ಕಲ್ಲೂರ-ಮಾರಡಗಿ ಮಧ್ಯೆ ಸೇತುವೆ ನಿರ್ಮಾಣ
ಬಹುದಿನಗಳ ಬೇಡಿಕೆಯಾಗಿರುವ ಸೇತುವೆ ಕಾರ್ಯವನ್ನು ಕೈಗೊಂಡು ಅನುಕೂಲ ಕಲ್ಪಿಸಲಾಗುತ್ತಿದೆ.
Team Udayavani, Aug 27, 2022, 5:57 PM IST
ರಾಮದುರ್ಗ: ಮಳೆಗಾಲದ ಸಂದರ್ಭದಲ್ಲಿ ಗ್ರಾಮದ ಜನರು ಅನುಭವಿಸುತ್ತಿದ್ದ ಸಮಸ್ಯೆ ಯನ್ನು ನಿವಾರಿಸುವ ನಿಟ್ಟಿನಲ್ಲಿ ಸೇತುವೆ ನಿರ್ಮಾಣಕ್ಕೆ ಮುಂದಾಗಿರುವುದಾಗಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಹುಬ್ಬಳ್ಳಿ ಕೆ.ಆರ್.ಡಿ.ಸಿ.ಎಲ್ ನ 80 ಲಕ್ಷ ಅನುದಾನದಲ್ಲಿ ಕಲ್ಲೂರ-ಮಾರಡಗಿ ರಸ್ತೆಯ ಮಧ್ಯೆ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮದ ಹಾಗೂ ಮುಳ್ಳೂರ ಸುತ್ತಲಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಸೇತುವೆ ಕಾರ್ಯವನ್ನು ಕೈಗೊಂಡು ಅನುಕೂಲ ಕಲ್ಪಿಸಲಾಗುತ್ತಿದೆ. ಮಳೆ ಬಂದಾಗ ಹಳ್ಳದ ನೀರು ಗ್ರಾಮದೊಳಗೆ ನುಗ್ಗಿ ಸಾಕಷ್ಟು ಸಮಸ್ಯೆಯಾಗುತ್ತಿತ್ತು. ಈಗ ಕಾಮಗಾರಿ ಕೈಗೊಂಡಿದ್ದು, ಗುತ್ತಿಗೆದಾರರು ಆದಷ್ಟು ಬೇಗ ಕಾಮಗಾರಿ ಮುಗಿಸಬೇಕು. ಕಳಪೆ ಕೆಲಸ ಕಂಡು ಬಂದಲ್ಲಿ ಗ್ರಾಮಸ್ಥರು ತಮ್ಮ ಅಥವಾ ಅಧಿಕಾರಿಗಳ ಗಮನಕ್ಕೆ ತಂದಲ್ಲಿ ಅಗತ್ಯ ಕ್ರಮ ವಹಿಸುವುದಾಗಿ ಹೇಳಿದರು.
ಗ್ರಾಮಸ್ಥರ ಇನ್ನುಳಿದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈಗಾಗಲೇ ಮುಳ್ಳೂರ ಗ್ರಾಪಂ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂ. ಅನುದಾನದಲ್ಲಿ ಅನೇಕ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಜಿ.ಪಂ ಮಾಜಿ ಸದಸ್ಯ ರೇಣಪ್ಪ ಸೋಮಗೊಂಡ ಮಾತನಾಡಿದರು.
ಮುಳ್ಳೂರ ಅನ್ನದಾನೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮುಳ್ಳೂರ ಗ್ರಾ.ಪಂ ಅಧ್ಯಕ್ಷ ವಿಠuಲ ಸೋಮಗೊಂಡ, ಉಪಾಧ್ಯಕ್ಷೆ ಹನಮವ್ವ ಸುರೇಬಾನ, ಸದಸ್ಯ ಮೌನೇಶ ಕಂಬಾರ, ಶ್ರೀಕಾಂತ ಸೊಬರದ, ಬಾಬುರಡ್ಡಿ ಹೆಬ್ಬಳ್ಳಿ, ಮಲ್ಲಪ್ಪ ಸೋಮಗೊಂಡ, ಸಿದ್ದಪ್ಪ ಗಾಣಗೇರ, ಸಿದ್ದಪ್ಪ ಪೂಜೇರ, ಪಾಂಡು ಜಾಧವ, ಬಸವರಾಜ ಸೋಮಗೊಂಡ ಸೇರಿದಂತೆ ಗ್ರಾಮದ ಅನೇಕ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.