ಪಠ್ಯದ ಜತೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳಿ: ಡಾ. ವೆಂಕಟರಮಣ ಹೆಗಡೆ
Team Udayavani, Aug 21, 2022, 9:05 PM IST
ಶಿರಸಿ: ಶಿಕ್ಷಣ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಂಡಾಗ ಸಾಧನೆ ಸಾಧ್ಯ ಎಂದು ನಿಸರ್ಗ ಮನೆಯ ಪ್ರಸಿದ್ಧ ವೈದ್ಯ, ವೈದ್ಯ ಅಂಕಣಕಾರ ಡಾ. ವೆಂಕಟರಮಣ ಹೆಗಡೆ ಹೇಳಿದರು.
ರವಿವಾರ ಅವರು ನಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಹಮ್ಮಿಕೊಂಡ ಕಲಾ ಭಾರತಿ ಗೊಂಬೆಯಾಟಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳಲ್ಲಿ ಇರುವ ಪ್ರತಿಭೆ ಬೆಳಗಿಸಲು ಪಠ್ಯೇತರ ಚಟುವಟಿಕೆ ಅವಕಾಶ ಮಾಡುತ್ತದೆ. ಎಷ್ಟೇ ಹಣ ಇದ್ದರೂ ಆರೋಗ್ಯ ಇರದೇ ಇದ್ದರೆ ಬದುಕು ಕಷ್ಟ. ಹಾಗಾಗಿ ಕೇವಲ8 ಗಂಟೆ ಅವಧಿಯಲ್ಲಿ ಆಹಾರ ಸ್ವೀಕರಿಸಿ 16 ತಾಸು ಆಹಾರ ಸ್ವೀಕರಿಸದೇ ಇದ್ದರೆ ಆರೋಗ್ಯ ಚೆನ್ನಾಗಿರುತ್ತದೆ. ಮಧುಮೇಹ, ರಕ್ತದೊತ್ತಡ ಕಡಿಮೆ ಆಗುತ್ತದೆ ಎಂದರು.
ವ್ಯಕ್ತಿ ಕನಿಷ್ಠ 6 ತಾಸು ನಿದ್ದೆ, ದಿನಕ್ಕೆ4 ಲೀ. ನೀರು. 2 ಸಲ ಆಹಾರ, ಎರಡು ಸಲ ಪ್ರಾರ್ಥನೆ, ವ್ಯಾಯಾಮ, ವಾರಕ್ಕೊಮ್ಮೆ ಉಪವಾಸ ಮಾಡಬೇಕು ಎಂದೂ ಹೇಳಿದರು.
ಕಲಾ ಭಾರತಿ ತಂಡದಿಂದ ಡಾ. ವೆಂಕಟರಮಣ ಹೆಗಡೆ, ಸಿದ್ದಪ್ಪ ಬಿರಾದಾರ ಪರವಾಗಿ ರಾಜಪ್ಪ,ಶ್ರಿಧರ ಗುಡಿಗಾರ, ಡಿ.ಎಸ್.ನಾಯ್ಕ, ಪ್ರಭಾಕರ ಜೋಗಳೇಕರ ಅವರಿಗೆ ಬಿರಿದು ನೀಡಿ ಗೌರವಿಸಲಾಯಿತು.
ಮಾರಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಜಿ.ನಾಯ್ಕ ವಹಿಸಿದ್ದರು. ಉಪಾಧ್ಯಕ್ಷ ಸುಧೇಶ ಜೋಗಳೆಕರ, ಶಿವಾನಂದ ಶೆಟ್ಟಿ, ಕಲಾ ಭಾರತಿಯ ಮನೋಜ ಪಾಲೇಕರ್ ಇತರರು ಇದ್ದರು. ಬಳಿಕ ಗೊಂಬೆಯಾಟ, ಮಕ್ಕಳಿಂದ ನೃತ್ಯ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.