ಯುನಿಟಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಉದ್ಘಾಟನೆ
ಜಿಮ್ಗಿಂತ ಜಮೀನಿಗೆ ಹೋಗುವವರು ಹೆಚ್ಚು ಆರೋಗ್ಯವಂತರು: ಅಭಿನವ ಗವಿಸಿದ್ದೇಶ್ವರ ಶ್ರೀ
Team Udayavani, Aug 22, 2022, 2:53 PM IST
ಧಾರವಾಡ: ಮಾನಸಿಕ ಸಂತೋಷವೇ ಸುಖದ ಮೂಲವಾಗಿದ್ದು, ಮನುಷ್ಯ ಆರೋಗ್ಯದಿಂದ ಇದ್ದಾಗ ಮಾತ್ರ ಜಗತ್ತಿನ ಎಲ್ಲಾ ಸುಖಗಳನ್ನು ಅನುಭವಿಸಲು ಸಾಧ್ಯ ಎಂದು ಕೊಪ್ಪಳ ಗವಿಸಿದ್ದೇಶ್ವರ ಸಂಸ್ಥಾನ ಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ನಗರದ ರಪಾಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಯುನಿಟಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ರೋಗ ರುಜಿನಗಳು ಮನುಷ್ಯನಿಗೆ ಸಹಜ. ರೋಗ ಬಂದ ನಂತರ ವೈದ್ಯರನ್ನು ಕಾಣುವುದು ಇದ್ದೇ ಇರುತ್ತದೆ. ಆದರೆ ರೋಗವೇ ಬರದಂತೆ ಬದುಕು ನಡೆಸುವುದನ್ನು ಇಂದು ಎಲ್ಲರೂ ಕಲಿಯಬೇಕು. ಮುನ್ನೆಚ್ಚರಿಕೆಯಿಂದಲೇ ಆರೋಗ್ಯ ರಕ್ಷಿಸಿಕೊಳ್ಳುವುದಕ್ಕೆ ಒತ್ತು ನೀಡಬೇಕು. ಅಧಿಕಾರ, ಸಂಪತ್ತು ಮತ್ತು ಪ್ರಸಿದ್ಧಿಯಿಂದ ಬದುಕು ಸಂಪೂರ್ಣವಾಗದು. ನಿರೋಗಿ ಕಾಯದಿಂದಲೇ ನಿಜವಾದ ಸುಖ ಸಾಧ್ಯ. ಋಷಿಮುನಿಗಳು ಮತ್ತು ಶರಣರು ಬಹಳ ಹಿಂದೆಯೇ ಆರೋಗ್ಯದ ಪರಿಕಲ್ಪನೆ ಕೊಟ್ಟಿದ್ದಾರೆ. ಮನಸ್ಸಿನಿಂದ ಸದೃಢ ಮತ್ತು ದೈಹಿಕವಾಗಿ ಕಟ್ಟುಮಸ್ತಾದವನು ಮಾತ್ರ ಆರೋಗ್ಯದಿಂದ ಇರಲು ಸಾಧ್ಯ ಎಂದರು. ಜಿಮ್ಗೆ ಹೋಗುವವರಿಗಿಂತಲೂ ಜಮೀನಿಗೆ ಹೋಗುವವರು ಹೆಚ್ಚು ಆರೋಗ್ಯದಿಂದ ಇದ್ದಾರೆ. ರೋಗಕ್ಕಿಂತ ಮುಖ್ಯವಾಗಿ ರೋಗಿಯನ್ನು ಚಿಕಿತ್ಸೆಗೆ ಒಳಪಡಿಸಬೇಕು. ವೈದ್ಯರು ರೋಗಿಗೆ ಮಾನಸಿಕ ಸ್ಥೈರ್ಯ ತುಂಬಬೇಕು. ಕಾಯ ಸದೃಢವಾಗಿರಬೇಕು, ಮನಸ್ಸು ಪ್ರಸನ್ನವಾಗಿರಬೇಕು. ಹೃದಯ ದ್ವೇಷದಿಂದ ಮುಕ್ತವಾಗಿದ್ದಾಗ ಮಾತ್ರ ನಿಜವಾದ ಆರೋಗ್ಯ ಸಾಧ್ಯ ಎಂದು ಹೇಳಿದರು.
ಬಡವರ ಸೇವೆಯಾಗಲಿ: ಆಸ್ಪತ್ರೆಗಳು ಮತ್ತು ವೈದ್ಯರು ಬಡವರಿಗೆ ಉತ್ತಮ ಆರೋಗ್ಯ ಕಲ್ಪಿಸುವುದಕ್ಕೆ ಶ್ರಮಿಸಬೇಕು. ದೇಹಕ್ಕೆ ಮಾತ್ರ ಶಸ್ತ್ರಚಿಕಿತ್ಸೆ ಮಾಡಿದರೆ ಸಾಲದು. ಮನಸ್ಸಿಗೂ ಇಂದು ಹೆಚ್ಚಿನ ಚಿಕಿತ್ಸೆಗಳು ಅಗತ್ಯವಿದೆ. ದೇಹ-ಮನಸ್ಸು ಸರಿಯಾಗಿರಲು ಸಜ್ಜನರ ಮಾತು ಮತ್ತು ಸರ್ಜನ್ರ ಮಾತುಗಳನ್ನು ಕೇಳಬೇಕು. ಯುಕ್ತವಾದ ಆಹಾರ, ನಿದ್ಧೆ ಮತ್ತು ಮನಸ್ಸಿನಿಂದ ಮಾತ್ರ ಆರೋಗ್ಯ ಸಾಧ್ಯ. ದುಡಿದು ಉಣ್ಣಬೇಕು. ಕಾಯಕದ ಬದುಕಿನಿಂದ ಮಾತ್ರ ನೆಮ್ಮದಿ ಸಾಧ್ಯ ಎಂದು ಸ್ವಾಮೀಜಿ ಹೇಳಿದರು.
ಪ್ರಾಸ್ತಾವಿಕ ಮಾತನಾಡಿದ ಡಾ| ಶ್ರೀಕಂಠ ರಾಮನಗೌಡರ, ಧಾರವಾಡ ನಗರ ಇಂದಿಗೂ ಒಂದು ಹಳ್ಳಿಯಂತೆ ಇದೆ. ಇಲ್ಲಿ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ನಾವೆಲ್ಲರೂ ಒಟ್ಟಾಗಿ ಯುನಿಟಿ ಆಸ್ಪತ್ರೆ ಆರಂಭಿಸಿದ್ದೇವೆ. ಉತ್ತಮ ಸೇವೆ ಒದಗಿಸುವುದಕ್ಕೆ ಅತ್ಯಾಧುನಿಕ ವೈದ್ಯಕೀಯ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ. ಇದರಿಂದ ಧಾರವಾಡದಲ್ಲಿಯೇ ಸಕಲ ಸೌಲಭ್ಯಗಳು ಲಭ್ಯವಾಗಲಿವೆ ಎಂದರು.
ಡಾ| ಜ್ಯೋತಿಪ್ರಕಾಶ ಸುಲ್ತಾನಪುರಿ ಸ್ವಾಗತಿಸಿದರು. ಮಾಯಾರಾಮನ್ ನಿರೂಪಿಸಿದರು. ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಮಾಜಿ ಶಾಸಕರಾದ ಸೀಮಾ ಮಸೂತಿ, ಎನ್. ಎಚ್. ಕೋನರಡ್ಡಿ ಹಾಗೂ ಇಸ್ಮಾಯಿಲ್ ತಮಟಗಾರ ಹಾಜರಿದ್ದರು.
ಹಿರಿಯ ವೈದ್ಯರಾದ ಡಾ| ಎಸ್.ಆರ್. ರಾಮನಗೌಡರ, ಡಾ| ಸುಧೀರ ಜಂಭಗಿ, ಡಾ| ಆದಿತ್ಯ ಪಾಂಡುರಂಗಿ, ಡಾ| ಮೊಹಮ್ಮದ ಶೇಖ್, ಡಾ| ಪ್ರಕಾಶ ರಾಮನಗೌಡರ, ಡಾ| ಅಮೃತ ಮಹಾಬಲಶೆಟ್ಟಿ, ಡಾ| ನೀಲಕಂಠ ಪಾಟೀಲ, ಡಾ| ಜಗದೀಶ ನಾಯಕ, ಡಾ| ಅಮೃತ ಗಲಗಲಿ, ಡಾ| ಪ್ರೀತಮ್ ಹುರಕಡ್ಲಿ, ಡಾ| ನವೀನ ಮಂಕಣಿ, ಡಾ| ಬಸವರಾಜ ಬಣಕಾರ ಸೇರಿದಂತೆ ನಗರದ ಹಿರಿಯ ವೈದ್ಯರು ಇದ್ದರು.
ಆಸ್ಪತ್ರೆಗೆ ಬರುವ ರೋಗಿಗಳ ಜೇಬಿನ ಮೇಲೆ ವೈದ್ಯರು ಕಣ್ಣು ಹಾಕಬಾರದು. ಜೇಬಿನ ಹಿಂದೆ ಇರುವ ಹೃದಯವನ್ನು ನೋಡಿ ಚಿಕಿತ್ಸೆ ನೀಡಬೇಕು. ಅಂದಾಗ ರೋಗಿಯೂ ಬದುಕುತ್ತಾನೆ, ವೈದ್ಯರೂ ಬದುಕುತ್ತಾರೆ. –ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ಗವಿಮಠ, ಕೊಪ್ಪಳ
ಉತ್ತಮ ಆರೋಗ್ಯಕ್ಕೆ ಆಸ್ಪತ್ರೆಗಳು ಅತ್ಯಗತ್ಯ. ಈ ನಿಟ್ಟಿನಲ್ಲಿ ಧಾರವಾಡದಲ್ಲಿ ಸಕಲ ಸೌಲಭ್ಯಗಳನ್ನು ಒಂದೇ ಛತ್ರದಡಿ ತರುವ ಪ್ರಯತ್ನ ಇದಾಗಿದೆ. ಇದರಿಂದ ತೀವ್ರ ಅನಾರೋಗ್ಯದಿಂದ ಬಳಲುವ ರೋಗಿಗಳು ಸ್ಥಳೀಯವಾಗಿ ಚಿಕಿತ್ಸೆ ಪಡೆಯಲು ಸಹಾಯವಾಗಲಿದೆ. –ಡಾ| ಆನಂದ ಪಾಂಡುರಂಗಿ ಹಿರಿಯ ಮನೋವೈದ್ಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.