![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-415x229.jpg)
ಭಾರತದ ಮೊದಲ ಹೈಡ್ರೋಜನ್ ಬಸ್ ಅನಾವರಣ; ಏನಿದು ಹೈಡ್ರೋಜನ್ ಬಸ್ಸು?
Team Udayavani, Aug 23, 2022, 9:30 AM IST
![ಭಾರತದ ಮೊದಲ ಹೈಡ್ರೋಜನ್ ಬಸ್ ಅನಾವರಣ; ಏನಿದು ಹೈಡ್ರೋಜನ್ ಬಸ್ಸು?](https://www.udayavani.com/wp-content/uploads/2022/08/BUS-7-620x378.jpg)
ಡೀಸೆಲ್, ಪೆಟ್ರೋಲ್ ಬಳಕೆಯ ಬದಲಾಗಿ ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆಗೆ ಬಂದಿವೆ. ಇದೀಗ ಅದಕ್ಕೂ ಒಂದು ಹೆಜ್ಜೆ ಮುಂದಕ್ಕೆ ಸಾಗಿ ಹೈಡ್ರೋಜನ್ ವಾಹನಗಳ ಆವಿಷ್ಕಾರ ಆರಂಭವಾಗಿದೆ. ಅದೇ ನಿಟ್ಟಿನಲ್ಲಿ ಮಹಾರಾಷ್ಟ್ರದ ಪುಣೆಯ ಕೆಪಿಐಟಿ ಸಂಸ್ಥೆ ಕೇಂದ್ರೀಯ ಕೈಗಾರಿಕಾ ಸಂಶೋಧನಾ ಮಂಡಳಿ (ಸಿಎಸ್ಐಆರ್) ಜತೆಗೂಡಿ ದೇಶದಲ್ಲಿಯೇ ಸಂಶೋಧನೆ ನಡೆಸಿ ಅಭಿವೃದ್ಧಿಪಡಿಸಿದ ಮೊದಲ ಹೈಡ್ರೋಜನ್ ಬಸ್ ಅನ್ನು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಜಿತೇಂದ್ರ ಸಿಂಗ್ ಅನಾವರಣಗೊಳಿಸಿದ್ದಾರೆ.
ಏನಿದು ಹೈಡ್ರೋಜನ್ ಬಸ್ಸು?
ಹೈಡ್ರೋಜನ್ ಬಸ್ಸನ್ನು ಒಂದು ರೀತಿಯಲ್ಲಿ ಎಲೆಕ್ಟ್ರಿಕ್ ಬಸ್ಸು ಎಂದೇ ಹೇಳಬಹುದು. ಏಕೆಂದರೆ ಇದೂ ಕೂಡ ಬ್ಯಾಟರಿ ಆಧಾರಿತವಾಗಿರುತ್ತದೆ. ಈ ಬಸ್ಸಿಗೆ ಹೈಡ್ರೋಜನ್ ಹಾಕಿದರೆ ಅದು ಆಮ್ಲಜನಕದ ಕಣಗಳೊಂದಿಗೆ ಸೇರಿಕೊಂಡು ವಿದ್ಯುತ್ ತಯಾರಿಸುತ್ತದೆ. ಇದರಿಂದಾಗಿ ಬಸ್ನಲ್ಲಿರುವ ಬ್ಯಾಟರಿ ಚಾರ್ಜ್ ಆಗುತ್ತದೆ.
ಹೇಗೆ ಕೆಲಸ ಮಾಡುತ್ತದೆ?
ಇಂಧನ ಕೋಶ (ಎಫ್ಸಿಇವಿ) ಮೂಲಕ ಈ ಬಸ್ ಕೆಲಸ ಮಾಡುತ್ತದೆ. ಹೈಡ್ರೋಜನ್ ಮತ್ತು ಗಾಳಿಯನ್ನು ಬಳಕೆ ಮಾಡಿ ವಿದ್ಯುತ್ ಉತ್ಪಾದಿಸುತ್ತದೆ. ಯಾವುದೇ ರೀತಿಯ ಹೊಗೆ ಹೊರಗೆ ಬರುವುದಿಲ್ಲ. ಇಲ್ಲಿ ವಿದ್ಯುತ್ ತಯಾರಾದಂತೆಯೇ ನೀರಿನ ಆವಿ ಮತ್ತು ಶಾಖ ಗಾಳಿ ಉತ್ಪತ್ತಿಯಾಗುತ್ತದೆ. ಇದರಿಂದ ಪರಿಸರಕ್ಕೆ ಯಾವುದೇ ಹಾನಿಯಿಲ್ಲ ಎನ್ನುವುದು ತಜ್ಞರ ಮಾತು.
ಡೀಸೆಲ್ಗಿಂತ ಉತ್ತಮ:
ಹೈಡ್ರೋಜನ್ ಗಾಡಿ ಬಳಕೆ ಮಾಡುವುದರಿಂದ ನಿಮಗೆ ಡೀಸೆಲ್ಗಿಂತ ಅತಿ ಕಡಿಮೆ ಖರ್ಚಿನಲ್ಲಿ ಪ್ರಯಾಣ ಮಾಡಬಹುದು.
ಬಂದಿದೆ ಹೈಡ್ರೋಜನ್ ಕಾರು:
ಹೈಡ್ರೋಜನ್ ಆಧಾರಿತ ಕಾರು ಈಗಾಗಲೇ ಅನಾವರಣಗೊಂಡಿದೆ. ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆಯು ಐಸಿಎಟಿ ಒಂದಿಗೆ ಸೇರಿಕೊಂಡು ತಯಾರಿಸಿರುವ “ಟೊಯೊಟಾ ಮಿರಾಯ್’ ಹೈಡ್ರೋಜನ್ ಕಾರನ್ನು ಮಾರ್ಚ್ ತಿಂಗಳಲ್ಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅನಾವರಣಗೊಳಿಸಿದ್ದರು.
ಟಾಪ್ ನ್ಯೂಸ್
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ](https://www.udayavani.com/wp-content/uploads/2024/07/3-8-150x90.jpg)
Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
![rahul gandhi](https://www.udayavani.com/wp-content/uploads/2024/07/rahul-8-150x83.jpg)
LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ
![terror attack on Army camp in Jammu and Kashmir’s Rajouri](https://www.udayavani.com/wp-content/uploads/2024/07/rajuori-150x83.jpg)
Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ
MUST WATCH
ಹೊಸ ಸೇರ್ಪಡೆ
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-150x83.jpg)
Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![7-yellapura](https://www.udayavani.com/wp-content/uploads/2024/07/7-yellapura-150x90.jpg)
Yellapura: ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ; ತಪ್ಪಿದ ಅನಾಹುತ
![belagavi](https://www.udayavani.com/wp-content/uploads/2024/07/belagavi-150x90.jpg)
Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.