ಸಿದ್ದುಗೆ ಮೊಟ್ಟೆ ಎಸೆದಿದ್ದು ಯಾರು ? ಡಿಕೆಶಿ ಬಣವೋ, ಪರಮೇಶ್ವರ್‌ ಬಣವೋ: ಸುನಿಲ್‌ ಪ್ರಶ್ನೆ


Team Udayavani, Aug 22, 2022, 10:42 AM IST

thumb sunil

ಉಡುಪಿ : ಸಿದ್ದರಾಮಯ್ಯ ನಡವಳಿಕೆಯಿಂದ ಕಾಂಗ್ರೆಸ್‌ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಕೊಡಗಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಸಿದ್ದರಾಮಯ್ಯಗೆ ಮೊಟ್ಟೆ ಎಸೆದದ್ದು ಡಿಕೆ ಶಿವಕುಮಾರ್‌ ಬಣವೋ? ಪರಮೇಶ್ವರ್‌ ಬಣವೋ? ಎಂದು ಸಚಿವ ಸುನಿಲ್‌ ಕುಮಾರ್‌ ಪ್ರಶ್ನಿಸಿದ್ದಾರೆ.

ರವಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ತನ್ನ ಆಂತರಿಕ ತನಿಖೆಯಲ್ಲಿ ಅದನ್ನು ಬಹಿರಂಗಪಡಿಸಬೇಕು. ವಿನಾಕಾರಣ ಬಿಜೆಪಿ ಮೇಲೆ ಆರೋಪ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯನವರು ಆಡಳಿತದಲ್ಲಿ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿದ್ದರು ಎಂದು ಕಿಡಿಕಾರಿದರು.

ಸಿದ್ದರಾಮಯ್ಯನವರು ನಿರಂತರ ಸಮಾಜ ವಿರೋಧಿ – ತದ್ವಿರುದ್ಧ ಹೇಳಿಕೆಗಳನ್ನು ಕೊಡುತ್ತಾರೆ. ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಮಾತನಾಡಿದಾಗ ಇಡೀ ರಾಜ್ಯದಲ್ಲಿ ಪ್ರತಿಭಟನೆ ಎದುರಿಸಬೇಕಾಗುತ್ತದೆ. ಪ್ರತಿಭಟನೆ ಮಾಡಲೇಬಾರದು ಎಂದಾದರೆ ಕೇವಲ ಮುಸ್ಲಿಂ ಪ್ರದೇಶಗಳಲ್ಲಿ ಮಾತ್ರ ಓಡಾಟ ಮಾಡಬೇಕಾಗುತ್ತದೆ. ಉಳಿದ ಪ್ರದೇಶಗಳಲ್ಲಿ ಸಮಾಜ ಸಿದ್ದರಾಮಯ್ಯ ಅವರ ವಿರುದ್ಧ ಪ್ರತಿಭಟನೆ ಮಾಡಿಯೇ ಮಾಡುತ್ತದೆ. ಪ್ರತಿಭಟನೆಗಳನ್ನು ಸಿದ್ದರಾಮಯ್ಯ ಗೌರವಪೂರ್ಣವಾಗಿ ಸ್ವೀಕರಿಸಬೇಕು ಎಂದರು.

ಸ್ವಾತಂತ್ರ್ಯ ಹೋರಾಟಗಾರರು, ಮಹಾಪುರುಷರ ಬಗ್ಗೆ ಗೌರವಪೂರ್ಣವಾಗಿ ಮಾತನಾಡಿದರೆ ಸಮಾಜ ಕೂಡ ಸಹಜ ಸ್ಥಿತಿಯಲ್ಲಿರುತ್ತದೆ. ಅಧಿಕಾರದಲ್ಲಿದ್ದಾಗ ಮತ್ತು ಈಗ ಸಿದ್ದರಾಮಯ್ಯ ಸಮಾಜ ವಿರೋಧಿ ಹಿಂದೂ ವಿರೋಧಿ ಎಂಬುದು ಸ್ಪಷ್ಟವಾಗಿದೆ ಎಂದರು.

ಕಾಂಗ್ರೆಸ್‌ನಿಂದ ಮಡಿಕೇರಿ ಚಲೋ ವಿಚಾರದಲ್ಲಿ ಕಾಂಗ್ರೆಸ್‌ನ ಟೂಲ್‌ ಅಜೆಂಡಾ ಕಾಣುತ್ತಿದೆ. ತಮ್ಮ ನಾಯಕರ ವಿರುದ್ಧ ತಮ್ಮ ಕಾರ್ಯಕರ್ತರೇ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸ್ಫೋಟ ಮಾಡುತ್ತಿದ್ದಾರೆ. ಈಗ ಕೊಡಗು ಚಲೋ ಮಾಡುತ್ತೇವೆ ಅನ್ನುತ್ತಿದ್ದಾರೆ. ಕೊಡಗಿಗೆ ಕಾಲ್ನಡಿಗೆ ಮಾಡಲು ಯಾರದ್ದೂ ವಿರೋಧ ಇಲ್ಲ. ನಿಮ್ಮ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ನೀವು ಯಾರ ವಿರುದ್ಧ ಕಾಲ್ನಡಿಗೆ ಮಾಡುತ್ತೀರಿ? ಯಾರ ವಿರುದ್ಧ ನೀವು ಪ್ರತಿಭಟನೆಗಳನ್ನು ಮಾಡುತ್ತೀರಿ? ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಈ ವಿಚಾರವನ್ನು ಸ್ಪಷ್ಟಪಡಿಸಬೇಕು. ಮಳೆ-ನೆರೆ ಹಾನಿಯಾಗಿ ಎಷ್ಟು ದಿನ ಆಯಿತು? ಇವತ್ತು ನೆರೆಪೀಡಿತ ಪ್ರದೇಶಗಳಿಗೆ ಹೋಗುತ್ತಿರುವುದು ಒಂದು ನಾಟಕವಾಗಿದೆ.

ಪೂರ್ವನಿಯೋಜಿತವಾಗಿಯೇ ಸಿದ್ದರಾಮಯ್ಯ ಓಡಾಡುತ್ತಿದ್ದಾರೆ. ಮೊಟ್ಟೆ ಎಸೆದವನೇ ತನ್ನನ್ನು ಕಾಂಗ್ರೆಸ್‌ ಕಾರ್ಯಕರ್ತ ಎಂದು ಹೇಳಿಕೆ ಕೊಟ್ಟಿದ್ದಾನೆ. ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧವೇ ಕಾಲ್ನಡಿಗೆ ಮಾಡುತ್ತಾರೆ ಎಂದರೆ ಇದು ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದರು.

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.