ನಮ್ಮೆಲ್ಲರ ಕನಸಿನ ಭವನ ನಿರ್ಮಾಣವಾಗಲು ಎಲ್ಲರ ಸಹಕಾರ ಅಗತ್ಯ


Team Udayavani, Aug 23, 2022, 12:08 PM IST

ನಮ್ಮೆಲ್ಲರ ಕನಸಿನ ಭವನ ನಿರ್ಮಾಣವಾಗಲು ಎಲ್ಲರ ಸಹಕಾರ ಅಗತ್ಯ

ಮುಂಬಯಿ: ಸಂಘದ ಕಾರ್ಯಚಟು ವಟಿಕೆಗಳಲ್ಲಿ ಯುವ ಜನರು ಸಕ್ರಿಯರಾದರೆ ಸಂಘ ಉತ್ತಮ ರೀತಿಯಲ್ಲಿ  ಬೆಳೆಯಲು ಸಾಧ್ಯ. ತಮ್ಮಲ್ಲಿರುವ ಪ್ರತಿಭೆ ತೋರಿಸಲು ಸಂಘ ವೇದಿಕೆ ನೀಡುತ್ತ ಬಂದಿದೆ. ಕಳೆದ 35 ವರ್ಷಗಳಿಂದ ಸಮಾಜಪರ ಕಾರ್ಯಗಳೊಂದಿಗೆ ಕುಂದಾಪುರ ಬಿಲ್ಲವ ಸೇವಾ ಸಂಘ ಮುಂಬಯಿಯಲ್ಲಿ  ಪ್ರತಿಷ್ಠಿತ ಸಮುದಾಯದ ಸಂಘವಾಗಿ ಬೆಳೆದಿದೆ ಎನ್ನಲು ಸಂತೋಷವಾಗುತ್ತಿದೆ. ಆದಷ್ಟು ಬೇಗನೆ ನಮ್ಮೆಲ್ಲರ ಕನಸಿನ ಭವನ ನಿರ್ಮಾಣವಾಗು ವಂತೆ ಆಗಬೇಕು. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಅಧ್ಯಕ್ಷ ಸೂರ್ಯ ಎಸ್‌. ಪೂಜಾರಿ ತಿಳಿಸಿದರು.

ದಾದರ್‌ ಪೂರ್ವದ ಹಿಂದೂ ಕಾಲನಿಯ ಇಂಡಿಯನ್‌ ಎಜುಕೇಶನ್‌ ಸೊಸೈಟಿಯ ಸಭಾಗೃಹದಲ್ಲಿ  ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಇದರ 34ನೇ ವಾರ್ಷಿಕ ಮಹಾಸಭೆ ಹಾಗೂ ಬಳಿಕ ಜರಗಿದ ವಾರ್ಷಿಕೋತ್ಸವ, ಸಮ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದೆರಡು ವರ್ಷಗಳಿಂದ ಸಂಘವು ಬಹುದೊಡ್ಡ  ರೀತಿಯಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸದಿದ್ದರೂ ಸಮಾಜ ಬಾಂಧವರಿಗೆ ಸಹಾಯವಾಗುವಂತಹ ಅನೇಕ ಕಾರ್ಯಚಟುವಟಿಕೆಗಳನ್ನು ನಿರಂತರ ಮಾಡುತ್ತಾ ಬಂದಿದೆ ಎಂದರು.

ಸಮ್ಮಾನ ಸ್ವೀಕರಿಸಿದ ಮುಖ್ಯ ಅತಿಥಿ, ನ್ಯಾಯವಾದಿ ಶಾಕುಂತಲಾ ಆನಂದ್‌ ಪೂಜಾರಿ ಮಾತನಾಡಿ, ನಮ್ಮ ಸಂಸ್ಥೆ ಉತ್ತಮ ರೀತಿಯಲ್ಲಿ  ಬೆಳೆಯುತ್ತಿದ್ದು, ಸಂಘಕ್ಕೊಂದು ಭವನ ನಿರ್ಮಾಣದ ಅಗತ್ಯವಿದೆ. ಈ ನಿಟ್ಟಿನಲ್ಲಿ ಆಡಳಿತ ಸಮಿತಿ ಹಾಗೂ ಸಮಾಜದ ಮುಖಂಡರು ಶ್ರಮಿಸಬೇಕು. ಸಮಾಜದ ಎಲ್ಲರೂ ಸಹಕಾರ ನೀಡಬೇಕು ಎಂದರು.

ಗೌರವ ಅತಿಥಿಯಾಗಿದ್ದ ಉದ್ಯಮಿ, ಬಿಲ್ಲವ ಚೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರೀಸ್‌ನ ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ ಮಾತನಾಡಿ, ಸಂಘ-ಸಂಸ್ಥೆಗಳಿಗೆ ನಾವು ದೇಣಿಗೆ ನೀಡಿದರೆ ಸಮಾಜಪರ ಕಾರ್ಯಗಳಿಗೆ ಸಹಾಯವಾಗುತ್ತದೆ. ನಮ್ಮ ಸಂಸ್ಥೆಗೆ ನಮ್ಮದೇ ಆದ ಭವನ ನಿರ್ಮಿಸಿದರೆ ಮುಂದೆ ಅದರಿಂದ ಬರುವ ಉತ್ಪತ್ತಿಯು ಸಮಾಜ ಬಾಂಧವರ ಒಳಿತಿಗಾಗಿ ಉಪಯೋಗಿಸಬಹುದು. ಕುಂದಾಪುರ ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳ ನಿರಂತರ ಪರಿಶ್ರಮದಿಂದ ಈ ಸಂಸ್ಥೆ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಯುವಜನರು ಹಾಗೂ ಮಹಿಳೆಯರು ಹೆಚ್ಚು ಆಕರ್ಷಿತರಾಗಿ ನಮ್ಮ ಸಂಘದಲ್ಲಿ  ಕೆಲಸ ಮಾಡುತ್ತಿರುವುದನ್ನು ನೋಡುವಾಗ ಸಂತೋಷವಾಗುತ್ತಿದೆ. ಇದು ಒಂದು ಉತ್ತಮ ಬೆಳವಣಿಗೆ ಎಂದರು.

ಸಮ್ಮಾನ ಸ್ವೀಕರಿಸಿದ ಅತಿಥಿ, ಉದ್ಯಮಿ ತಿಮ್ಮಪ್ಪ ಸಿ. ಪೂಜಾರಿ ಬಂಗಲೆಮನೆ, ಸಾಗರ್‌ ಕೋ – ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ಬೈಂದೂರು ಇದರ ನಿರ್ದೇಶಕ ಕೇಶವ ಜೆ. ಪೂಜಾರಿ ಉಪ್ಪುಂದ, ಅರುಣ್‌ ಟೆಕ್ಸ್‌ಟೈಲ್ಸ್‌ನ ಮಾಲಕ ವಿಶ್ವನಾಥ ಪೂಜಾರಿ, ಮುಂಬಯಿ ಉದ್ಯಮಿ ಸುರೇಶ್‌ ಸಿ. ಪೂಜಾರಿ ಬಡಕೆರೆ ನಾವುಂದ, ಮುಂಬಯಿ ಉದ್ಯಮಿ ರಮೇಶ್‌ ಎ. ಬಿಲ್ಲವ, ಉದ್ಯಮಿ ಪರಮೇಶ್ವರಿ ಎನ್‌. ಪೂಜಾರಿ, ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಮಾಜಿ ಅಧ್ಯಕ್ಷರಾದ ಎನ್‌. ಜಿ. ಪೂಜಾರಿ ಹಾಗೂ ಎಸ್‌. ಕೆ. ಪೂಜಾರಿ ಶುಭ ಹಾರೈಸಿದರು. ಸಮಾರಂಭದಲ್ಲಿ  ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಯಿತು.

ಅತಿಥಿಗಳು ದೀಪಪ್ರಜ್ವಲಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೀತಾ ಪೂಜಾರಿ ಬೈಂದೂರು ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ನರಸಿಂಹ ಬಿಲ್ಲವ ಅತಿಥಿಗಳನ್ನು ಸ್ವಾಗತಿಸಿದರು, ಕಾರ್ಯದರ್ಶಿ ಅಶೋಕ್‌ ಎನ್‌. ಪೂಜಾರಿ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಿಸಿದರು.

ನ್ಯಾಯವಾದಿ ಶಾಕುಂತಲಾ ಆನಂದ್‌ ಪೂಜಾರಿ, ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರೀಸ್‌ನ ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ, ಅರುಣಾ ಟೆಕ್ಸ್‌ಟೈಲ್ಸ್‌ನ ವಿಶ್ವನಾಥ ಎ. ಪೂಜಾರಿ, ಉದ್ಯಮಿ ಸುರೇಶ್‌ ಸಿ. ಪೂಜಾರಿ ಬಡಕೆರೆ ನಾವುಂದ, ಮುಂಬಯಿ ಉದ್ಯಮಿ ಪರಮೇಶ್ವರ ಎನ್‌.ಪೂಜಾರಿ, ಮಾಜಿ ಅಧ್ಯಕ್ಷರಾದ ಎನ್‌. ಜಿ. ಪೂಜಾರಿ, ಎಸ್‌. ಕೆ. ಪೂಜಾರಿ ಅವರನ್ನು ಸಂಘದ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ ಹಾಗೂ ಸಮ್ಮಾನ ಪತ್ರದೊಂದಿಗೆ ಗೌರವಿಸಲಾಯಿತು.

ಸಮಿತಿ ಸದಸ್ಯ ಲಕ್ಷ್ಮಣ್‌ ಎಂ. ಪೂಜಾರಿ ಕೋಡೇರಿ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಶ್ರೀಧರ ವಿ. ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಲ್ಲಿಕಾ ಎಸ್‌. ಪೂಜಾರಿ, ಯುವ ಅಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷ ದೀಪ ವೈ. ಪೂಜಾರಿ, ಧಾರ್ಮಿಕ ಸಮಿತಿಯ ಕಾರ್ಯಾಧ್ಯಕ್ಷ ನಾಗರಾಜ್‌ ಎಂ. ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಸಮಾಜದ ಮಕ್ಕಳಿಂದ ಹಾಗೂ ಮಹಿಳೆಯರಿಂದ ವಿವಿಧ ಮನೋರಂಜನ ಕಾರ್ಯಕ್ರಮಗಳು ಜರಗಿದವು. ಸಮಿತಿಯ ಸರ್ವ ಸದಸ್ಯರು, ಪದಾಧಿಕಾರಿಗಳು, ಉಪ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

 

-ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.