ಇಸ್ಪೀಟ್ ಅಡ್ಡೆಯ ಮೇಲೆ ದಾಳಿ: ಪೊಲೀಸರ ಮೇಲೆ ಮಹಿಳೆಯರ ಅವಾಚ್ಯ ನಿಂದನೆ
ಕೊರಟಗೆರೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನ
Team Udayavani, Aug 23, 2022, 4:53 PM IST
ಕೊರಟಗೆರೆ: ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆ ಗ್ರಾಮಸ್ಥರು ಹಾಗೂ ಮಹಿಳೆಯರು ಅವಾಚ್ಯ ಶಬ್ದಗಳಿಂದ ನಿಂದಿಸಿರದಲ್ಲದೆ ದಾಳಿಯ ವಿರುದ್ಧ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದವರ ವಿರುದ್ಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ಎಲೆರಾಂಪುರ ಗ್ರಾಮದಲ್ಲಿ ಊರಿನ ಮಧ್ಯ ಭಾಗದಲ್ಲಿ ಅದರಲ್ಲೂ ಆಸ್ಪತ್ರೆಯ ಹಿಂಭಾಗ ಇಸ್ಪೀಟ್ ಆಡುತ್ತಿರುವ ಮಾಹಿತಿ ಅರಿತು ಕೋಳಾಲ ಪೊಲೀಸ್ ತಂಡ ದಾಳಿ ನಡೆಸಿ ಆರು ಜನ ಆರೋಪಿಗಳು ಸೇರಿದಂತೆ ಪಣಕ್ಕಿಟ್ಟಿದ್ದ 15000 ಹಣ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಅಲ್ಲಿನ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಕೆಲವು ಮಹಿಳೆಯರು ಪೊಲೀಸರ ವಿರುದ್ಧ ಹರಿ ಹಾಯ್ದು, ಹಲ್ಲೆಗೆ ಯತ್ನಿಸಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ನಿಖರ ಮಾಹಿತಿ ಮೇರೆಗೆ ಕೋಳಾಲ ಪಿಎಸ್ಐ ಮಹಾಲಕ್ಷ್ಮಮ್ಮ ಅವರ ತಂಡ ದಾಳಿ ನಡೆಸಿದ ಸಂದರ್ಭದಲ್ಲಿ 6 ಜನ ಆರೋಪಿಗಳನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಅಲ್ಲಿನ ಮುಖಂಡ ಹನುಮಂತರಾಜು ಹಾಗೂ ರುದ್ರೇಶ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಅವರ ಹೆಂಡತಿ ಮಕ್ಕಳು ಸೇರಿದಂತೆ ಹಲವು ಮಹಿಳೆಯರು ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಹಲ್ಲೆಗೆ ಮುಂದಾದಾಗ ಮೇಲಿನ ಅಧಿಕಾರಿಗಳಿಗೆ ಮಾಹಿತಿ ರವಾನಿಸಿ ಸಿಪಿಐ ಕೆ ಸುರೇಶ್ ಸ್ಥಳಕ್ಕೆ ಧಾವಿಸಿ ಡಿವೈಎಸ್ಪಿ ವೆಂಕಟೇಶ್ ನಾಯ್ಡು ಅವರ ಮಾರ್ಗದರ್ಶನದಂತೆ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಕೆ.ಸುರೇಶ್ ಹಾಗೂ ಪಿಎಸ್ಐ ಮಹಾಲಕ್ಷ್ಮಮ್ಮ ಕೇಸು ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ ಎನ್ನಲಾಗಿದೆ.
ಆರೋಪಿ ಭೀಮೇಶ್ ಹಾಗೂ ಇತರ ಐವರನ್ನು 4 ಬೈಕ್ ಗಳ ಸಮೇತ ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ
Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು
BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.