ಕೆಬಿಜೆಎನ್ಎಲ್ ಕಚೇರಿ ಎದುರು ಪ್ರತಿಭಟನೆ
Team Udayavani, Aug 20, 2022, 3:07 PM IST
ಜೇವರ್ಗಿ: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಯಡ್ರಾಮಿ ತಾಲೂಕಿನ ಗೂಗಿಹಾಳ ಹಾಗೂ ಇಜೇರಿ ಗ್ರಾಮದಲ್ಲಿ ನಡೆಯುತ್ತಿರುವ ಕೆರೆ ತುಂಬುವ ಯೋಜನೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ತಾಲೂಕು ಘಟಕದ ವತಿಯಿಂದ ತಾಲೂಕಿನ ಚಿಗರಳ್ಳಿ ಕೆಬಿಜೆಎನ್ಎಲ್ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಯಡ್ರಾಮಿ ತಾಲೂಕಿನ ಇಜೇರಿ ಹಾಗೂ ಗೂಗಿಹಾಳ ಗ್ರಾಮದಲ್ಲಿ ನಡೆಯುತ್ತಿರುವ ಕೆರೆ ತುಂಬುವ ಯೋಜನೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕ್ರಿಯಾ ಯೋಜನೆ ಪ್ರಕಾರ ಕಾಮಗಾರಿ ನಡೆಸದೇ ಬೇಕಾಬಿಟ್ಟಿಯಾಗಿ ನಡೆಸಲಾಗುತ್ತಿದೆ. ನಾಲಾ ಬಿರುಕು ಬಿಟ್ಟ ಪರಿಣಾಮ ಹೊಲಗಳಿಗೆ ನೀರು ಹರಿದು ತೇವಾಂಶ ಹೆಚ್ಚಾಗಿ ಬೆಳೆಹಾನಿಯಾಗುವ ಸಂಭವ ವಿದೆ. ಕೂಡಲೇ ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ತನಿಖೆ ನಡೆಸಬೇಕು. ನಿರ್ಲಕ್ಷಿಸಿದರೆ ಮುಂಬರುವ ದಿನಗಳಲ್ಲಿ ಬೀಮರಾಯನಗುಡಿ ಕೇಂದ್ರ ಕಚೇರಿ ಎದುರು ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ಅದ್ಯಕ್ಷ ಶ್ರವಣಕುಮಾರ ನಾಯಕ ಇಜೇರಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಅಲ್ಲಾಪಟೇಲ ಇಜೇರಿ, ತಾಯಪ್ಪ ನಾಯಕ, ದೇವಿಂದ್ರ ಚಿಗರಳ್ಳಿ, ಸಿದ್ದು ನೀರಲಕೋಡ, ಸೈಯದ್ ಪಟೇಲ ಪೊಲೀಸ್ ಪಾಟೀಲ, ಸೆ„ದಪ್ಪ ಹೊಸಮನಿ, ಮೌಲಾಲಿ ಕುಕನೂರ, ರಮೇಶ ಗಜಕೋಶ, ನಿಂಗಪ್ಪ ಚಿಗರಳ್ಳಿ, ವಾಸುದೇವ ಯಂಕಂಚಿ, ಯೂನುಸ್ ಕಾಲೇಗೌಡ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.