ಕುಂದಾಪುರ ತಾಲೂಕಿನ ಹಲವು ಗ್ರಾಮಗಳ ನೀರಾವರಿ ಯೋಜನೆಗೆ ಸಂಪುಟ ಅನುಮೋದನೆ
Team Udayavani, Aug 25, 2022, 2:14 PM IST
ಬೆಂಗಳೂರು : ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ವ್ಯಾಪ್ತಿಯಲ್ಲಿನ ಅಜ್ರಿ, ಕೊಡ್ಲಾಡಿ, ಅಂಪಾರು, ಕರ್ಕುಂಜೆ, ಸಿದ್ದಾಪುರ ಹಾಗೂ ಇತರೆ ಗ್ರಾಮಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಿದ್ದಾಪುರ ಏತ ನೀರಾವರಿ ಯೋಜನೆಗೆ ಇಂದು ರಾಜ್ಯ ಸಚಿವ ಸಂಪುಟ ತನ್ನ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಗುರುವಾರ ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ ರೈತರ ನೀರಾವರಿ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಈ ನಿರ್ಣಯ ಕೈಗೊಂಡಿದ್ದಾರೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ವ್ಯಾಪ್ತಿಯಲ್ಲಿನ ಸಿದ್ದಾಪುರ, ಅಂಪಾರು, ಅಜ್ರಿ ಮತ್ತು ಕೊಡ್ಲಾಡಿ ಗ್ರಾಮಗಳ ಪ್ರದೇಶವು ವಾರಾಹಿ ಬಲದಂಡೆ ನಾಲೆಯ ಬಲ ಭಾಗದಲ್ಲಿ ಬರುವುದರಿಂದ ಈ ಭಾಗದ ರೈತರು ನೀರಾವರಿ ಸೌಲಭ್ಯದಿಂದ ವಂಚಿತರಾಗಿದ್ದಾರೆ.
ಈ ಪ್ರದೇಶದ ಬಹುಭಾಗವು ಕೃಷಿ ಭೂಮಿಯಾಗಿದ್ದು, ನೀರಾವರಿಯು ಅಗತ್ಯವಾಗಿರುವುದರಿಂದ, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ನೀರಾವರಿ ಸೌಲಭ್ಯವನ್ನು ಒದಗಿಸುವಂತೆ ಮನವಿಯನ್ನು ಮಾಡಿದ್ದಾರೆ. ಹಾಗಾಗಿ ಕೂಡಲೇ ಯೋಜನೆಯನ್ನು ಕೈಗೆತ್ತಿಕೊಳ್ಳಲುವಂತೆ ಸಂಪುಟ ಅನುಮೋದನೆ ನೀಡಿದೆ.
ಇದನ್ನೂ ಓದಿ : ಬಿಜೆಪಿ ರಾಜಕೀಯ ಲೆಕ್ಕಾಚಾರ : ಯುಪಿ ರಾಜ್ಯಾಧ್ಯಕ್ಷ ಹುದ್ದೆಗೆ ಜಾಟ್ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ
ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ
Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
MUST WATCH
ಹೊಸ ಸೇರ್ಪಡೆ
Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ
Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ
K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ
Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!
ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.