ಶಿವಮೊಗ್ಗ : ಭಾರೀ ಮಳೆಗೆ ಜನ್ನಾಪುರ ಕೆರೆ ಏರಿ ಒಡೆಯುವ ಭೀತಿಯಲ್ಲಿ…
ಹರಿಯುವ ನೀರಿನಲ್ಲಿ ಮೀನು ಹಿಡಿಯಲು ಮುಗಿಬಿದ್ದ ಜನ
Team Udayavani, Aug 30, 2022, 11:00 AM IST
ಶಿವಮೊಗ್ಗ: ಭದ್ರಾವತಿಯಲ್ಲಿ ರಾತ್ರಿ ಸುರಿದ ಮಳೆಯೂ ಅನೇಕ ಅವಾಂತರಗಳನ್ನು ಸೃಷ್ಟಿಸಿದ್ದು ಜನ್ನಾಪುರ ಕೆರೆ ಏರಿ ಒಡೆಯುವ ಆತಂಕ ಎದುರಾಗಿದೆ.
ಭದ್ರಾವತಿ ನಗರ ಹಾಗೂ ಹೊಸಸಿದ್ದಾಪುರ, ಶಿವಮೊಗ್ಗಕ್ಕೆ ಸಂಪರ್ಕಿಸುವ ರಸ್ತೆ ಮೇಲೆ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಕೆರೆ ಉಕ್ಕಿ ಹರಿಯುತ್ತಿರುವ ಪರಿಣಾಮ ಮೀನುಗಳು ರಸ್ತೆ ಮೇಲೆ ಬರುತ್ತಿದ್ದು ಮೀನು ಹಿಡಿಯುವಲ್ಲಿ ಜನರು ನಿರತರಾಗಿದ್ದರು. ಇತ್ತ ಮೀನು ಸಾಕಣೆ ಟೆಂಡರ್ ಪಡೆದಿದ್ದ ಗುತ್ತಿಗೆದಾರ ಮೀನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದರು. ಕೆರೆ ಏರಿ ಮೇಲೆ ಮೂರ್ನಾಲ್ಕು ಕಡೆ ನೀರು ಹರಿಯುತ್ತಿದ್ದು ಈಗಷ್ಟೇ ನಾಟಿ ಮಾಡಿದ್ದ ಭತ್ತದ ಗದ್ದೆಗಳಿಗೆ ಕೆಸರು ತುಂಬಿಕೊಳ್ಳುತ್ತಿದೆ.
ಜನ್ನಾಪುರ ಕೆರೆ ಅಭಿವೃದ್ಧಿ ಪಡಿಸಿ ಬೋಟಿಂಗ್ ವ್ಯವಸ್ಥೆ ಮಾಡಲು 5 ವರ್ಷದ ಹಿಂದೆ 5 ಕೋಟಿ ಬಿಡುಗಡೆಯಾಗಿದ್ದರೂ ಒತ್ತುವರಿದಾರರ ಸಮಸ್ಯೆಯಿಂದ ಕಾಮಗಾರಿ ಆರಂಭಗೊಂಡಿಲ್ಲ. 50 ವರ್ಷಗಳಿಂದ ಕೆರೆ ಬತ್ತಿಲ್ಲ. ಹೂಳೆತ್ತಲು ಅವಕಾಶ ಸಿಕ್ಕಿಲ್ಲ. ಇದರಿಂದ ದೊಡ್ಡ ಮಳೆ ಬಂದಾಗಲೆಲ್ಲ ಕೆರೆ ಮೇಲೆ ನೀರು ಹರಿಯುತ್ತದೆ. ಒತ್ತುವರಿ ತೆರವು ಮಾಡಿ ಕೆರೆ ಅಭವೃದ್ಧಿಪಡಿಸಬೇಕೆಂದು ಹೊಸಸಿದ್ದಾಪುರ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಗ್ರಾಮೀಣ ಆರ್ಥಿಕ ತಜ್ಞ, ಯೋಜನಾ ಆಯೋಗದ ಮಾಜಿ ಸದಸ್ಯ ಅಭಿಜಿತ್ ಸೇನ್ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.