಯಾನಿಲಯ: ಪರೀಕ್ಷೆ ಮುಗಿದು 4 ತಿಂಗಳಾದರೂ ಫಲಿತಾಂಶವಿಲ್ಲ

ಎನ್‌ಇಪಿ ಮೊದಲ ಸೆಮಿಸ್ಟರ್‌ ಮೌಲ್ಯಮಾಪನಕ್ಕೆ ಆರಂಭಿಕ ವಿಘ್ನ

Team Udayavani, Aug 20, 2022, 7:05 AM IST

ಮಂಗಳೂರು ವಿಶ್ವ ವಿದ್ಯಾನಿಲಯ: ಪರೀಕ್ಷೆ ಮುಗಿದು 4 ತಿಂಗಳಾದರೂ ಫಲಿತಾಂಶವಿಲ್ಲ

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ತರಾತುರಿಯಲ್ಲಿ ಜಾರಿಯಾದ ಪರಿಣಾಮ ಎಂಬಂತೆ, ಮೊದಲ ಸೆಮಿಸ್ಟರ್‌ ಪರೀಕ್ಷೆ ಮುಗಿದು ನಾಲ್ಕು ತಿಂಗಳಾದರೂ ಮೌಲ್ಯ ಮಾಪನ ಇನ್ನೂ ಆರಂಭವಾಗಿಲ್ಲ !
ಎನ್‌ಇಪಿಗೆ ರೂಪಿಸಲಾದ ಯುಯು ಸಿಎಂಎಸ್‌ (ಸಮಗ್ರ ವಿ.ವಿ. ಹಾಗೂ ಸಮಗ್ರ ಕಾಲೇಜು ನಿರ್ವಹಣ ವ್ಯವಸ್ಥೆ) ತಂತ್ರಾಂಶವು ಮೌಲ್ಯಮಾಪನಕ್ಕೆ ಹೊಂದಿಕೊಳ್ಳದ್ದರಿಂದ ಮೌಲ್ಯಮಾಪನ ಆರಂಭವಾಗಿಲ್ಲ. ಮೊದಲ ಸೆಮಿಸ್ಟರ್‌ನ ಫ‌ಲಿತಾಂಶ ಬಾರದೆ ಎರಡನೇ ಸೆಮಿಸ್ಟರ್‌ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸಿದ್ಧತೆ ನಡೆಸುವಂತಾಗಿದೆ.

ತಂತ್ರಾಂಶದಲ್ಲಿ ಡಿಜಿಟಲ್‌ ಮೌಲ್ಯಮಾಪನಕ್ಕೆ ಅವಕಾಶ ಇಲ್ಲ. ಹಾಗೆಯೇ ಕೈಯಲ್ಲಿ (ಮ್ಯಾನ್ಯುವಲ್‌) ಮೌಲ್ಯಮಾಪನ ಮಾಡಿ ಅಂಕ ಲಗತ್ತಿಸಲೂ ತಂತ್ರಾಂಶ ದಲ್ಲಿ ಸಾಧ್ಯವಾಗುತ್ತಿಲ್ಲ. “ಮೊದಲ ಸೆಮಿಸ್ಟರ್‌ ಫಲಿತಾಂಶ ಅತೀ ಜರೂರಿಲ್ಲ’ ಎಂಬುದು ವಿ.ವಿ. ಹಾಗೂ ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸಬೂಬು. ಆದರೆ, ವಿಷಯಗಳು ಏನಾದರೂ ಬಾಕಿಯಾದರೆ 2ನೇ ಸೆಮಿಸ್ಟರ್‌ನಲ್ಲಿ ಒಟ್ಟಿಗೇ ಓದಿ ಉತ್ತೀರ್ಣರಾಗುವುದು ಕಷ್ಟವಲ್ಲವೇ ಎಂಬ ಪ್ರಶ್ನೆಗೆ ಯಾರಲ್ಲೂ ಉತ್ತರವಿಲ್ಲ. ಸದ್ಯ, ಎನ್‌ಇಪಿ 2ನೇ ಸೆಮಿಸ್ಟರ್‌ ಪರೀಕ್ಷೆ ಹತ್ತಿರದಲ್ಲಿದೆ.

ಇನ್ನೂ ಸಿದ್ಧವಾಗದ ಯುಯುಸಿಎಂಎಸ್‌!
ಯುಯುಸಿಎಂಎಸ್‌ ತಂತ್ರಾಂಶ ಮೌಲ್ಯಮಾಪನಕ್ಕೆ ಇನ್ನೂ ಸಿದ್ಧಗೊಂಡಿಲ್ಲ. ಮೌಲ್ಯಮಾಪನ ನಡೆದ ತತ್‌ಕ್ಷಣವೇ ವಿದ್ಯಾರ್ಥಿಯ ಅಂಕವನ್ನು ದಾಖಲಿಸಬೇಕಾಗುತ್ತದೆ. ಹಾಗಾಗಿ ಕೂಡಲೇ ಫ‌ಲಿತಾಂಶವೂ ಈ ವ್ಯವಸ್ಥೆಯಲ್ಲಿ ಲಭ್ಯವಾಗಲಿದೆ. ಆದರೆ ಇನ್ನೂ ಈ ವ್ಯವಸ್ಥೆ ಆರಂಭವಾಗುವ ಲಕ್ಷಣಗಳೇ ಗೋಚರಿ ಸದಾಗಿದೆ. ಈ ಮಧ್ಯೆ, ಹೊಸ ತಂತ್ರಾಂಶ ವ್ಯವಸ್ಥೆ ಬಗ್ಗೆ ಸೂಕ್ತ ಮಾಹಿತಿ-ತರಬೇತಿ ನೀಡದ ಕಾರಣ ಪ್ರಾಧ್ಯಾಪಕರೂ ಗೊಂದಲದಲ್ಲಿದ್ದಾರೆ. ಹಾಗಾಗಿ, ವಿದ್ಯಾರ್ಥಿಗಳ ದಾಖಲಾತಿಯೂ ತಡವಾಗಿದೆ. ತರಗತಿ ಜತೆಗೆ ಪ್ರಾಧ್ಯಾಪಕರಿಗೆ ಮೌಲ್ಯಮಾಪನ ಒತ್ತಡ ಇದ್ದರೆ, ಅತಿಥಿ ಉಪನ್ಯಾಸಕರು ಮೌಲ್ಯಮಾಪನದಲ್ಲಿ ಪಾಲ್ಗೊಂಡರೆ ಗೌರವಧನ ಕಡಿತದ ಭೀತಿ ಎದುರಿಸುತ್ತಿದ್ದರು. ಹೀಗಾಗಿ ಎನ್‌ಇಪಿ ಮೌಲ್ಯ ಮಾಪನ ಸಾಧ್ಯವಾಗಲಿಲ್ಲ ಎಂಬುದು ಪ್ರಾಧ್ಯಾಪಕರೊಬ್ಬರ ಅಭಿಪ್ರಾಯ.

2ನೇ ಸೆಮಿಸ್ಟರ್‌ನ
ಬಳಿಕ ಮೌಲ್ಯಮಾಪನ?
ಎನ್‌ಇಪಿ ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಹಾಗೂ ಹಾಜರಾತಿಯನ್ನು ತತ್‌ಕ್ಷಣವೇ ಸಲ್ಲಿಸಲು ಮಂಗಳೂರು ವಿ.ವಿ.ಯು ಎಲ್ಲ ಕಾಲೇಜುಗಳಿಗೆ ಸೂಚಿಸಿದೆ. ಇದರಿಂದ ವಿದ್ಯಾರ್ಥಿಗಳು ಯುಯುಸಿಎಂಎಸ್‌ನಲ್ಲಿ 2ನೇ ಸೆಮಿಸ್ಟರ್‌ ಪರೀಕ್ಷೆಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಪಡೆದು ಪರೀಕ್ಷೆ ಬರೆಯಬಹುದಾಗಿದೆ. ಪರೀಕ್ಷೆ ಆದ ಬಳಿಕ 1 ಹಾಗೂ 2ನೇ ಸೆಮಿಸ್ಟರ್‌ ಮೌಲ್ಯಮಾಪನವನ್ನು ಒಟ್ಟಿಗೆ ಕೈಗೊಳ್ಳಲೂ ವಿ.ವಿ. ಚಿಂತನೆ ನಡೆಸಿದೆ ಎಂದು ಪ್ರಾಧ್ಯಾಪಕರೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

ತಡವಾದರೆ ಸಮಸ್ಯೆ ಇಲ್ಲ
ಯುಯುಸಿಎಂಎಸ್‌ನಲ್ಲಿ ಕೆಲವು ಅವಕಾಶಗಳು ಲಭ್ಯವಿಲ್ಲದ್ದರಿಂದ ಮೊದಲ ಸೆಮಿಸ್ಟರ್‌ ಮೌಲ್ಯಮಾಪನ ನಡೆದಿಲ್ಲ. ಈ ವಿಳಂಬದಿಂದ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು. ಪದವಿಯ ಕೊನೆಯ ಪರೀಕ್ಷಾ ಫಲಿತಾಂಶವನ್ನು ತುರ್ತಾಗಿ ನೀಡಲು ಕ್ರಮ ಕೈಗೊಳ್ಳಲಾಗಿದೆ.
-ಪ್ರೊ| ಪಿ.ಎಸ್‌. ಯಡಪಡಿತ್ತಾಯ, ಕುಲಪತಿ, ಮಂಗಳೂರು ವಿ.ವಿ.

-  ದಿನೇಶ್‌ ಇರಾ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.