ಹೊರ್ತಿ ರೇವಣಸಿದ್ದೇಶ್ವರ ನೀರಾವರಿಗೆ ಅಸ್ತು : ಸರ್ಕಾರದ ನೀತಿಗೆ ವಿಜಯಪುರ ರೈತರ ಕೃತಜ್ಞತೆ
Team Udayavani, Aug 26, 2022, 11:24 AM IST
ವಿಜಯಪುರ: ಬರದ ನಾಡು ವಿಜಯಪುರ ಜಿಲ್ಲೆಯ ನೀರಾವರಿ ವಂಚಿತ ಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ರಾಜ್ಯ ಸರ್ಕಾರದ ಸಚಿವ ಸಂಪುಟ ಅನುಮೋದನೆ ನೀಡಿದ್ದಕ್ಕೆ ರೈತರು ಕೃತಜ್ಞತೆ ಸಲ್ಲಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಸದರಿ ನೀರಾವರಿ ಯೋಜನೆ ಹೋರಾಟಗಾರರು ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ಕುಡಿಯುವ ನೀರಿಗೂ ತತ್ವಾರ ಇರುವ ನಮ್ಮ ಪ್ರದೇಶಕ್ಕೆ ಕೃಷ್ಣಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ನೀರಾವರಿ ಕಲ್ಪಿಸಬೇಕಿತ್ತು. ಇದಕ್ಕಾಗಿ ಏತ ನೀರಾವರಿ ಯೋಜನೆ ರೂಪಿಸಿ ಎಂದು ಮೂರು ದಶಕಗಳಿಂದ ಹೋರಾಡುತ್ತಲೇ ಬಂದಿದ್ದೇವೆ. 2007 ರಲ್ಲಿ ಹೊರ್ತಿ ಗ್ರಾಮದಲ್ಲಿ ಅಹರ್ನಿಶಿ ಹೋರಾಟ ನಡೆಸಿದ್ದೆವು ಎಂದು ಯೋಜನೆ ಅನುಷ್ಠಾನದ ಹೋರಾಟಗಾರ ಹಾಗೂ ಭಾರತೀಯ ಕಿಸಾನ ಸಂಘದ ರಾಜ್ಯ ಮುಖಂಡ ಗುರುನಾಥ ಬಗಲಿ, ಅಣ್ಣಪ್ಪ ಖೈನೂರ ಸದರಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ತಾವು ಮಾಡಿದ ಹೋರಾಟವನ್ನು ವಿವರಿಸಿದರು.
ಇಂಡಿ, ವಿಜಯಪುರ, ಚಡಚಣ ತಾಲೂಕಿನ 55 ಹಳ್ಳಿಗಳ ನೀರಾವರಿ ಸೌಲಭ್ಯ ಕಲ್ಪಿಸುವ 2638 ಕೋಟಿ ರೂ. ವೆಚ್ಚದ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಕಲ್ಪಿಸುವ ಮೂಲಕ ಬಂಜರು ನೆಲವನ್ನು ನಂದನವನ ಮಾಡುವ ಕನಸು ನನಸಾಗಿಸುವ ಕಾಲ ಬಂದಿದೆ ಎಂದರು.
ಇದನ್ನೂ ಓದಿ : ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ : ಮೂರು ಮಕ್ಕಳು ಸೇರಿ ಐದು ಮಂದಿ ಸಾವು
30 ವರ್ಷದ ಹೋರಾಟಕ್ಕೆ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರು ತವರು ಜಿಲ್ಲೆಗೆ ಮಹತ್ವಾಕಾಂಕ್ಷೆಯ ಯೋಜನೆಗೆ ಕೊಡುಗೆ ನೀಡಿದ್ದಾರೆ ಎಂದು ಅಭಿನಂದಿಸುವುದಾಗಿ ಹೇಳಿದರು.
ಸದರಿ ಯೋಜನೆ ಅನುಷ್ಠಾನದಿಂದ ಸಾವಿರಾರು ಅಡಿ ಆಳ ಕೊಳವೆ ಬಾವಿ ಕೊರೆದರೂ ಬೊಗಸೆ ನೀರು ಸಿಗುತ್ತಿರಲಿಲ್ಲ. ಪ್ರತಿ ರೈತರೂ ಹತ್ತಾರು ಕೊಳವೆ ಬಾವಿ ಕೊರೆಸಿ, ಲಕ್ಷ ಲಕ್ಷ ರೂ. ಸಾಲಗಾರರಾಗಿದ್ದರು. ಇದೀಗ ಅಂಥ ದುಸ್ಥಿತಿಗೆ ತೆರೆ ಬೀಳಲಿದೆ ಎಂದರು.
ಭಾರತೀಯ ಕಿಸಾನ ಸಂಘದ ರಾಜ್ಯಾಧ್ಯಕ್ಷ ಭೀಮಸೇನ ಕೋಕರೆ, ಜಿಲ್ಲಾಧ್ಯಕ್ಷ ಮಲ್ಲನಗೌಡ ಪಾಟೀಲ, ಪಾಲಿಕೆ ಮಾಜಿ ಸದಸ್ಯ ರವೀಂದ್ರ ಲೋಣಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.