ಆ.29 ರಂದು ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ಕ್ರೀಡಾಕೂಟ: ಸಚಿವ ಡಾ.ನಾರಾಯಣಗೌಡ
Team Udayavani, Aug 26, 2022, 5:28 PM IST
ಬೆಂಗಳೂರು: ಗ್ರಾಮೀಣ ಪ್ರತಿಭೆಗಳ ಅನಾವರಣಗೊಳಿಸಲು ಹಾಗೂ ದೇಶಿಯ ಕ್ರೀಡೆಗಳ ಉತ್ತೇಜನಕ್ಕೆ ಗ್ರಾಮೀಣ ಕ್ರೀಡಾಕೂಟ ಹಮ್ಮಿಕೊಳ್ಳಲಾಗುತ್ತಿದ್ದು, ಆಗಸ್ಟ್29 ರಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ರಾಜ್ಯದ ಗ್ರಾಮೀಣ ಹಾಗೂ ದೇಶಿಯ ಕ್ರೀಡೆಗಳಿಗೆ ಉತ್ತೇಜನ ನೀಡಲು ಗ್ರಾಮ ಪಂಚಾಯತ್ ಮಟ್ಟದಿಂದ ರಾಜ್ಯಮಟ್ಟದವರೆಗೂ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ದೇಸಿ ಕ್ರೀಡೆಗಳಾದ ಕುಸ್ತಿ, ಕಬ್ಬಡ್ಡಿ, ಖೋಖೋ ಮತ್ತು ಎತ್ತಿನಬಂಡಿ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ರಾಷ್ಟ್ರೀಯ ಕ್ರೀಡಾ ದಿನವಾದ ಆಗಸ್ಟ್ 29 ರಂದು ಸನ್ಮಾನ್ಯ ಮುಖ್ಯಮಂತ್ರಿಗಳ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಲಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಗ್ರಾಮೀಣ ಕ್ರೀಡೋತ್ಸವ ಆಯೋಜಿಸಲಾಗುತ್ತಿದ್ದು, 10 ಕೋಟಿ ರೂ ಅನುದಾನ ನೀಡಲಾಗಿದೆ. ದೇಶಿಯ ಕ್ರೀಡೆಗಳಿಗೆ, ಗ್ರಾಮೀಣ ಪ್ರತಿಭೆಗಳಿಗೆ ಉತ್ತೇಜನ ನೀಡಬೇಕು ಎಂಬುದು ನಮ್ಮ ಸರ್ಕಾರದ ಆಶಯ. ತಾಲೂಕು ಮಟ್ಟ, ಜಿಲ್ಲಾ ಮಟ್ಟ, ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸುವುದರಿಂದ ಎಲೆ ಮರೆ ಕಾಯಿಯಂತಿದ್ದ ಎಷ್ಟೋ ಅರ್ಹ ಪ್ರತಿಭೆಗಳಿಗೆ ಅವಕಾಶ ಸಿಗಲಿದೆ. ಇದರಿಂದ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಲು ಅವಕಾಶ ದೊರೆಯುವಂತಾಗಲಿದೆ. ಹಾಗಾಗಿ ಗ್ರಾಮೀಣ ಕೂಟವನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Womens T20 World Cup: ಪಾಕ್ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತ ಭಾರತ
INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್ ಯಾರು?
T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್
Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್ ಸವಾಲು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.