![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 23, 2022, 5:25 PM IST
ಮುಂಬಯಿ: ಇತ್ತೀಚಿಗೆ ಬಾಲಿವುಡ್ ಸಿನಿಮಾಗಳು ಸೋಲುತ್ತಿವೆ. ಸ್ಟಾರ್ ನಟರ ಚಿತ್ರಗಳಿಗೆ ಬಾಯ್ಕಾಟ್ ಬಿಸಿ ಜೋರಾಗಿ ತಟ್ಟುತ್ತಿದೆ. ಚಿತ್ರ ಬಿಡುಗಡೆಯ ಹೊಸ್ತಿಲಿನಲ್ಲೇ ಕೆಲ ಸ್ಟಾರ್ ಗಳು ನೀಡುವ ಹೇಳಿಕೆ ಅವರ ಮುಂದಿನ ಚಿತ್ರಕ್ಕೆ ದೊಡ್ಡ ಹೊಡೆತ ನೀಡುತ್ತಿದೆ. ಇದೀಗ ಈ ಸಾಲಿಗೆ ನಟಿ ಆಲಿಯಾ ಭಟ್ ಸೇರಿದ್ದಾರೆ.
ಆಮಿರ್ ಖಾನ್ – ಕರೀನಾ ಕಪೂರ್ ಅವರ ʼಲಾಲ್ ಸಿಂಗ್ ಚಡ್ಡಾʼ ಚಿತ್ರ ಬಾಯ್ಕಾಟ್ ಅಭಿಯಾನಕ್ಕೆ ತುತ್ತಾಯಿತು. ಚಿತ್ರ ಬಿಡುಗಡೆಗೆ ಕೆಲವೇ ದಿನಗಳಿರುವಾಗ ಕರೀನಾ ಕಪೂರ್ ಅವರ ಒಂದು ಹೇಳಿಕೆ ಕೂಡ ಚಿತ್ರದ ಕಲೆಕ್ಷನ್ ಮೇಲೆ ಪ್ರಭಾವ ಬೀರಿತ್ತು. ಈಗ ಅದೇ ಮಾದರಿಯಲ್ಲಿ ನಟಿ ಆಲಿಯಾ ಭಟ್ ಹೇಳಿಕೆಯೊಂದನ್ನು ನೀಡಿದ್ದು, ಆಲಿಯಾ ವಿರುದ್ಧ ಸಿಕ್ಕಾಪಟ್ಟೆ ಕಾಮೆಂಟ್ಸ್ ಕೇಳಿ ಬರುತ್ತಿದೆ.
ಇತ್ತೀಚೆಗೆ “ಮಿಡ್ ಡೇ” ಗೆ ನೀಡಿದ ಸಂದರ್ಶನವೊಂದರಲ್ಲಿ ಆಲಿಯಾ ನೆಪೋಟಿಸಂ ಬಗ್ಗೆ ಮಾತಾನಾಡುತ್ತಾ “ನೀವು ನನ್ನನ್ನು ಇಷ್ಟಪಡದ್ದಿದರೆ, ನನ್ನನ್ನು ನೋಡಬೇಡಿ, ನಾನು ಅದಕ್ಕೇನು ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ. ಸದ್ಯ ಈ ಮಾತು ವೈರಲ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಟ್ರೋಲರ್ ಗಳಿಗೆ ಆಹಾರವಾಗಿದೆ.
ನೆಟ್ಟಿಗರು ಆಲಿಯಾರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರ ವಿರುದ್ಧ ಬಾಯ್ಕಾಟ್ ಅಭಿಯಾನ ಶುರು ಮಾಡುವ ಕುರಿತು ಚರ್ಚೆಗಳು ನಡೆದಿದೆ. ಅವರ ಮುಂದಿನ “ಬ್ರಹ್ಮಾಸ್ತ್ರ” ಚಿತ್ರ ಯಾರೂ ನೋಡಬೇಡಿ, #BoycottBrahmastra ಎಂದು ಟ್ವೀಟ್ ಮಾಡಿದ್ದಾರೆ.
ಪ್ಯಾನ್ ಇಂಡಿಯಾ ಸಿನಿಮಾವಾಗಿರುವ “ಬ್ರಹ್ಮಾಸ್ತ್ರ” ಸೆ.9 ರಂದು ರಿಲೀಸ್ ಆಗಲಿದೆ. ರಣ್ಬೀರ್ ಕಪೂರ್, ಅಮಿತಾಭ್ ಬಚ್ಚನ್, ನಾಗಾರ್ಜುನ,ಮೌನಿ ರಾಯ್ ಮುಂತಾದವರು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Alia Bhatt : If u don’t like me don’t watch me I can’t help it
We will all fulfill her wish too
Let’s make #Brahmastra 500Cr FLOPBUSTER
We are just tickets buyers for them. They only need your money not you. #BoycottBrahmastra #BoycottBollywood pic.twitter.com/IJ8u9NWxXy
— Nitika Singh??? (@itsNitikaSingh) August 22, 2022
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.