ತಮಿಳುನಾಡಿನಲ್ಲಿ ಅಪಘಾತ : ಬಿ.ಸಿ. ರೋಡ್ ಮೂಲದ ಲಾರಿ ಚಾಲಕ ಸಾವು
Team Udayavani, Aug 28, 2022, 8:30 AM IST
ಬಂಟ್ವಾಳ: ಮಂಗಳೂರಿ ನಿಂದ ಚೆನ್ನೈಗೆ ಮೀನು ಸಾಗಾಟದ ಉದ್ಯಮ ನಡೆಸುತ್ತಿದ್ದ ಬಿ.ಸಿ. ರೋಡಿನ ತಲಪಾಡಿಯ ವ್ಯಕ್ತಿಯೊಬ್ಬರು ತಮಿಳು ನಾಡಿನ ಅಂಬೂರ್ನಲ್ಲಿ ಸಂಭವಿಸಿದ ಲಾರಿ ಅಪಘಾತದಲ್ಲಿ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ತಲಪಾಡಿ ನಿವಾಸಿ ಮುಹಮ್ಮದ್ ಇರ್ಷಾದ್ (37) ಮೃತರು. ಆ. 26ರ ಮಧ್ಯಾಹ್ನ ಮಂಗಳೂರು ದಕ್ಕೆಯಿಂದ ಲಾರಿಯಲ್ಲಿ ಮೀನು ತುಂಬಿಸಿ ಹೊರಟಿದ್ದು, ರಾತ್ರಿ 12.15ರ ವೇಳೆಗೆ ಅಪಘಾತ ಸಂಭವಿಸಿದೆ. ಅಂಬೂರ್ ಪ್ರದೇಶದಲ್ಲಿ ಲಾರಿಗಳ ಮಧ್ಯೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಮೃತ ಇರ್ಷಾದ್ ಅವರು ಲಾರಿಯಲ್ಲಿ ನಿದ್ದೆ ಮಾಡುತ್ತಿದ್ದು, ಬಿ.ಸಿ. ರೋಡು ಪಲ್ಲಮಜಲು ನಿವಾಸಿ ಅಬ್ದುಲ್ ಅಝೀಝ್ ಅವರು ಲಾರಿ ಚಲಾಯಿಸುತ್ತಿದ್ದರು.
ಘಟನೆಯಲ್ಲಿ ಅಬ್ದುಲ್ ಅಝೀಝ್ ಅವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಇರ್ಷಾದ್ ಸ್ಥಳ ದಲ್ಲೇ ಮೃತಪಟ್ಟಿದ್ದಾರೆ. ಅವರು ತಾಯಿ, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಹಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇರ್ಷಾದ್ ಕೊರೊನಾ ಲಾಕ್ಡೌನ್ ಬಳಿಕ ಊರಿನಲ್ಲೇ ಬಾಕಿಯಾಗಿದ್ದು, ಅವರು ಸ್ವಲ್ಪ ಸಮಯದ ಹಿಂದೆಯಷ್ಟೇ ಲಾರಿಯನ್ನು ಖರೀದಿಸಿ ಮೀನು ಸಾಗಾಟದ ವ್ಯಾಪಾರ ಆರಂಭಿಸಿದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.