ಕೊಡಗು: ನಾಡು ತೊರೆಯಲೊಪ್ಪದ ಕಾಡಾನೆಗಳು! ತೋಟದಲ್ಲೇ ಆನೆ ಸಂಸಾರ

ಕೃಷಿಕರ ಸಂಕಷ್ಟಕ್ಕಿಲ್ಲ ಕೊನೆ; ಕೈಚೆಲ್ಲಿ ಕುಳಿತ ಇಲಾಖೆ

Team Udayavani, Aug 29, 2022, 6:20 AM IST

ಕೊಡಗು: ನಾಡು ತೊರೆಯಲೊಪ್ಪದ ಕಾಡಾನೆಗಳು! ತೋಟದಲ್ಲೇ ಆನೆ ಸಂಸಾರ

ಮಡಿಕೇರಿ: ಆಹಾರ ಮತ್ತು ನೀರು ಅರಸಿ ಊರಿಗೆ ಬರುತ್ತಿರುವ ಕಾಡಾನೆಗಳು ಮರಳಿ ಕಾಡು ಸೇರುತ್ತಿಲ್ಲ. ತೋಟಗಳಲ್ಲೇ ಬೀಡು ಬಿಡುತ್ತಿರುವ ವನ್ಯಜೀವಿಗಳಿಂದಾಗಿ ಕೊಡಗು ಜಿಲ್ಲೆಯ ರೈತಾಪಿ ಜನರು ಕೃಷಿ ಭೂಮಿಯನ್ನು ಮಾರಾಟ ಮಾಡಿ ವಲಸೆ ಹೋಗುವ ಅನಿವಾರ್ಯ ಎದುರಾಗುವ ಭೀತಿ ತಲೆದೋರಿದೆ.

ಕೊಡಗು ಜಿಲ್ಲೆಯ ಬಹುತೇಕ ಗ್ರಾಮೀಣ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಹಿಂಡು ಹಿಂಡಾಗಿ ಲಗ್ಗೆ ಇಡುತ್ತಿರುವ ಆನೆಗಳಿಂದಾಗಿ ಮಾನವ ಜೀವಭಯ ಸೃಷ್ಟಿ, ಮಾತ್ರವಲ್ಲ ಮುಂದಿನ ಬದುಕಿನ ಬಗ್ಗೆ ನಿರೀಕ್ಷೆಗಳು ಹುಸಿಯಾಗುವ ಸಾಧ್ಯತೆಗಳಿವೆ. ಹಿಂಡು ಹಿಂಡಾಗಿ ಕಾಡಾನೆಗಳು ಮುಖ್ಯ ರಸ್ತೆಯಲ್ಲೇ ಸಂಚರಿಸುತ್ತಿವೆ. ತೋಟಗಳಲ್ಲೇ ಮರಿ ಹಾಕಿ ಸಂಸಾರ ಮಾಡುತ್ತಿವೆ. ಹೊತ್ತು, ಗೊತ್ತಿಲ್ಲದೆ ಅಲೆದಾಡುತ್ತಿರುವ ದೈತ್ಯ ಜೀವಿಗಳಿಗೆ ಅಂಜಿ ಕಾರ್ಮಿಕರು ತೋಟದ ಕೆಲಸಕ್ಕೆ ಹೋಗುತ್ತಿಲ್ಲ, ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲು ಪೋಷಕರು ಧೈರ್ಯ ತೋರುತ್ತಿಲ್ಲ. ರೈತರು ತಮ್ಮ ಜಮೀನಿನಲ್ಲಿ ಕೃಷಿ ಕಾಯಕದಲ್ಲಿ ತೊಡಗಿಸಿಕೊಳ್ಳಲು ಉತ್ಸಾಹ ತೋರುತ್ತಿಲ್ಲ. ಸಾವಿರಾರು ರೂಪಾಯಿ ವ್ಯಯಿಸಿ ಬೆಳೆದ ಫ‌ಸಲು ಕಾಡಾನೆಗಳ ಹೊಟ್ಟೆ ಸೇರುವುದಾದರೆ ನಾವೇಕೆ ಬೆಳೆ ಬೆಳೆಯಬೇಕು ಎಂದು ಬೆಳೆಗಾರರು ಪ್ರಶ್ನಿಸುತ್ತಿದ್ದಾರೆ.

ಕಾಡಿನಲ್ಲಿ ಸೂಕ್ತ ಆಹಾರ ಮತ್ತು ನೀರಿನ ವ್ಯವಸ್ಥೆ ಇದ್ದಿದ್ದರೆ ಆನೆಗಳು ನಾಡಿಗೆ ಬರುತ್ತಿರಲಿಲ್ಲ. ಆಹಾರದ ಕೊರತೆಯಿಂದಾಗಿಯೇ ಅವು ನಾಡಿನತ್ತ ಬರುತ್ತಿದ್ದು, ತೋಟಗಳನ್ನು ಹಾಳುಗೆಡವುತ್ತಿವೆ. ತೋಟದ ಕೆರೆಗಳು ಆನೆಗಳಿಗೇ ಮೀಸಲಾಗಿವೆ. ಆಹಾರ ಮತ್ತು ನೀರು ಯಥೇತ್ಛವಾಗಿ ದೊರೆಯುತ್ತಿರುವುದರಿಂದ ಅವುಗಳು ತೋಟ ತೊರೆಯಲು ಒಪ್ಪುತ್ತಿಲ್ಲ.

ರಾಜಾರೋಷ ಓಡಾಟ
ಪಟಾಕಿ ಶಬ್ದ, ಕಾರ್ಯಾಚರಣೆ, ಕಂದಕ, ಸೋಲಾರ್‌ ಮತ್ತು ರೈಲ್ವೇ ಕಂಬಿಗಳ ಬೇಲಿ ಈ ಎಲ್ಲ ಪ್ರಯೋಗಗಳು ನಡೆದು ಹೋಗಿವೆ. ಆನೆಗಳು ಮಾತ್ರ ರಾಜಾರೋಷವಾಗಿ ಓಡಾಡು ತ್ತಿವೆ. ಇತ್ತೀಚೆಗೆ ಮನೆಗಳ ಮೇಲೆಯೂ ದಾಳಿ ಆರಂಭಿಸಿವೆ. ಅರಣ್ಯ ಇಲಾಖೆ ಹಳೆಯ ಪ್ರಯೋಗಗಳನ್ನು ಮಾಡುವುದನ್ನು ಬಿಟ್ಟು ಶಾಶ್ವತ ಪರಿಹಾರಕ್ಕಾಗಿ ದೊಡ್ಡದೊಂದು ಯೋಜನೆಯನ್ನು ರೂಪಿಸಬೇಕಾಗಿದೆ ಎಂದು ಹಿರಿಯ ಬೆಳೆಗಾರರು ಅಭಿಪ್ರಾಯಪಡುತ್ತಾರೆ.

ಪಟಾಕಿ ಸಿಡಿಸುವುದಷ್ಟೇ ಅರಣ್ಯ ಸಿಬಂದಿ ಕಾಯಕ!
ಅಸಹಾಯಕ ಸ್ಥಿತಿಯಲ್ಲಿರುವ ಅರಣ್ಯ ಅಧಿಕಾರಿಗಳು ಗ್ರಾಮಸ್ಥರು ದೂರು ನೀಡಿದರೆ ಬಂದು ಪಟಾಕಿ ಸಿಡಿಸಿ ಹೋಗುತ್ತಾರೆ. ಅವರು ಹೋದ ತತ್‌ಕ್ಷಣ ಮತ್ತೆ ಅದೇ ಪ್ರದೇಶಕ್ಕೆ ಆನೆಗಳು ಮರಳುತ್ತವೆ. ಮಾನವ ಜೀವ ಹಾನಿಯಾದಾಗ ಪರಿಹಾರದ ಚೆಕ್‌ ನೀಡಿ ಪ್ರತಿಭಟನಕಾರರನ್ನು ಸುಮ್ಮನಾಗಿಸುತ್ತಾರೆ. ಗ್ರಾಮಸ್ಥರ ಆಗ್ರಹಕ್ಕೆ ಮಣಿದು ಕಾಟಾಚಾರದ ಸಭೆ ನಡೆಸುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಶಾಶ್ವತ ಪರಿಹಾರ ಅನುಷ್ಠಾನಗೊಳಿಸುವಲ್ಲಿ ವಿಫ‌ಲರಾ ಗುತ್ತಿದ್ದಾರೆ ಎಂದು ಸ್ಥಳೀಯ ಬೆಳೆಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.