ದೇಶದಲ್ಲೇ ಕರ್ನಾಟಕದ ನ್ಯಾಯಾಂಗ ವ್ಯವಸ್ಥೆ ಅತ್ಯುತ್ತಮ: ಬಸವರಾಜ ಬೊಮ್ಮಾಯಿ


Team Udayavani, Aug 21, 2022, 1:28 PM IST

ದೇಶದಲ್ಲೇ ಕರ್ನಾಟಕದ ನ್ಯಾಯಾಂಗ ವ್ಯವಸ್ಥೆ ಅತ್ಯುತ್ತಮ: ಬಸವರಾಜ ಬೊಮ್ಮಾಯಿ

ಹಾವೇರಿ: ದೇಶದಲ್ಲೇ ಕರ್ನಾಟಕದ ನ್ಯಾಯಾಂಗ ವ್ಯವಸ್ಥೆ ಅತ್ಯುತ್ತಮವಾಗಿದೆ. ನಮ್ಮ ಸರ್ಕಾರ 800 ಕೋಟಿ ರೂ. ಅನುದಾನವನ್ನು ನ್ಯಾಯಾಲಯಗಳ ಮೂಲಸೌಕರ್ಯಕ್ಕೆ ಮೀಸಲಿಟ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾವಿ ಪಟ್ಟಣದಲ್ಲಿ ರವಿವಾರ ವಕೀಲರ ಸಂಘದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಬೇರೆ ಬೇರೆ ದೇಶಗಳಲ್ಲಿ ವ್ಯವಸ್ಥೆ ಬುಡಮೇಲಾಗಿರುವುದನ್ನು ಕಾಣುತ್ತೇವೆ. ಆದರೆ, ಭಾರತದಲ್ಲಿ ತತ್ವ, ಆದರ್ಶಗಳ ಬುನಾದಿ ಭದ್ರವಾಗಿರುವುದರಿಂದ ಪ್ರಜಾಪ್ರಭುತ್ವ ಜೀವಂತವಾಗಿದೆ. ಇಲ್ಲದಿದ್ದರೆ ಜನರಿಗೆ ನ್ಯಾಯ ಸಿಗುವುದಿರಲಿ, ಬದುಕಿಗೆ ಸಮಭಾವ ಸಿಗುವುದು ಕೂಡ ಕಷ್ಟವಾಗುತ್ತಿತ್ತು ಎಂದು ಹೇಳಿದರು.

ನಮ್ಮ ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆ ಬಲಿಷ್ಠ ಮತ್ತು ಉತ್ತಮವಾಗಿರುವ ಕಾರಣ ಪ್ರಜಾಪ್ರಭುತ್ವ ವ್ಯವಸ್ಥೆ ಜೀವಂತವಾಗಿದೆ. ಬಾಬಾ ಸಾಹೇಬ ಡಾ.ಬಿ.ಆರ್. ಅಂಬೇಡ್ಕರ್ ಅವರು ನ್ಯಾಯಾಂಗಕ್ಕೆ ವಿಶೇಷ ಸ್ಥಾನ, ಜವಾಬ್ದಾರಿ ಮತ್ತು ಅಧಿಕಾರ ನೀಡಿದ್ದಾರೆ. ನಾವು ಈಚೆಗೆ ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವ ಆಚರಿಸಿದ್ದೇವೆ. ಅದು 75ನೇ ಲೋಕತಂತ್ರ/ ಜನತಂತ್ರದ ಆಚರಣೆಯೂ ಆಗಿದೆ ಎಂದರು.

ನಮ್ಮಲ್ಲಿ ನ್ಯಾಯಾಂಗ ವ್ಯವಸ್ಥೆ ಉತ್ತಮವಾಗಿರುವ ಕಾರಣ ಬಂಡವಾಳ ಹೂಡಿಕೆಗೆ ಬಹುರಾಷ್ಟ್ರೀಯ ಕಂಪನಿಗಳು ಆಸಕ್ತಿ ತೋರುತ್ತಿವೆ. ನ್ಯಾಯಾಂಗ ಮತ್ತು ವಕೀಲರ ನಡುವಿನ‌ ವೃತ್ತಿ ಸಂಬಂಧ ಉತ್ತಮವಾಗಿದ್ದರೆ ಕಕ್ಷಿದಾರರಿಗೆ ಬೇಗ ನ್ಯಾಯ ಸಿಗುತ್ತದೆ ಎಂದರು.

ಇದನ್ನೂ ಓದಿ:ಕೆಲಸ ಅರಸಿ ಬಂದವಳನ್ನು ವೇಶ್ಯಾವಾಟಿಕೆಗೆ ದೂಡಿ,ಸಾಮೂಹಿಕ ಅತ್ಯಾಚಾರ: ಮಹಿಳೆ ಸೇರಿ ಮೂವರ ಬಂಧನ

ನನಗೂ ವಕೀಲ ವೃತ್ತಿಗೂ ಅವಿನಾಭಾವ ಸಂಬಂಧ ನ್ಯಾಯಾಂಗ ವ್ಯವಸ್ಥೆಯಲ್ಲಿ ನಿಖರತೆ ಇದ್ದಾಗ ಪ್ರಕರಣಗಳು ತ್ವರಿತ ಗತಿಯಲ್ಲಿ ವಿಲೇವಾರಿ ಆಗುತ್ತವೆ. ನನಗೂ ವಕೀಲ ವೃತ್ತಿಗೂ ಅವಿನಾಭಾವ ಸಂಬಂಧವಿದೆ. ನಮ್ಮ ತಂದೆ ಎಸ್.ಆರ್. ಬೊಮ್ಮಾಯಿ ವಕೀಲರಾಗಿದ್ದರು. ತಾಯಿ ತಂದೆ ಕೂಡ ವಕೀಲ ವೃತ್ತಿಯಲ್ಲಿದ್ದರು ಎಂದ ಅವರು, ಬಹು ದಿನಗಳ ಬೇಡಿಕೆಯಾಗಿದ್ದ ಶಿಗ್ಗಾವಿ ಮತ್ತು ಸವಣೂರು ತಾಲ್ಲೂಕಿನ ವಕೀಲರ ಸಂಘದ ಕಟ್ಟಡಗಳಿಗೆ ಅಡಿಗಲ್ಲು ಹಾಕಲಾಗಿದೆ ಎಂದು ಹೇಳಿದರು.

ಹೈಕೋರ್ಟ್ ನ್ಯಾಯಮೂರ್ತಿ ಸಚಿನ ಮುಗದುಮ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನ್ಯಾಯಾಧೀಶರಾದ ಯಾದವ ವನಮಾಲ ಆನಂದರಾವ್, ಕೃಷಿ ಸಚಿವ ಬಿ.ಸಿ.ಪಾಟೀಲ, ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಶಿಗ್ಗಾವಿ ವಕೀಲರ ಸಂಘದ ಅಧ್ಯಕ್ಷ ಎಂ.ಎಚ್.ಬೆಂಡಿಗೇರಿ ಹಾಗೂ ವಕೀಲರು ಇದ್ದರು.

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.