ಬಂಟ್ವಾಳ : ಹೊಂಡ ತಪ್ಪಿಸಲು ಹಠಾತ್ ಬ್ರೇಕ್ ! ಬಸ್ಸಿನೊಳಗಡೆ ಬಿದ್ದ ಪ್ರಯಾಣಿಕ
Team Udayavani, Aug 22, 2022, 2:54 PM IST
ಬಂಟ್ವಾಳ : ಹೆದ್ದಾರಿಯಲ್ಲಿನ ಹೊಂಡ ತಪ್ಪಿಸುವ ಭರದಲ್ಲಿ ಕೆಎಸ್ಆರ್ಟಿಸಿ ಬಸ್ಸಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಪ್ರಯಾಣಿಕನೋರ್ವ ಬಸ್ಸಿನ ಒಳಭಾಗದಲ್ಲೇ ಬಿದ್ದು ಗಾಯಗೊಂಡ ಘಟನೆ ಆ. 17ರಂದು ಕಲ್ಲಡ್ಕದಲ್ಲಿ ನಡೆದಿದೆ.
ಪಾಣೆಮಂಗಳೂರು ಉಪ್ಪು ಗುಡ್ಡೆ ನಿವಾಸಿ ಆರ್. ವಿಜಯ ಕುಮಾರ್ ಗಾಯಗೊಂಡ ಪ್ರಯಾಣಿಕರಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಅವರು ಮಂಗಳೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಬಸ್ಸಿನ ಹಿಂಬದಿ ಸೀಟಿನಲ್ಲಿ ಮೊಬೈಲಿನಲ್ಲಿ ಮಾತನಾಡುತ್ತಾ ಕುಳಿತ್ತಿದ್ದರು. ಬಸ್ಸು ಕಲ್ಲಡ್ಕ ತಲುಪುತ್ತಿದ್ದಂತೆ ಹೆದ್ದಾರಿ ಕಾಮಗಾರಿಯ ಹೊಂಡ ತಪ್ಪಿಸುವ ಭರದಲ್ಲಿ ಚಾಲಕ ಬ್ರೇಕ್ ಹಾಕಿದ್ದಾರೆ. ಈ ವೇಳೆ ವಿಜಯ ಕುಮಾರ್ ಅವರು ಮೇಲಕ್ಕೆ ಹಾರಿ ಬಿದ್ದಿದ್ದು, ಘಟನೆಯಲ್ಲಿ ಅವರ ಸೊಂಟಕ್ಕೆ ಗಾಯವಾಗಿದೆ. ಬಸ್ಸಿನ ಚಾಲಕ ಅಬ್ದುಲ್ ಅವರ ವಿರುದ್ಧ ಪ್ರಯಾಣಿಕ ದೂರು ನೀಡಿದ್ದು, ದುಡುಕುತನ, ನಿರ್ಲಕ್ಷದಿಂದ ಹೀಗಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಪ್ರತ್ಯೇಕ ಪ್ರಕರಣ : ಗಾಂಜಾ ಸೇವಿಸುತ್ತಿದ್ದ 9 ಮಂದಿ ಪೊಲೀಸರ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.