![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 30, 2022, 10:58 PM IST
ಹೊಸದಿಲ್ಲಿ: ದಿಲ್ಲಿ ಸರಕಾರದ ಹೊಸ ಅಬಕಾರಿ ನೀತಿ ವಿರುದ್ಧ ಹರಿಹಾಯ್ದಿರುವ ಸಾಮಾಜಿಕ ಹೋರಾಟಗಾರ, ಗಾಂಧಿವಾದಿ ಅಣ್ಣಾ ಹಜಾರೆ, “ಸಿಎಂ ಕೇಜ್ರಿವಾಲ್ ಅವರಿಗೆ ಅಧಿಕಾರದ ಮದ ತಲೆಗೆ ಹತ್ತಿದೆ’ ಎಂದು ಕಿಡಿಕಾರಿದ್ದಾರೆ.
ಕೇಜ್ರಿವಾಲ್ರಿಗೆ ಪತ್ರ ಬರೆದಿರುವ ಹಜಾರೆ, “ಹೊಸ ನೀತಿಯು ಮದ್ಯ ಮಾರಾಟ, ಸೇವನೆಗೆ ಉತ್ತೇಜನ ನೀಡಲಿದೆ. ಭ್ರಷ್ಟಾಚಾರಕ್ಕೆ ಅವಕಾಶ ಕೊಡಲಿದೆ. ನೀವೇ ಬರೆದ ಸ್ವರಾಜ್ ಕೃತಿಯಲ್ಲಿ ಮದ್ಯ ನಿಷೇಧದ ಕುರಿತು ಒಲವು ವ್ಯಕ್ತಪಡಿಸಿದ್ದಿರಿ. ಸಿಎಂ ಹುದ್ದೆಗೇರಿದ ಮೇಲೆ ನೀವು ಅಧಿಕಾರದ ಮತ್ತಲ್ಲಿ ತೇಲುತ್ತಿದ್ದೀರಿ’ ಎಂದು ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕೇಜ್ರಿವಾಲ್, “ಸಿಸೋಡಿಯಾ ವಿರುದ್ಧದ ಪ್ರಕರಣದಲ್ಲಿ ಸಿಬಿಐಗೆ ಏನೂ ಸಿಗಲಿಲ್ಲ. ಹೀಗಾಗಿ ಬಿಜೆಪಿ ಈಗ ಹಜಾರೆ ಅವರನ್ನು ಬಳಸಿಕೊಂಡು ನಮ್ಮ ಸರಕಾರ ವನ್ನು ಟಾರ್ಗೆಟ್ ಮಾಡುತ್ತಿದೆ’ ಎಂದು ಆರೋಪಿಸಿದ್ದಾರೆ.
ನನಗೆ ಕ್ಲೀನ್ಚಿಟ್: ಇದೇ ವೇಳೆ ಮಂಗಳವಾರ ನನ್ನ ಲಾಕರ್ ಸಿಬಿಐ ಪರಿಶೀಲಿಸಿದ್ದು, ಅವರಿಗೆ ಅಲ್ಲೇನೂ ಸಿಕ್ಕಿಲ್ಲ, ಹೀಗಾಗಿ ಅನೌಪ ಚಾರಿಕವಾಗಿ ಸಿಬಿಐ ನನಗೆ ಕ್ಲೀನ್ಚಿಟ್ ನೀಡಿದೆ ಎಂದು ಡಿಸಿಎಂ ಸಿಸೋಡಿಯಾ ಹೇಳಿದ್ದಾರೆ. ಆಪ್ ವಿರುದ್ಧ ಕಿಡಿಕಾರಿರುವ ಬಿಜೆಪಿ, “ಶರಾಬು ಮತ್ತು ಶಿಕ್ಷಣ ಹಗರಣವು ದೆಹಲಿಯ ಭ್ರಷ್ಟಾಚಾರದ ಅವಳಿ ಕಟ್ಟಡಗಳಾಗಿವೆ’ ಎಂದಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.