ನಿವೇಶನ ಖರೀದಿ: ವಂಚನೆ ತಡೆಗಟ್ಟಲು ಏಜೆನ್ಸಿ: ಸಚಿವ ಆರ್.ಅಶೋಕ್
Team Udayavani, Aug 27, 2022, 7:20 AM IST
ಬೆಂಗಳೂರು: ನಿವೇಶನ, ಭೂಮಿ ಕೊಳ್ಳುವವರು ಮೋಸದ ಜಾಲಕ್ಕೆ ಸಿಲುಕದಂತೆ ರಕ್ಷಿಸಲು ಸರ್ಕಾರವೇ ಏಜೆನ್ಸಿಯೊಂದನ್ನು ಸ್ಥಾಪಿಸಲು ಚಿಂತನೆ ನಡೆಸಿದೆ. ಹೀಗೆಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಏಜೆನ್ಸಿಯು ಭೂಮಿ, ನಿವೇಶನ ಮಾರುವವರು ಮತ್ತು ಕೊಳ್ಳುವವರ ನಡುವೆ ಮಧ್ಯವರ್ತಿಯಾಗಿ ಕೆಲಸ ಮಾಡಲಿದೆ. ಮಾರಾಟ ಮಾಡುವವರ ಬಳಿ ದಾಖಲೆ ಪಡೆದು, ಅದರ ಅಸಲಿಯತ್ತು ಪರೀಕ್ಷಿಸಿ ಒಡೆತನ ಯಾರದ್ದು ಎಂದು ಸ್ಪಷ್ಟಪಡಿಸಿಕೊಳ್ಳುತ್ತದೆ. ನಂತರ ಕೊಳ್ಳುವವರಿಗೆ ಗ್ರೀನ್ ಸಿಗ್ನಲ್ ನೀಡಲಿದೆ ಎಂದು ತಿಳಿಸಿದರು. ವಂಚನೆ ತಡೆಗಟ್ಟುವುದು ಇದರ ಮೂಲ ಉದ್ದೇಶ ಎಂದು ಹೇಳಿದ್ದಾರೆ.
ಕೇಂದ್ರಕ್ಕೆ ಪ್ರಸ್ತಾವನೆ: ರಾಜ್ಯದಲ್ಲಿ ಮಳೆ-ಪ್ರವಾಹದಿಂದ ಉಂಟಾದ ಹಾನಿ ಹಿನ್ನೆಲೆಯಲ್ಲಿ 1,102 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪರಿಹಾರ ಕೋರುವ ಸಂಬಂಧ ಮನವಿ ಪತ್ರ ಸಿದ್ಧವಾಗಿದೆ.
ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಳುಹಿಸಿರುವ ವರದಿ ಆಧಾರದ ಮೇಲೆ 1,102 ಕೋಟಿ ರೂ. ಪರಿಹಾರ ಕೋರಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.