ಹೇಳಿಕೆ ತಿರುಚಿದ್ದಕ್ಕೆ ಸಚಿವ ಗಡ್ಕರಿ ಕೆಂಡ: ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ
Team Udayavani, Aug 25, 2022, 8:00 PM IST
ನವದೆಹಲಿ: ತಮ್ಮ ಹೇಳಿಕೆಗಳನ್ನು ತಿರುಚಿ ರಾಜಕೀಯ ಲಾಭಕ್ಕಾಗಿ ಕಥೆ ಕಟ್ಟುತ್ತಿರುವವರ ವಿರುದ್ಧ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಹರಿಹಾಯ್ದಿದ್ದಾರೆ. ಜತೆಗೆ, ಸರ್ಕಾರ ಮತ್ತು ಪಕ್ಷದ ಹಿತಾಸಕ್ತಿಯಿಂದ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸುಳಿವನ್ನೂ ನೀಡಿದ್ದಾರೆ.
ಕಳೆದ ವಾರವಷ್ಟೇ ಬಿಜೆಪಿ ಸಂಸದೀಯ ಮಂಡಳಿಯಿಂದ ಗಡ್ಕರಿ ಅವರನ್ನು ಕೈಬಿಡಲಾಗಿತ್ತು. ತದನಂತರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ಗ್ರಾಮವೊಂದರ ರಸ್ತೆ ನಿರ್ಮಾಣದ ವೇಳೆ ಅಧಿಕಾರಿಯೊಬ್ಬರಿಗೆ ತಾವು ಎಚ್ಚರಿಕೆ ನೀಡಿದ್ದನ್ನು ಸ್ಮರಿಸಿದ್ದ ಅವರು, “ಪರಿಣಾಮಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಕೆಲಸವನ್ನು ನಾನು ಮಾಡುತ್ತೇನೆ. ಸಾಧ್ಯವಿದ್ದರೆ ನನ್ನ ಜೊತೆಗೆ ನಿಲ್ಲಿ. ಇಲ್ಲದಿದ್ದರೂ ನಾನೇನೂ ಚಿಂತೆ ಮಾಡುವುದಿಲ್ಲ ಎಂದಿದ್ದೆ’ ಎಂದು ಹೇಳಿದ್ದರು. ಇದನ್ನು ಕೆಲವು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ “ಗಡ್ಕರಿ ಅವರು ಸಂಸದೀಯ ಮಂಡಳಿಯಲ್ಲಿ ಹುದ್ದೆ ಕಳೆದುಕೊಂಡಿದ್ದನ್ನು ಪರೋಕ್ಷವಾಗಿ ಪ್ರಸ್ತಾಪಿಸಿ ಈ ಹೇಳಿಕೆ ನೀಡಿದ್ದರು’ ಎಂದು ಪ್ರಕಟಿಸಲಾಗಿದೆ.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗಡ್ಕರಿ, “ಇಂಥ ದುರುದ್ದೇಶಪೂರಿತ ಅಜೆಂಡಾಗಳಿಂದ ನಾನು ಡಿಸ್ಟರ್ಬ್ ಆಗಲ್ಲ. ಆದರೆ, ಇನ್ನು ಮುಂದೆ ಈ ರೀತಿ ನನ್ನ ಹೇಳಿಕೆ ತಿರುಚಿದರೆ ಕಾನೂನು ಕ್ರಮ ಕೈಗೊಳ್ಳಲು ನಾನು ಹಿಂಜರಿಯುವುದಿಲ್ಲ’ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.