ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್: ಪಿ.ವಿ. ಸಿಂಧು ಗೈರು; ಸೇನ್ ಮೇಲೆ ಎಲ್ಲರ ಲಕ್ಷ್ಯ
Team Udayavani, Aug 21, 2022, 11:15 PM IST
ಟೋಕಿಯೊ: ಸೋಮವಾರದಿಂದ ಜಪಾನ್ ರಾಜಧಾನಿ ಟೋಕಿಯೋದಲ್ಲಿ ಆರಂಭ ವಾಗಲಿರುವ ಪ್ರತಿಷ್ಠಿತ “ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್’ನಿಂದ ಪಿ.ವಿ. ಸಿಂಧು ಹೊರ ಗುಳಿಯುವ ಕಾರಣ ಭಾರತೀಯರ ಲಕ್ಷ್ಯವೆಲ್ಲ ಯುವ ಆಟಗಾರ ಲಕ್ಷ್ಯ ಸೇನ್ ಅವರತ್ತ ಹರಿದಿದೆ. ಎಚ್.ಎಸ್. ಪ್ರಣಯ್ ಮೇಲೂ ಭಾರೀ ಭರವಸೆ ಇಡಲಾಗಿದೆ.
ಮೊದಲ ಬಾರಿಗೆ ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ಎನಿಸಿಕೊಂಡ ಸಿಂಧು ಪಾದದ ನೋವಿನಿಂದಾಗಿ ಈ ಕೂಟವನ್ನು ತಪ್ಪಿಸಿಕೊಳ್ಳುತ್ತಿದ್ದಾರೆ. ಕಳೆದೊಂದು ದಶಕದಲ್ಲಿ ಸಿಂಧು “ಬಿಡ ಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್’ ಕೂಟವನ್ನು ತಪ್ಪಿಸಿಕೊಳ್ಳುತ್ತಿರುವುದು ಇದೇ ಮೊದಲು.
ಬರಿಗೈಯಲ್ಲಿ ಬಂದದ್ದಿಲ್ಲ
2011ರಿಂದೀಚೆ ಭಾರತದ ಶಟ್ಲರ್ “ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್’ನಿಂದ ಬರಿಗೈಯಲ್ಲಿ ಮರಳಿದ್ದಿಲ್ಲ. ಹೀಗಾಗಿ ಲಕ್ಷ್ಯ ಸೇನ್, ಎಚ್.ಎಸ್. ಪ್ರಣಯ್, ಕೆ. ಶ್ರೀಕಾಂತ್ ಮೇಲೆ ಪದಕದ ಭರವಸೆ ಇಡಲಾಗಿದೆ. 2021ರ ಕೂಟದಲ್ಲಿ ಶ್ರೀಕಾಂತ್ ಮತ್ತು ಲಕ್ಷ ಸೇನ್ ಕ್ರಮವಾಗಿ ಬೆಳ್ಳಿ ಹಾಗೂ ಕಂಚು ಜಯಿಸಿದ್ದರು. ಆದರೆ ಈ ಬಾರಿ ಸವಾಲು ಹೆಚ್ಚು ಕಠಿನವಾಗಿದೆ.
2021ರ ಪಂದ್ಯಾವಳಿಯಲ್ಲಿ ಬಲಿಷ್ಠ ಆಟ ಗಾರರಾದ ಜಪಾನ್ನ ಕೆಂಟೊ ಮೊಮೊಟ, ಇಂಡೋನೇಷ್ಯಾದ ಜೊನಾಥನ್ ಕ್ರಿಸ್ಟಿ, ಆ್ಯಂಟನಿ ಗಿಂಟಿಂಗ್ ಕಾಣಿಸಿಕೊಂಡಿರಲಿಲ್ಲ. ಈ ಬಾರಿ ಇವರೆಲ್ಲರೂ ಇದ್ದಾರೆ. ಆದರೂ ಕಳೆದ ಕೆಲವು ಸಮಯದಿಂದ ಅಮೋಘ ಪ್ರದರ್ಶನ ಕಾಯ್ದುಕೊಂಡು ಬಂದಿರುವ ಭಾರತದ ಪುರುಷರ ವಿಭಾಗದ ಮೇಲೆ ಭರವಸೆ ಹೆಚ್ಚೇ ಇದೆ.
9ನೇ ಶ್ರೇಯಾಂಕ ಪಡೆದಿರುವ ಲಕ್ಷ್ಯ ಸೇನ್ ಮೊದಲ ಸುತ್ತಿನಲ್ಲಿ ಡೆನ್ಮಾರ್ಕ್ನ ಹಾನ್ಸ್- ಕ್ರಿಸ್ಟಿಯನ್ ಸೋಲ್ಬರ್ಗ್ ವಿಟ್ಟಿಂಗಸ್ ಅವರನ್ನು ಎದುರಿಸಲಿದ್ದಾರೆ. 3ನೇ ಸುತ್ತಿನಲ್ಲಿ ಕೆಂಟೊ ಮೊಮೊಟ ಎದುರಾಗುವ ಸಾಧ್ಯತೆ ಇದೆ. ಎಚ್.ಎಸ್. ಪ್ರಣಯ್ ಮತ್ತು ಕೆಂಟೊ ಮೊಮೊಟ ದ್ವಿತೀಯ ಸುತ್ತಿನಲ್ಲಿ ಮುಖಾಮುಖೀ ಆಗಬಹುದು.
ಡಬಲ್ಸ್ ಮುಖಾಮುಖಿ
ಡಬಲ್ಸ್ನಲ್ಲಿ ಭಾರತಕ್ಕೆ ಮೊದಲ ಗೇಮ್ಸ್ ಚಿನ್ನ ತಂದಿತ್ತ ಚಿರಾಗ್ ಶೆಟ್ಟಿ-ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮೇಲೂ ಭಾರೀ ನಿರೀಕ್ಷೆ ಇದೆ. ವನಿತಾ ಡಬಲ್ಸ್ನಲ್ಲಿ ಅಶ್ವಿನಿ ಪೊನ್ನಪ್ಪ-ಎನ್. ಸಿಕ್ಕಿ ರೆಡ್ಡಿ, ಗಾಯತ್ರಿ ಗೋಪಿಚಂದ್-ಟ್ರೀಸಾ ಜಾಲಿ ಕೂಡ ಕಣದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
2500 Cops: ಗ್ವಾಲಿಯರ್ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ
Women’s T20 World Cup 2024: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಆಘಾತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.