ಅಂಬೇಡ್ಕರ್‌ ಅಭಿವೃದ್ದಿ ನಿಗಮಕ್ಕೆ 100 ಕೋಟಿ


Team Udayavani, Aug 27, 2022, 2:44 PM IST

6-ambedkar

ಬೀದರ: ಪರಿಶಿಷ್ಟರ ಅಭಿವೃದ್ಧಿಗಾಗಿ ಡಾ| ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮಕ್ಕೆ ಸರ್ಕಾರ 100 ಕೋಟಿ ರೂ. ಅನುದಾನವನ್ನು ನೀಡಿದ್ದು, ಅದನ್ನು ಎಲ್ಲ ಜಿಲ್ಲೆಗಳಲ್ಲಿ ಹಂಚಿಕೆ ಮಾಡಲಾಗುವುದು ಮತ್ತು ಗಡಿ ಜಿಲ್ಲೆಗೆ ಬೀದರಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ನಿಗಮದ ಅಧ್ಯಕ್ಷರಾದ ಶಾಸಕ ಎಚ್‌. ನಾಗೇಶ್‌ ಹೇಳಿದರು.

ನಗರದ ರಂಗ ಮಂದಿರದಲ್ಲಿ ಶುಕ್ರವಾರ ಡಾ| ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಕಚೇರಿಯ ಶಿಲಾನ್ಯಾಸ, ಅರಿವು ಕಾರ್ಯಾಗಾರ ಮತ್ತು ನಿಗಮದ ವಿವಿಧ ಯೋಜನೆಗಳಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಸೌಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳು ಸ್ವ-ಉದ್ಯೋಗ ಮಾಡುವವರಿಗೆ ಮೈಕ್ರೋ ಸ್ಕೀಮ್‌ ಯೋಜನೆಯಲ್ಲಿ 2.5 ಲಕ್ಷ ರೂ. ಹಣವನ್ನು ಅವರ ಜೀವನೋಪಾಯಕ್ಕಾಗಿ ಸ್ವಯಂ ಉದ್ಯೋಗ ಕೈಗೊಳ್ಳುವ ಹಪ್ಪಳ, ಸಂಡಿಗೆ ಹಾಗೂ ಇತರೆ ಉದ್ಯೋಗ ಮಾಡುವುದಕ್ಕಾಗಿ ಹಣವನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.

ನನ್ನ ಅಧಿಕಾರದ ಅವಧಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿಗಮದ ಕಚೇರಿಗಳನ್ನು ಸ್ಥಾಪಿಸಲು ಕ್ರಮ ವಹಿಸಿದ್ದೇನೆ. ಈ ಹಿಂದೆ ಸರ್ಕಾರದ ಸೌಲಭ್ಯವನ್ನು ಪಡೆಯುವ ಫಲಾನುಭವಿಗಳಿಗೆ ಚೆಕ್‌ಗಳ ಮುಖಾಂತರ ವಿತರಿಸಲಾಗುತ್ತಿತ್ತು. ಈಗ ಆಡಳಿತದಲ್ಲಿ ಪಾರದರ್ಶಕ ತರುವ ನಿಟ್ಟಿನಲ್ಲಿ ಆರ್‌ಟಿಜಿಎಸ್‌ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಶಾಸಕ ರಹೀಮ್‌ ಖಾನ್‌ ಮಾತನಾಡಿ, ಹಿಂದೆ ರಾಜನ ಮಗ ರಾಜ, ವೈದ್ಯನ ಮಗ ವೈದ್ಯ, ಇಂಜಿನಿಯರ್‌ ಮಗ ಇಂಜಿನೀಯರ್‌, ಶ್ರೀಮಂತರ ಮಕ್ಕಳು ಶ್ರೀಮಂತರಾಗಿ ಉನ್ನತ ಹುದ್ದೆಗಳನ್ನು ಪಡೆಯುತ್ತಿದ್ದರು. ಅಂಬೇಡ್ಕರ್‌ ರಚಿಸಿದ ಕಾನೂನುನಿಂದಾಗಿ ಇಂದು ಎಲ್ಲ ಜನಾಂಗದ ಬಡವರ ಮಕ್ಕಳು ಉನ್ನತ ಹುದ್ದೆಗೆ ಸೇರಿದ್ದಾರೆ ಎಂದು ಹೇಳಿದರು.

ಎಂಎಲ್‌ಸಿ ಅರವಿಂದಕುಮಾರ ಅರಳಿ ಮಾತನಾಡಿ, ಕ್ಷೇತ್ರದ ಶಾಸಕರಿಗೆ 2-3 ಫಲಾನುಭವಿಗಳ ಹೆಸರು ಆಯ್ಕೆಗೆ ಕೊಡುತ್ತಾರೆ. ಎಸ್‌.ಸಿ., ಎಸ್‌.ಟಿ.ಯಲ್ಲಿಯೇ ಹಲವಾರು ಉಪ ಜಾತಿಗಳಿವೆ. ಅವುಗಳಿಗೆ ಒಂದರಂತೆ ಹಂಚಿಕೆ ಮಾಡಿದರು ಇತರರಿಗೆ ಸಿಗುವುದಿಲ್ಲ. ಈ ಬಗ್ಗೆ ಅಧ್ಯಕ್ಷರು ಗಮನಹರಿಸಿ ಇನ್ನು ಹೆಚ್ಚಿನ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡುವಂತಾಗಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಸೌಲತ್ತುಗಳನ್ನು ವಿತರಣೆ ಮಾಡಲಾಯಿತು. ನಿಗಮದ ನಾಮ ನಿರ್ದೇಶಿತ ಸದಸ್ಯ ಬಸವರಾಜ ರಾಮಚಂದ್ರಪ್ಪ ಆರ್ಯ, ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶಕುಮಾರ, ಎಸ್‌.ಸಿ., ಎಸ್‌.ಪಿ./ಟಿ. ಎಸ್‌.ಪಿ. ಸಲಹೆಗಾರ ಇ. ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ| ಕೆ. ರಾಕೇಶಕುಮಾರ, ಉಪ ಪ್ರಧಾನ ವ್ಯವಸ್ಥಾಪಕ ಹರ್ಷಾ ಗಾಂವಕರ್‌, ಡಾ| ಲಿಂಗರಾಜ ಅರಸ್‌, ಸೋಮಶೇಖರ ಇದ್ದರು.

ಟಾಪ್ ನ್ಯೂಸ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

Chaluvarayaswamy

Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

Nanna Devru; ದೇವ್ರ ನಂಬಿ ಬಂದ ಮಯೂರಿ

Nanna Devru; ದೇವ್ರ ನಂಬಿ ಬಂದ ಮಯೂರಿ

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.