ಟ್ಯಾಟೂ ಪ್ರಿಯರೇ ಎಚ್ಚರ: ಟ್ಯಾಟೂ ಇಂಕ್ನಲ್ಲಿ ಕ್ಯಾನ್ಸರ್ ಅಂಶ ಪತ್ತೆ!
ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್ ವರದಿಯಲ್ಲಿ ಬಹಿರಂಗ
Team Udayavani, Aug 26, 2022, 5:10 PM IST
ನ್ಯೂಯಾರ್ಕ್: ಟ್ಯಾಟೂ ಹಾಕಿಸಿಕೊಳ್ಳುವುದು ಒಂದು ರೀತಿಯ ಟ್ರೆಂಡ್, ಅದರಲ್ಲೂ ಹೊಸ ಹೊಸ ಬಗೆಯ ಡಿಸೈನ್ಗಳನ್ನು ಹುಡುಕಿ ತಿಂಗಳುಗಟ್ಟಲೇ ಆಲೋಚಿಸಿ ಜನರು ದೇಹದ ವಿವಿಧ ಭಾಗಗಳಲ್ಲಿ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದರೆ ಆ ಟ್ಯಾಟೂವಿನಿಂದ ಕ್ಯಾನ್ಸರ್ ಕೂಡ ಬರಬಹುದು ಎನ್ನುವ ಆತಂಕಕಾರಿ ವಿಚಾರ ಅಧ್ಯಯನದಿಂದ ಬಯಲಾಗಿದೆ.
ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್ (SUNY) ನ ವಿಜ್ಞಾನಿಗಳು ಕೈಗೊಂಡ ಅಧ್ಯಯನದಲ್ಲಿ ಶೇ. 50 ರಷ್ಟು ಟ್ಯಾಟೂ ಇಂಕ್ಗಳಲ್ಲಿ ಕ್ಯಾನ್ಸರ್ ಕಾರಣವಾಗುವ ಅಂಶಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಈ ಹೊಸ ಅಧ್ಯಯನಕ್ಕಾಗಿ ವಿವಿಧ ಜನಪ್ರಿಯ 100 ಟ್ಯಾಟೂ ಮಾದರಿಗಳನ್ನು ವಿಶ್ಲೇಷಿಸಲಾಗಿದ್ದು, ಶೇ. 50 ರಷ್ಟು, ಹಚ್ಚೆ ಶಾಯಿಗಳು ಕ್ಯಾನ್ಸರ್ಗೆ ಕಾರಣವಾಗುವ ರಾಸಾಯನಿಕಗಳನ್ನು ಒಳಗೊಂಡಿವೆ. ಶಾಯಿಯಲ್ಲಿರುವ ಪಿಗ್ಮೆಂಟ್ ಮತ್ತು ಕ್ಯಾರಿಯರ್ ದ್ರಾವಣವು ಹಚ್ಚೆಗಳನ್ನು ಎಂದಿಗೂ ತೆಗೆದುಹಾಕದೆ ದೇಹದ ಮೇಲೆ ಉಳಿಯಲು ಕಾರಣವಾಗಿದೆ.
ವಿಜ್ಞಾನಿಗಳು ವಿಶ್ಲೇಷಿಸಿದ 100 ಶಾಯಿಗಳಲ್ಲಿ, 23 ಶಾಯಿಗಳು ಅಜೋ ಬಣ್ಣಗಳನ್ನು ಒಳಗೊಂಡಿರುವುದು ಕಂಡುಬಂದಿದೆ. ಸಾಮಾನ್ಯವಾಗಿ, ಅಜೋ ಸಿಂಥೆಟಿಕ್ ಡೈಗಳನ್ನು ಆಹಾರ, ಸೌಂದರ್ಯ ಮತ್ತು ಬಟ್ಟೆಗಳಲ್ಲಿ ಬಳಸಲಾಗುತ್ತದೆ.
ರಾಸಾಯನಿಕವಾಗಿ ಇವು ಸುರಕ್ಷಿತವಾಗಿದ್ದರೂ, ಬ್ಯಾಕ್ಟೀರಿಯಾ, ಯುವಿ ಕಿರಣಗಳು ಅಥವಾ ಅತಿಯಾದ ಸೂರ್ಯನ ಬೆಳಕಿಗೆ ಒಡ್ಡಿಕೊಂಡಾಗ ಕ್ಯಾನ್ಸರ್-ಉಂಟುಮಾಡುವ ಸಂಯುಕ್ತಗಳಾಗಬಹುದು ಎಂದು ಈ ಅಧ್ಯಯನ ಬಹಿರಂಗಪಡಿಸಿದೆ.
ಇದನ್ನೂ ಓದಿ: ಕಾಂಗ್ರೆಸ್ ಗೆ ಗುಡ್ ಬೈ; ಜಮ್ಮು-ಕಾಶ್ಮೀರದಲ್ಲಿ ಆಜಾದ್ ಹೊಸ ಪಕ್ಷ ಸ್ಥಾಪನೆ: ವರದಿ
ಟ್ಯಾಟೂ ಉಪಕರಣಗಳನ್ನು ಸರಿಯಾಗಿ ಶುಚಿಗೊಳಿಸದೇ ಉಪಯೋಗಿಸಿದರೆ, ಚರ್ಮ ಕೆರೆತ, ಜಾಂಡೀಸ್ ನಂತಹ ರಕ್ತಸಂಬಂಧಿ ಕಾಯಿಲೆಗಳು ಬರುವ ಅಪಾಯವಿದೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ. ಹಚ್ಚೆಯಲ್ಲಿನ ಅಜೋ ಸಂಯುಕ್ತಗಳು ಹೆಚ್ಚು ಬಿಸಿಲು ಮತ್ತು ಹೆಚ್ಚು ಬ್ಯಾಕ್ಟೀರಿಯಾಕ್ಕೆ ಒಡ್ಡಿಕೊಂಡರೆ ಕಾರ್ಸಿನೋಜೆನಿಕ್ ಆಗುವ ಅಪಾಯವಿದೆ ಎಂದು ಅಧ್ಯಯನದಿಂದ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.