ಶಿಕ್ಷಣ ಸಾಮಾಜಿಕ ಪ್ರಜ್ಞೆಯನ್ನು ಮೂಡಿಸುತ್ತದೆ: ಡಾ. ಕೊಟ್ಟೂರು ಮಹಾಸ್ವಾಮಿ


Team Udayavani, Aug 22, 2022, 2:22 PM IST

10

ಗಂಗಾವತಿ: ಶಿಕ್ಷಣವು ಸಾಮಾಜಿಕ ಪ್ರಜ್ಞೆಯನ್ನು ಮೂಡಿಸಿ ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಲು ನೆರವಾಗುತ್ತದೆ ಎಂದು ಕಲ್ಮಠದ ಡಾ. ಕೊಟ್ಟೂರು ಮಹಾಸ್ವಾಮಿಗಳು ಹೇಳಿದರು.

ಅವರು ನಗರದ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಚನ್ನಬಸವಸ್ವಾಮಿ ಮಹಿಳಾ ಮಹಾವಿದ್ಯಾಲಯದಲ್ಲಿ ವಾರ್ಷಿಕ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಜ್ಞಾನ ಸಶಕ್ತವಾದದ್ದು ಅದು ಕೊಡುವ ಬಲದಿಂದ ವ್ಯಷ್ಟಿ ಹಾಗೂ ಸಮಷ್ಟಿಯ ಅಜ್ಞಾನದ ತಮಂಧತೆಯನ್ನು ದೂರ ಮಾಡಿ ವಿವೇಕದ ಬೆಳಕನ್ನು ಮೂಡಿಸಬಹುದು. ಜ್ಞಾನದ ಬೆಳಕಲ್ಲಿ ಸಾಗಿದಾಗ ಲೋಕ ಸುಜ್ಞಾನಗೊಳ್ಳುತ್ತದೆ. ವಿದ್ಯಾರ್ಥಿನಿಯರು ಪದವಿಯೊಂದಿಗೆ ತಮ್ಮ ಜ್ಞಾನವನ್ನು ವಿವೇಕವನ್ನು ಉದ್ದೀಪಿಸಿಕೊಂಡು ಸಮಾಜಕ್ಕೆ ಬೆಳಕಾಗಬೇಕು ಎಂದರು.

ಕೇಂದ್ರ ಯುವಸಾಹಿತ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ವೀರಣ್ಣ ಮಡಿವಾಳರ ಮಾತನಾಡಿ, ವಿದ್ಯಾರ್ಥಿನಿಯರು ಪರಿಶ್ರಮದಿಂದ ಓದಿದರೇ ಖಂಡಿತ ಯಶಸ್ಸು ಪಡೆಯಬಹುದು.ಸಮಾಜದಲ್ಲಿ ಅನೇಕ ವಿದ್ಯಾರ್ಥಿಗಳು ಕಡುಬಡತನದಲ್ಲಿಯೇ ಓದಿ ದೊಡ್ಡ ದೊಡ್ಡ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಾಕಷ್ಟು ಉದಾಹರಣೆಗಳಿವೆ.  ಕಷ್ಟಗಳಿಗೆ ಕೊರಗದೆ ಛಲದಿಂದ ಮುನ್ನುಗ್ಗಿದಾಗ ಮಾತ್ರ ಸಾಧನೆ ನಮ್ಮದಾಗುತ್ತದೆ. ಪದವಿಯೊಂದಿಗೆ ಸಂಸ್ಕಾರ ಬೆಳಸಿಕೊಳ್ಳಿ ಎಂದರು.

ಇದೇ ಸಂದರ್ಭದಲ್ಲಿ ಬಿ.ಎ ಮತ್ತು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ  ಬಿಳ್ಕೋಡುಗೆ ಮಾಡಿ ಹರಸಲಾಯಿತು. ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಪ್ರಾಚಾರ್ಯ ಡಾ. ಶರಣಬಸಪ್ಪ ಕೋಲ್ಕಾರ ಪ್ರಾಸ್ತಾವಿಕವಾಗಿ ಮಾತನಾಡಿ ಕಲ್ಮಠ ಮಹಿಳಾ ಕಾಲೇಜು ಮಹಿಳಾ ಉನ್ನತ ಶಿಕ್ಷಣಕ್ಕೆ ಆದರ್ಶದ ನೆಲೆಯಾಗಿದೆ. ಕಾಲೇಜಿನಲ್ಲಿ ಓದಿದ ನೂರಾರು ವಿದ್ಯಾರ್ಥಿನಿಯರು ಇಂದು ದೇಶ, ವಿದೇಶಗಳಲ್ಲಿ ಬದುಕು ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಸರ್ವತೋಮುಖ ವಿಕಾಸಕ್ಕೆ ಪೂರಕವಾದ ಶೈಕ್ಷಣಿಕ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲಾಗುತ್ತದೆ ಎಂದರು.

ಸಂಸ್ಥೆಯ ಉಪಾಧ್ಯಕ್ಷ ಕೆ. ಚನ್ನಬಸಯ್ಯಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶರಣೇಗೌಡ ಮಾಲೀಪಾಟೀಲ ಕಾಲೇಜು ಧ್ವಜಾರೋಹಣ ನೆರವೇರಿಸಿದರು. ವೇದಿಕೆಯಲ್ಲಿ ಸಹಕಾರ್ಯದರ್ಶಿ ಹೆಚ್.ಎಂ.ಮಂಜುನಾಥ ವಕೀಲರು, ಸದಸ್ಯರಾದ ಹೊಸಳ್ಳಿ ದೊಡ್ಡರಾಮಲಿಂಗಪ್ಪ .ವಿದ್ಯಾರ್ಥಿನಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ, ಸಹಕಾರ್ಯದರ್ಶಿ ಸುಷ್ಮಾ ಉಪಸ್ಥಿತರಿದ್ದರು. ಅಧ್ಯಾಪಕರಾದ ನಂದಿನಿ ಸಿದ್ದಾಪುರ, ಡಾ.ಶಾರದಾ ಪಾಟೀಲ, ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್‌ ಸಿಬ್ಬಂದಿ

ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್‌ ಸಿಬ್ಬಂದಿ

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.