ಮನೆ ಮಾಳಿಗೆಗೆ ತಾಗ್ತಿದೆ ವಿದ್ಯುತ್‌ ತಂತಿ!

ಅಪಾಯದ ಅಂಚಿನಲಿ ಕಡೇಕೊಪ್ಪ ಗ್ರಾಮಸ್ಥರು; ಜೆಸ್ಕಾಂ ಅಧಿಕಾರಿಗಳ ಜಾಣ ಕುರುಡು

Team Udayavani, Aug 23, 2022, 4:50 PM IST

21

ದೋಟಿಹಾಳ: ಜಿಲ್ಲೆಯಲ್ಲಿ ಒಂದು ವರ್ಷದಲ್ಲಿ ಸುಮಾರು 10ಕ್ಕೂ ಹೆಚ್ಚು ಜನ ವಿದ್ಯುತ್‌ ಅವಘಡದಿಂದ ಮೃತಪಟ್ಟಿದ್ದಾರೆ. “ಹರ್‌ ಘರ್‌ ತಿರಂಗಾ’ ಅಭಿಯಾನ ನಿಮಿತ್ತ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವ ವೇಳೆ ಹನುಮನಾಳದ ನಿವಾಸಿ ಜಗದೀಶ ಹಡಪದ(52) ಅವರು ಆ. 13ರಂದು ಧ್ವಜದ ಕಂಬ ಅಳವಡಿಸುವ ವೇಳೆ ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟಿದ್ದಾರೆ.

ಈ ಮಧ್ಯೆ ಸಮೀಪದ ಕಡೇಕೊಪ್ಪ ಗ್ರಾಮದಲ್ಲಿ ವಿದ್ಯುತ್‌ ಕಂಬದ ತಂತಿಗಳು ಮನೆಗಳ ಮೇಲೆ ಹಾಯ್ದು ಹೋಗಿದ್ದು, ಗ್ರಾಮಸ್ಥರು ನಿತ್ಯ ಅಪಾಯ ಮತ್ತು ಮಳೆ ಬಂದಾಗ ವಿದ್ಯುತ್‌ ಸ್ಪರ್ಶ ಆಗುವುದೆಂಬ ಭಯದ ನಡುವೆ ಜೀವನ ಸಾಗಿಸುತ್ತಿದ್ದಾರೆ.

ಗ್ರಾಮದಲ್ಲಿ ಜೆಸ್ಕಾಂ ಇಲಾಖೆಯವರು ವ್ಯವಸ್ಥಿತವಾಗಿ ವಿದ್ಯುತ್‌ ಕಂಬಗಳನ್ನು ಹಾಕಿಲ್ಲ. ಹೀಗಾಗಿ ಮುಖ್ಯರಸ್ತೆ ಸೇರಿದಂತೆ ಒಳ ರಸ್ತೆಗಳಲ್ಲಿ ವಿದ್ಯುತ್‌ ಕಂಬಗಳನ್ನು ಬಿಟ್ಟು ಮನೆಯ ಹಿಂಭಾಗ ಅಥವಾ ರಸ್ತೆ ಮಧ್ಯೆ ಇರುವುದು ಕಂಡುಬರುತ್ತದೆ. ವಿದ್ಯುತ್‌ ತಂತಿಗಳು ಮನೆ ಮೇಲೆ ಹಾಯ್ದು ಹೋಗಿವೆ. ಸದ್ಯ ಜೆಸ್ಕಾಂ ಸಿಬ್ಬಂದಿ ನಿರ್ವಹಣೆ ಇಲ್ಲದೇ ತಂತಿಗಳು ಮನೆ ಮಾಳಿಗೆ (ಚಾವಣಿ) ತಾಗುತ್ತಿವೆ. ಹಲವು ಸಲ ಗಾಳಿಗೆ ತಂತಿ ಅಲುಗಾಡಿ ಬೆಂಕಿ ಕಿಡಿ ಕಾಣಿಸಿಕೊಂಡಿದ್ದುಂಟು. ಆಗ ಮನೆಯಲ್ಲಿದ್ದ ಜನರು ಭಯಭೀತರಾಗಿ ಹೊರಗಡೆ ಬರುತ್ತಾರೆ. ಗ್ರಾಮದ ಯುವಕರು, ಮಹಿಳೆಯರು ಅಪಾಯಕ್ಕೆ ಸಿಲುಕಿದ ಉದಾಹರಣೆಗಳಿವೆ ಎಂದು ಗ್ರಾಮಸ್ಥರು ದೂರುತ್ತಾರೆ.

ಕಣ್ಣು ಮುಚ್ಚಿ ಕುಳಿತ ಜೆಸ್ಕಾಂ: ಗ್ರಾಮಸ್ಥರು ಗ್ರಾಪಂ ಹಾಗೂ ಜನಪ್ರತಿನಿ ಧಿಗಳಿಗೆ ಸಾಕಷ್ಟು ಸಲ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನೂ ಕುಷ್ಟಗಿಯ ಜೆಸ್ಕಾಂ ಕಚೇರಿಗೆ ತೆರಳಿ ಅಧಿ ಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಹೀಗಾಗಿ ಅನಿವಾರ್ಯವಾಗಿ ತಾವೇ ತಂತಿಗಳಿಗೆ ಪ್ಲಾಸ್ಟಿಕ್‌ ಪೈಪ್‌ ಅಥವಾ ಕಟ್ಟಿಗೆಗಳಿಂದ ರಕ್ಷಣೆ ಮಾಡಿಕೊಂಡಿದ್ದೇವೆ ಎಂದು ಗ್ರಾಮದ ಮಂಗಳಪ್ಪ ವಾಲಿಕಾರ, ಚಂದನಗೌಡ ಪೊಲೀಸಪಾಟೀಲ್‌ ಸೇರಿದಂತೆ ಇತರರು ವಿವರಿಸಿದರು.

ಗ್ರಾಪಂ ವಾದ: ಗ್ರಾಮದಲ್ಲಿ ವಿದ್ಯುತ್‌ ಕಂಬಗಳಿಗೆ ಜೋಡಿಸಲಾದ ತಂತಿಗಳ ಸಾಲು ಕೆಳಗೆಯೇ ಕೆಲ ಗ್ರಾಮಸ್ಥರು ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಹೀಗಾಗಿ ಅಂತಹ ಮನೆಗಳಲ್ಲಿ ವಾಸಿಸುವವರಿಗೆ ಅಪಾಯ ತಗಲುವುದು ಖಂಡಿತ. ಈ ಕುರಿತು ಬಹುದಿನಗಳಿಂದ ಕುಷ್ಟಗಿಯ ಜೆಸ್ಕಾಂ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದಿಸಿಲ್ಲ. ಜೊತೆಗೆ ಜನಪ್ರತಿನಿ ಧಿಗಳಿಗೆ ಹಲವು ಬಾರಿ ಇದರ ಬಗ್ಗೆ ಮನವರಿಕೆ ಮಾಡಿಕೊಟ್ಟರೂ ಪ್ರಯೋಜನವಾಗಿಲ್ಲ. ಏನು ಮಾಡದ ಸ್ಥಿತಿ ಪಂಚಾಯಿತಿಗೆ ಎದುರಾಗಿದೆ ಎಂದು ಗ್ರಾಪಂ ಸದಸ್ಯರು ತಿಳಿಸಿದ್ದಾರೆ.

ಒಂದು ವರ್ಷದಿಂದ ಜಿಲ್ಲೆಯ ಅನೇಕ ಕಡೆಗಳಲ್ಲಿ ವಿದ್ಯುತ್‌ ಅವಘಡದಿಂದ ಅನಾಹುತಗಳು ಸಂಭವಿಸಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಜೆಸ್ಕಾಂ ಇಲಾಖೆಯವರು ಕೂಡಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂಬುದು ಸಾರ್ವಜನಿಕರ ಕಳಕಳಿಯಾಗಿದೆ.

ಕಡೇಕೊಪ್ಪ ಗ್ರಾಮದಲ್ಲಿ ವಿದ್ಯುತ್‌ ಕಂಬಗಳನ್ನು ಹಾಗೂ ಟ್ರಾನ್ಸಫರ್ಮರ್‌ (ವಿದ್ಯುತ್‌ ಪರಿವರ್ತಕ) ಬೇರೆಕಡೆಗೆ ಸ್ಥಳಾಂತರಿಸಬೇಕೆಂದು ಜೆಸ್ಕಾಂ ಇಲಾಖೆಗೆ ಈಗಾಗಲೇ 2-3ಪತ್ರಗಳನ್ನು ಬರೆಯಲಾಗಿದೆ. ಅವರಿಂದ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಅಮೀನಸಾಬ್‌ ಅಲಂದಾರ, ಕೇಸೂರ ಗ್ರಾಪಂ ಪಿಡಿಒ

ಕಡೇಕೊಪ್ಪ ಗ್ರಾಮದಲ್ಲಿ ಮನೆಗಳ ಮೇಲೆ ಹಾಯ್ದು ಹೋಗಿರುವ ವಿದ್ಯುತ್‌ ಕಂಬದ ತಂತಿ ಸರಿಪಡಿಸಲು ಒಂದು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಅನುಮೊದನೆಗೆ ಗಂಗಾವತಿ ಡಿವಿಜನ್‌ ಕಚೇರಿಗೆ ಕಳುಸಿಕೊಡಲಾಗಿದೆ. ಅಲ್ಲಿಂದ ಅನುಮೋದನೆಯಾಗಿ ಬಂದ ಕೂಡಲೇ ಕಂಬ, ತಂತಿಗಳನ್ನು ಸ್ಥಳಾಂತರಿಸುತ್ತೇವೆ. –ದವಲಸಾಬ್‌ ನದಾಫ್‌, ಎಇಇ ಕುಷ್ಟಗಿ

-ಮಲ್ಲಿಕಾರ್ಜುನ ಮೆದಿಕೇರಿ

 

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.