ಮುಗಳಿಹಾಳದಲ್ಲಿ ಡಿಸಿ ಗ್ರಾಮ ವಾಸ್ತವ್ಯ

ತಹಶೀಲ್ದಾರ್‌ ಕಚೇರಿ, ನ್ಯಾಯಾಲಯ ನಿರ್ಮಾಣಕ್ಕೆ ತಲಾ ಹತ್ತು ಎಕರೆ: ನಿತೇಶ ಪಾಟೀಲ

Team Udayavani, Aug 21, 2022, 12:21 PM IST

7

ಬೆಳಗಾವಿ/ಯರಗಟ್ಟಿ: ಗ್ರಾಮಸ್ಥರು ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಿ ಗ್ರಾಮದಲ್ಲಿಯೇ ಅವರಿಗೆ ಸರಕಾರದ ಸೇವಾ-ಸೌಲಭ್ಯ ಒದಗಿಸುವುದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಉದ್ದೇಶ. ಜಿಲ್ಲಾಮಟ್ಟದಲ್ಲಿ ತೆಗೆದುಕೊಳ್ಳಬಹುದಾದ ನಿರ್ಧಾರಗಳನ್ನು ಗ್ರಾಮದಲ್ಲಿಯೇ ತೆಗೆದುಕೊಂಡು ಜನರ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಹೇಳಿದರು.

ನೂತನ ತಾಲೂಕು ಯರಗಟ್ಟಿಯ ಮುಗಳಿಹಾಳ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಡೆಸುವ ಮೂಲಕ ಹೊಸ ತಾಲೂಕಿನ ಜನರ ಅಹವಾಲು, ದೂರು-ದುಮ್ಮಾನುಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯತ್ನ ನಡೆಸಿದ ಅವರು ಯರಗಟ್ಟಿಯಲ್ಲಿ ಹೊಸ ತಹಶೀಲ್ದಾರ್‌ ಕಚೇರಿ, ನ್ಯಾಯಾಲಯ ನಿರ್ಮಾಣಕ್ಕೆ ತಲಾ ಹತ್ತು ಎಕರೆ ಜಾಗವನ್ನು ನೀಡಲಾಗಿದೆ. ಅದೇ ರೀತಿ ತಾಪಂ ಕಚೇರಿಯ ನಿರ್ಮಾಣಕ್ಕೆ ಕೂಡ ಈಗಾಗಲೇ ಜಾಗೆ ಗುರುತಿಸಲಾಗಿದೆ ಎಂದರು.

ಹೊಸ ತಾಲೂಕು ಕೇಂದ್ರವಾಗಿರುವ ಯರಗಟ್ಟಿಗೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯ ಸರಕಾರದ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ನರೇಗಾ ಯೋಜನೆಯಡಿ ಗ್ರಾಮದ ಪ್ರೌಢಶಾಲೆಯ ಕಂಪೌಂಡ್‌, ಬಣ್ಣ, ಶಾಲಾ ಮೈದಾನ ನಿರ್ಮಾಣ ಮಾಡಲಾಗಿರುತ್ತದೆ ಎಂದು ಹೇಳಿದರು.

ಮೊದಲ ಬಾರಿ ತಮ್ಮ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳನ್ನು ಮುಗಳಿಹಾಳ ಗ್ರಾಮದ ರಾಯಣ್ಣ ಸರ್ಕಲ್‌ನಲ್ಲಿ ಗ್ರಾಮಸ್ಥರು ಸಂಭ್ರಮದಿಂದ ಬರಮಾಡಿಕೊಂಡರು. ಅಲ್ಲಿಂದ ಡೊಳ್ಳುಮೇಳದ ಜೊತೆ ಕುಂಭಹೊತ್ತ ಮಹಿಳೆಯರು ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿಗಳಿಗೆ ಸ್ವಾಗತ ನೀಡಿದರು.

ಗ್ರಾಮದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನದಡಿ ಆಯೋಜಿಸಿದ್ದ ಪೌಷ್ಟಿಕಾಹಾರ ಶಿಬಿರ, ಆರೋಗ್ಯ ತಪಾಸಣಾ ಶಿಬಿರಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಚಿತವಾಗಿ ಮಧುಮೇಹ, ರಕ್ತದೊತ್ತಡ ಮತ್ತಿತರ ತಪಾಸಣೆ ಮಾಡಲಾಯಿತು. ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಿ ಪೌಷ್ಟಿಕಾಹಾರದ ಕಿಟ್‌ ವಿತರಿಸಿದರು.

ಮುಗಳಿಹಾಳ-ಇಟ್ನಾಳ ರಸ್ತೆ: ಮುಗಳಿಹಾಳ-ಇಟ್ನಾಳ ಗ್ರಾಮದ ಮಧ್ಯೆದ ಹೊಲಕ್ಕೆ ಹಾಗೂ ಶಾಲಾ ಮಕ್ಕಳಿಗೆ ದಾರಿ ಇಲ್ಲ ಎಂಬ ಮೊದಲ ದೂರು ಆಲಿಸಿದ ಜಿಲ್ಲಾಧಿಕಾರಿಗಳು ಗ್ರಾಮನಕಾಶೆ ಪರಿಶೀಲಿಸಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ 1.50 ಕೋಟಿ ರೂಪಾಯಿ ವೆಚ್ಚದಲ್ಲಿ ಬ್ರಿಡ್ಜ್-ಕಂ ಬ್ಯಾರೇಜ್‌ ನಿರ್ಮಾಣಕ್ಕೆ ಶಾಸಕರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಅನುಮೋದನೆ ಸಿಕ್ಕ ಕೂಡಲೇ ಕಾಮಗಾರಿ ಆರಂಭಿಸಲಾಗುವುದು ಎಂದರು.

ಅಂಗನವಾಡಿ ಕೇಂದ್ರ: ತೋಟಪಟ್ಟಿಯಲ್ಲಿ ಮಕ್ಕಳಿದ್ದರೆ ಅವರ ಸಂಖ್ಯೆಯನ್ನು ಆಧರಿಸಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಕೂಡಲೇ ಸಮೀಕ್ಷೆ ಮಾಡಿ ಸರಕಾರಕ್ಕೆ ಪ್ರಸ್ತಾವನೆ ಕಳಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚನೆ ನೀಡಿದರು.

ಮುಗಳಿಹಾಳ ಗ್ರಾಮದ 90ಕ್ಕಿಂತ ಅಧಿಕ ಕುಟುಂಬಗಳಿಗೆ ನಿವೇಶನವಿಲ್ಲ. ಅದೇ ರೀತಿ ಒಟ್ಟಾರೆ 344 ವಸತಿ ರಹಿತರಿಗೆ ಮನೆಯನ್ನು ಒದಗಿಸಲು ಅಗತ್ಯ ಜಮೀನನ್ನು ಗ್ರಾಪಂಗೆ ಒದಗಿಸಲಾಗುವುದು. ನಂತರ ಆಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲಾಗುವುದು ಎಂದರು.

ಮನೆಹಾನಿಯಾಗಿ ಎರಡು ವರ್ಷ ಕಳೆದರೂ ಕೊನೆಯ ಕಂತಿನ ಪರಿಹಾರ ಬಂದಿಲ್ಲ ಎಂದು ಗ್ರಾಮದ ಹಿರಿಯರೊಬ್ಬರು ಜಿಲ್ಲಾಧಿಕಾರಿಗಳ ಗಮನಸೆಳೆದರು. ಇದರ ಬಗ್ಗೆ ತಹಶೀಲ್ದಾರರನ್ನು ವಿಚಾರಿಸಿದ ಜಿಲ್ಲಾಧಿಕಾರಿಗಳು ಜಿಪಿಎಸ್‌ ಹಂತದಲ್ಲಿ ಅರ್ಜಿ ಇತ್ಯರ್ಥ ಬಾಕಿ ಉಳಿದಿದ್ದು, ಕೂಡಲೇ ಅದನ್ನು ಇತ್ಯರ್ಥ ಪಡಿಸಲಾಗುತ್ತದೆ ಎಂದು ಹೇಳಿದರು.

ಗ್ರಾಮಸಭೆಗೆ ಆಗ್ರಹ: ಕಳೆದ ಎರಡು ವರ್ಷಗಳಿಂದ ಮುಗಳಿಹಾಳ ಗ್ರಾಮ ಪಂಚಾಯತಿ ಸಭೆಯನ್ನು ಕರೆದಿಲ್ಲ. ಇದಕ್ಕೆ ಸಂಬಂಧಿಸಿದವರು ಉತ್ತರಿಸಬೇಕು. ಗ್ರಾಮಸಭೆ ನಡೆಯದಿರುವುದರಿಂದ ಅನೇಕ ಕೆಲಸ ಬಾಕಿ ಉಳಿದಿವೆ. ಆದ್ದರಿಂದ ಕೂಡಲೇ ಗ್ರಾಮಸಭೆ ನಡೆಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಪಂ ಅಧ್ಯಕ್ಷೆ ಮಹಾನಿಂಗವ್ವ ಬಸಪ್ಪ ಮಾಯನ್ನಿ ಹಾಗೂ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಈಗಾಗಲೇ ವಿಶೇಷ ಗ್ರಾಮಸಭೆಯನ್ನು ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 23ಕ್ಕೆ ಗ್ರಾಮ ಸಭೆ ಕರೆಯಲಾಗುತ್ತದೆ ಎಂದು ತಿಳಿಸಿದರು.

ತಹಶೀಲ್ದಾರ್‌ ಎಂ.ಎನ್‌.ಮಠದ ಸ್ವಾಗತಿಸಿದರು. ಗ್ರಾಮ ಪಂಚಾಯತಿ ಅಧ್ಯಕ್ಷೆ ಮಹಾನಿಂಗವ್ವ ಬಸಪ್ಪ ಮಾಯನ್ನಿ, ಜಿಪಂ ಸಿಇಒ ದರ್ಶನ್‌, ಗ್ರಾಪಂ ಉಪಾಧ್ಯಕ್ಷ ಅಶೋಕ ಪಟ್ಟಣಶೆಟ್ಟಿ, ತಾಪಂ ಇಒ ಯಶವಂತಕುಮಾರ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಮಹೇಶ್‌ ಚಿತ್ತರಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ವಿ. ಕರೀಕಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಾಂಚನಾ ಆಮ್ಟೆ ಉಪಸ್ಥಿತರಿದ್ದರು.

ಅತಿಕ್ರಮಣ ತೆರವಿಗೆ ಸೂಚನೆ

ಪಕ್ಕದ ದಾಸನಾಳ ಗ್ರಾಮದಲ್ಲಿರುವ ಮೂರು ಎಕರೆ ಸ್ಮಶಾನಭೂಮಿ ಅತಿಕ್ರಮಣಗೊಂಡಿದ್ದು, ಅದನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು ರಸ್ತೆ, ವಸತಿ ಸೌಲಭ್ಯ, ಪ್ರವಾಹದಿಂದ ಹಾನಿಯಾದ ಮನೆಗಳಿಗೆ ಪರಿಹಾರ, ವಿದ್ಯುತ್‌ ಸಂಪರ್ಕ, ಅಂಗನವಾಡಿ ಕೇಂದ್ರ ಆರಂಭಿಸುವುದು, ಸ್ಮಶಾನಭೂಮಿ, ಅಕ್ರಮ ಸಾರಾಯಿ ಮಾರಾಟ ತಡೆ ಸೇರಿದಂತೆ ವಿವಿಧ ರೀತಿಯ ಬೇಡಿಕೆಗಳನ್ನು ಪರಿಶೀಲಿಸಿದರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

11-

Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.