ಗುಣಮಟ್ಟ ಶಿಕ್ಷಣದಲ್ಲಿ ಶಿಕ್ಷಕರ ಪಾತ್ರ ಮಹತ್ತರ: ಹರನಾಳ


Team Udayavani, Aug 27, 2022, 5:00 PM IST

13-teachers

ಮುದ್ದೇಬಿಹಾಳ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾದುದು. ಅಂತಹ ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳು ನಡೆದದ್ದೇ ಆದರೆ ಮಕ್ಕಳ ಭವಿಷ್ಯ ಉಜ್ವಲವಾಗುವುದರಲ್ಲಿ ಸಂದೇಹವೇ ಇಲ್ಲ ಎಂದು ಎಂಜಿಎಂಕೆ ಕಾಲೇಜಿನ ಪ್ರಾಚಾರ್ಯ ಎಸ್‌.ಕೆ. ಹರನಾಳ ಹೇಳಿದರು.

ಪಟ್ಟಣದ ಹೊರ ವಲಯದಲ್ಲಿರುವ ವಿದ್ಯಾಚೇತನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನಡೆದ ಕನ್ನಡ ಭಾಷಾ ಮೇಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ಪರ್ಧಾತ್ಮವಾಗುತ್ತಿರುವ ಬದುಕಿನಲ್ಲಿ ಸ್ವಾವಲಂಬಿಯಾಗಿ ಜೀವನ ನಡೆಸುವ ಶಕ್ತಿಯನ್ನು ಮಕ್ಕಳಲ್ಲಿ ತುಂಬಲು ಮಾಧ್ಯಮವಾಗಿ ಕಾರ್ಯನಿರ್ವಹಿಸುವ ಶಿಕ್ಷಣ ಎಲ್ಲರಿಗೂ ಮುಕ್ತವಾಗಿ ದೊರೆಯಬೇಕು ಎಂದು ಅವರು ಪ್ರತಿಪಾದಿಸಿದರು.

ಕೇಸಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರು ಪಿ.ಸಿ. ಹಡಗಿನಾಳ ಮಾತನಾಡಿ, ಭೂಮಿಗೆ ಬಿದ್ದ ಬೀಜ ಮತ್ತು ಎದೆಗೆ ಬಿದ್ದ ಅಕ್ಷರ ಎಂದಿಗೂ ವ್ಯರ್ಥವಾಗುವುದಿಲ್ಲ ಎನ್ನುವ ಸರ್ವಕಾಲಿಕ ಸತ್ಯವನ್ನು ಅರಿತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಮಕ್ಕಳ ಭವಿಷ್ಯ ರೂಪಿಸಬೇಕು ಎಂದರು.

ಉಪನ್ಯಾಸ ನೀಡಿದ ಆರ್‌ಎಂಎಸ್‌ಎ ಆದರ್ಶ ವಿದ್ಯಾಲಯದ ಕನ್ನಡ ಭಾಷಾ ಶಿಕ್ಷಕ ಐ.ಎಸ್‌. ಮಠರವರು ಮಕ್ಕಳು ಕಲಿಕೆಯಲ್ಲಿ ಕಾಯಾ-ವಾಚಾ-ಮಾನಸಾ ತೊಡಗಿಸಿಕೊಂಡಲ್ಲಿ ಅಸಾಧ್ಯವಾಗಿರುವುದನ್ನು ಸಾಧ್ಯವಾಗಿಸುವ ಶಕ್ತಿಯುಳ್ಳವರಾಗುತ್ತಾರೆ. ಶರೀರ ಮತ್ತು ಮನಸ್ಸಿನ ಆರೋಗ್ಯದ ಸಮತೋಲಿತ ಬೆಳವಣಿಗೆಗೆ ಆದ್ಯತೆ ನೀಡಿ ಕಲಿಕೆಯನ್ನು ಆನಂದಿಸುವ ಮಕ್ಕಳು ಮಾತ್ರ ಭವ್ಯ ಭಾರತದ ಅಮೂಲ್ಯ ಆಸ್ತಿಯಾಗುತ್ತಾರೆ ಎಂದರು.

ರವಿಕುಮಾರ ಬೆನಕಟಗಿ ಅಧ್ಯಕ್ಷತೆ ವಹಿಸಿದ್ದರು. ಯೋಜನಾ ಕಾರ್ಯದಲ್ಲಿ ಭಾಗವಹಿಸಿದ ವಿದ್ಯಾರ್ಥಿನಿಯರಾದ ಅನುಷಾ ಸಿದ್ದಾಪುರ, ದೀಪಾ ಬಿರಾದಾರ, ತಪ್ಸಿಯಾ ಮಕಾಂದಾರ ಮತ್ತು ವಿದ್ಯಾರ್ಥಿಗಳಾದ ವಿಶ್ವನಾಥ ಬಿಜ್ಜೂರ, ನಾಗರಾಜ ಕಟ್ಟಿಮನಿ, ಪ್ರಶಾಂತ ತೋಟದ ಪ್ರಶಸ್ತಿಗೆ ಭಾಜನರಾದರು. ಮುಖ್ಯಗುರು ಶಿವಕುಮಾರ ಹಿರೇಮಠ, ಸಹ ಶಿಕ್ಷಕರಾದ ಮಹೇಶ ಹಿರೇಮಠ, ಶಾಂತಯ್ಯ ಹಿರೇಮಠ, ಮಂಜುನಾಥ ಅಂಕೋಲಾ, ಎಂ.ಎಂ. ಮುಲ್ಲಾ ಹಾಗೂ ಸಹ ಶಿಕ್ಷಕಿಯರಾದ ದೀಪಾ ಪಾಟೀಲ, ಸುವರ್ಣ ಪಾಟೀಲ, ರಾಜೇಶ್ವರಿ ಬಿರಾದಾರ, ನಾಗರತ್ನಾ ಕುಂಟೋಜಿ ಇದ್ದರು. ಸಂತೋಷಕುಮಾರ ಧರ್ಮಪ್ಪಾ ಸ್ವಾಗತಿಸಿದರು. ಜ್ಯೋತಿ ಅಂಗಡಿ ನಿರೂಪಿಸಿದರು. ಜ್ಯೋತಿ ಹಾವೇರಿ ವಂದಿಸಿದರು.

ಟಾಪ್ ನ್ಯೂಸ್

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Amit Shah: ಖರ್ಗೆ ಹೇಳಿಕೆ ಅವರ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

Amit Shah: ಖರ್ಗೆ ಹೇಳಿಕೆಯು ಕಾಂಗ್ರೆಸ್‌ ನ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

2-muddebihal

Muddebihal: ನಿಂತಿದ್ದ ಕ್ಯಾಂಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Amit Shah: ಖರ್ಗೆ ಹೇಳಿಕೆ ಅವರ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

Amit Shah: ಖರ್ಗೆ ಹೇಳಿಕೆಯು ಕಾಂಗ್ರೆಸ್‌ ನ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.