ಕುಂದಾಪುರ ಫ್ಲೈ ಓವರ್ ಮೇಲೆ ವಿದ್ಯುತ್ ಶಾಕ್ ಭೀತಿ
ಬೀದಿದೀಪ ಸಂಪರ್ಕ ವೇಳೆ ಕಳಪೆ ಕಾಮಗಾರಿ ಆವಾಂತರ
Team Udayavani, Aug 25, 2022, 10:53 AM IST
ಕುಂದಾಪುರ: ಇಲ್ಲಿನ ಶಾಸ್ತ್ರಿ ಸರ್ಕಲ್ ಬಳಿಯ ಮೇಲ್ಭಾಗದ ಫ್ಲೈ ಓವರ್ ನಲ್ಲಿ ಹೆದ್ದಾರಿ ಬೀದಿದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ಪ್ರವಹಿಸಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಳಿಕ ಮೆಸ್ಕಾಂ ಇಲಾಖೆಯವರು ಭೇಟಿ ನೀಡಿ, ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಬೀದಿ ದೀಪಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
ಮಳೆಯ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಇಬ್ಬರು ವಾಹನ ಸವಾರರು ಫ್ಲೈ ಓವರ್ ಮೇಲೆ ನಿಂತಿದ್ದ ವೇಳೆ ತಡೆಗೋಡೆಯಲ್ಲಿ ವಿದ್ಯುತ್ ಶಾಕ್ ಹೊಡೆದ ಅನುಭವವಾಗಿದೆ. ಕೂಡಲೇ ಅವರ ಬಳಿಯಿದ್ದ ಟೆಸ್ಟರ್ ಮೂಲಕ ಪರೀಕ್ಷೆ ಮಾಡಿದಾಗ ಮೇಲ್ಸೇತುವೆಯ ತಡೆಗೋಡೆ ಮೇಲೆ ವಿದ್ಯುತ್ ಪ್ರವಹಿಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಮಾಡಲಾದ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿ, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು.
ಕಾರಣವೇನು? ಚತುಷ್ಪಥ ಕಾಮಗಾರಿ ಗುತ್ತಿಗೆ ಪಡೆದ ನವಯುಗ ಕಂಪೆನಿಯು ಕೆಲವು ತಿಂಗಳ ಹಿಂದೆ ಬೀದಿದೀಪಗಳ ಸಂಪರ್ಕ ಕಲ್ಪಿಸಿತ್ತು. ವಿದ್ಯುತ್ ಸಂಪರ್ಕ ಕಲ್ಪಿಸುವ ವೇಳೆ ವಯರಿಂಗ್ನಲ್ಲಿ ಉಂಟಾದ ಲೋಪದಿಂದಾಗಿ ಈ ಆವಾಂತರವಾಗಿದ್ದು, ಬೀದಿ ದೀಪದ ಕಂಬಗಳಿಗೆ ಅಳವಡಿಸಿದ ವಯರಿಂಗ್ ತಡೆಗೋಡೆಯ ಬೀಮ್ಗೆ ತಾಗಿಕೊಂಡಿದ್ದು, ಇದರಿಂದ ವಿದ್ಯುತ್ ಪ್ರವಹಿಸುತ್ತಿದೆ ಎನ್ನುವುದಾಗಿ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೂಡಲೇ ಕುಂದಾಪುರ ಮೆಸ್ಕಾಂ ಇಲಾಖೆಯವರು ರಾಷ್ಟ್ರೀಯ ಹೆದ್ದಾರಿ ದಾರಿದೀಪದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಸರಿಪಡಿಸಲು ಸೂಚನೆ ಹೆದ್ದಾರಿ ಬೀದಿ ದೀಪದ ನಿರ್ವಹಣೆ ನವಯುಗ ಕಂಪೆನಿ ಮಾಡಬೇಕಿರುವುದರಿಂದ ಅವರಿಗೆ ಸೂಚನೆ ನೀಡಲಾಗಿದ್ದು, ತತ್ಕ್ಷಣ ಸಮಸ್ಯೆ ಪರಿಹರಿಸುವ ಬಗ್ಗೆ ಆದೇಶ ನೀಡಲಾಗಿದೆ ಎಂದು ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.