ರಾಷ್ಟ್ರೀಯ ಹೆದ್ದಾರಿಗಳಿಗೆ ಕೇಂದ್ರದಿಂದ ಹೊಸ ಸ್ಪರ್ಶ
Team Udayavani, Aug 31, 2022, 7:20 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡಿಮೆ ಖರ್ಚಿನಲ್ಲಿ ದೀರ್ಘಕಾಲ ಬಾಳಿಕೆ, ಸುರಕ್ಷತೆ ಒಳಗೊಂಡ ಉತ್ತಮ ಗುಣಮಟ್ಟದ ಮತ್ತು ತ್ವರಿತವಾಗಿ ಕಾಮಗಾರಿ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಮತ್ತು ಮುಂಬರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ “ವಾಲ್ಯೂ ಎಂಜಿನಿಯರಿಂಗ್’ ಅಳವಡಿಸಲು ತೀರ್ಮಾನಿಸಿದೆ.
ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ), ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ(ಎನ್ಎಚ್ಐಡಿಸಿಎಲ್) ಮತ್ತು ಗಡಿ ರಸ್ತೆಗಳ ಸಂಸ್ಥೆ(ಬಿಆರ್ಒ)ಯ ಮುಖ್ಯಸ್ಥರು ಮತ್ತು ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ನೂತನ ಆದೇಶವು ದೇಶದಲ್ಲಿ ಚಾಲ್ತಿಯಲ್ಲಿರುವ ಹೆದ್ದಾರಿ, ಸುರಂಗ ಮತ್ತು ಸೇತುವೆ ನಿರ್ಮಾಣ ಕಾರ್ಯಗಳಿಗೆ ಅನ್ವಯವಾಗುತ್ತದೆ. ಯೋಜನೆಗಳಿಗಳಿಗೆ ಪರ್ಯಾಯ ವಿನ್ಯಾಸ, ಯೋಜನೆಗೆ ಕಡಿಮೆ ಖರ್ಚಿನ ಗುಣಮಟ್ಟದ ವಸ್ತುಗಳು ಮತ್ತು ತಂತ್ರಜ್ಞಾನ ಬಳಕೆ, ಸುದೀರ್ಘ ಬಾಳಿಕೆ, ಸುರಕ್ಷತೆ, ಗುಣಮಟ್ಟಕ್ಕೆ ರಾಜಿಯಾಗದಂತೆ ತ್ವರಿತ ನಿರ್ಮಾಣ ಹಾಗೂ ಹವಾಮಾನ ಬದಲಾವಣೆಗೆ ಹೊಂದುಕೊಳ್ಳುವಂತೆ ನಿರ್ಮಾಣ ಮಾಡುವುದನ್ನು “ವಾಲ್ಯೂ ಎಂಜಿನಿಯರಿಂಗ್’ ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.