“ಸಂಸ್ಕೃತ’ ವಿಶ್ವಕ್ಕೆ ಭಾರತೀಯರ ಕೊಡುಗೆ; ಶಿಕ್ಷಕಿ ಎಂ.ಎಸ್‌.ತಾಂಡೂರ

ಸಂಸ್ಕೃತ ಸಾಮಾನ್ಯರ ಭಾಷೆಯಾಗಿ ಬೆಳೆಯಬೇಕು.

Team Udayavani, Aug 29, 2022, 5:54 PM IST

“ಸಂಸ್ಕೃತ’ ವಿಶ್ವಕ್ಕೆ ಭಾರತೀಯರ ಕೊಡುಗೆ; ಶಿಕ್ಷಕಿ ಎಂ.ಎಸ್‌.ತಾಂಡೂರ

ಬಾಗಲಕೋಟೆ: ದೇಶ ವಿದೇಶಗಳಲ್ಲಿ ಸಂಸ್ಕೃತ ಭಾಷೆ ಹೆಚ್ಚು ಪ್ರಖರವಾಗಿ ಬೆಳೆಯುತ್ತಿದೆ. ಭಾರತೀಯರ ಕೊಡುಗೆಯಾದ ಸಂಸ್ಕೃತ ಭಾಷೆಯನ್ನು ನಾವೆಲ್ಲ ಕಲಿಯುವುದರ ಮೂಲಕ ಸಂಸ್ಕೃತವನ್ನು ಉಳಿಸಿ ಬೆಳೆಸಬೇಕು ಎಂದು ಕೋಟೆಕಲ್ಲ ಶಾರದಾ ಸಂಸ್ಕೃತ ಪಾಠ ಶಾಲೆಯ ಶಿಕ್ಷಕಿ ಎಂ.ಎಸ್‌.ತಾಂಡೂರ ಹೇಳಿದರು.

ತಾಲೂಕಿನ ಬೇವಿನಮಟ್ಟಿಯ ರಂಗನಾಥ ಅಂತರಾಷ್ಟ್ರೀಯ ಶಾಲೆಯಲ್ಲಿ ರವಿವಾರ ನಡೆದ ಸಂಸ್ಕೃತ ದಿನೋತ್ಸವ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ನಾವು ಮನೆಯಲ್ಲಿ ದಿನಂಪ್ರತಿ ಬಳಸುವ ಬಹುತೇಕ ಶಬ್ದಗಳು ಸಂಸ್ಕೃತದಲ್ಲಿವೆ. ವಿಶ್ವದ 80 ದೇಶಗಳ 450 ವಿವಿಗಳಲ್ಲಿ ಸಂಸ್ಕೃತವನ್ನು ಪ್ರಮುಖ ಭಾಷೆಯಾಗಿ ಕಲಿಸಲಾಗುತ್ತಿದೆ. ಸಂಸ್ಕೃತ ಹಾಗೂ ಸಂಸ್ಕೃತಿ ಭಾರತದ ಪ್ರತಿಷ್ಠೆ. ಸಂಸ್ಕೃತ ಸಾಮಾನ್ಯರ ಭಾಷೆಯಾಗಿ ಬೆಳೆಯಬೇಕು. ಅದಕ್ಕಾಗಿ ಮಕ್ಕಳಿಗೆ ಸಂಸ್ಕೃತ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಚಾರ್ಯ ವಿಕ್ರಮ್‌ ನಾರ್ವೇಕರ ಮಾತನಾಡಿ, ಸಂಸ್ಕೃತ ಕಲಿಕೆಯಿಂದ ಸಾಕಷ್ಟು ಲಾಭಗಳಿವೆ. ಸಂಸ್ಕೃತ ಕಲಿಕೆಯಿಂದ ಮಕ್ಕಳಲ್ಲಿ ವಿಶೇಷ ಚೈತನ್ಯ ಮೂಡುತ್ತದೆ. ಸಂಸ್ಕೃತ ಕಲಿಕೆಗೆ ವಿದ್ಯಾರ್ತೀಗಳು ಹೆಚ್ಚು ಆಸಕ್ತಿ ವಹಿಸಬೇಕೆಂದು ಹೇಳಿದರು.

ಪತ್ರಕರ್ತ ಮಲ್ಲಿಕಾರ್ಜುನ ರಾಜನಾಳ, ನಜೀರ್‌ಸಾಬ್‌ ವಲ್ಲೆಪ್ಪನವರ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಕ್ಕಳಿಂದ ಸಂಸ್ಕೃತ ಭಾಷೆಯಲ್ಲಿ ನಾಟಕ, ಪಥ ಸಂಚಲನ, ಗೀತ ಗಾಯನ, ಸಂಸ್ಕೃತ ಶ್ಲೋಕ ಪಠಣ ನಡೆದು ನೋಡುಗರ ಗಮನ ಸೆಳೆದವು. ಕಾರ್ಯಕ್ರಮದಲ್ಲಿ ಸಂಸ್ಕೃತ ಶಿಕ್ಷಕಿ ಎಂ.ಎಸ್‌.ತಾಂಡೂರ, ಪತ್ರಕರ್ತ ಮಲ್ಲಿಕಾರ್ಜುನ ರಾಜನಾಳ ಅವರನ್ನು ಸನ್ಮಾನಿಸಲಾಯಿತು.

ಶಾಲೆಯ ಉಪಪ್ರಾಚಾರ್ಯ ವಸುಧಾ ನಾರ್ವೇಕರ, ಸಂಗಮೇಶ ಹತ್ತರಕಿಹಾಳ, ಅಮರೇಶ ಹುಣಸಗಿ, ಕೃಷ್ಣಾ ಝಿಂಗಾಡೆ, ಪ್ರಕಾಶ ವೆಂಕಣ್ಣವರ, ತಿಪ್ಪಣ್ಣ ಮೇಲಿನಮನಿ, ಸುಧಾಕರ ಕಬ್ಬೂರ, ಚಂದ್ರಕಾಂತ ಆಲೂರು, ವಿಜಯಾ ಶೀಲವಂತ, ಸಂಧ್ಯಾ ಮೇಟಿ, ಸವಿತಾ ಪಾಟೀಲ, ಶಿಲ್ಪಾ ಸಕರಡ್ಡಿ, ಇಂಧುಮತಿ ಜಾಧವ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.