ಮಣಿಪಾಲದಲ್ಲೊಂದು ಬೃಹತ್ ಗಾತ್ರದ ಸೊಳ್ಳೆ
Team Udayavani, Aug 23, 2022, 4:20 PM IST
ಮಣಿಪಾಲ: ಸಮುದಾಯ ವೈದ್ಯಕೀಯ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಯೋಗದೊಂದಿಗೆ ಸೋಮವಾರ ಕಲಾವಿದ ಶ್ರೀನಾಥ್ ಮಣಿಪಾಲ ಮತ್ತು ರವಿ ಹಿರೇಬೆಟ್ಟು ಅವರು ಮಾಹೆಯ ಇಂಟರ್ಯಾಕ್ಟ್ ಆವರಣದಲ್ಲಿ ಡೆಂಗ್ಯೂ, ಮಲೇರಿಯಾ, ಇನ್ನಿತರ ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಒಂದು ಬೃಹತ್ ಗಾತ್ರದ ಸೊಳ್ಳೆಯ ಕಲಾಕೃತಿಯನ್ನು ರಚಿಸಿದ್ದಾರೆ.
ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ| ಅಶ್ವಿನಿ ಕುಮಾರ್ ಕಲಾಕೃತಿಯನ್ನು ಅನಾವರಣಗೊಳಿಸಿ, ಸೊಳ್ಳೆ ಮಾನವ ಕುಲಕ್ಕೆ ಅತೀ ಅಪಾಯಕಾರಿ. ಇವುಗಳು ಹರಡುವ ರೋಗಗಳಿಂದ ವಿಶ್ವಾದ್ಯಂತ ಲಕ್ಷಾಂತರ ಜನರು ಬಲಿಯಾಗುತ್ತಿದ್ದಾರೆ. ಇವುಗಳು ಮಳೆಗಾಲದಲ್ಲಿ ಹರಡುವ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ 3ಡಿ ಕಲಾಕೃತಿಯನ್ನು ರಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.