ನಾಡಪ್ರಭು ಸ್ಮರಣೆಗೆ ಸರ್ಕಾರದಿಂದ ವಿಶಿಷ್ಟ ಅಭಿಯಾನ


Team Udayavani, Aug 31, 2022, 6:00 PM IST

tdy-16

ಬೆಂಗಳೂರು: ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ನೆನಪು ಅಜರಾಮರಗೊಳಿಸಲು ಹಾಗೂ ಇದಕ್ಕಾಗಿ ಇಡೀ ನಾಡಿನ ಜನತೆಯನ್ನು ಏಕತೆಯ ಭಾವದಲ್ಲಿ ಒಗ್ಗೂಡಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಇದಕ್ಕಾಗಿ 45 ದಿನಗಳ ವಿಶಿಷ್ಟ ಅಭಿಯಾನವನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದೆ.

ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಒಂದೆರಡು ತಿಂಗಳಲ್ಲಿ 108 ಅಡಿ ಎತ್ತರದ ಕೆಂಪೇ ಗೌಡರ ಕಂಚಿನ ಪ್ರತಿಮೆಯಾಗಲಿದ್ದು ಇದಕ್ಕೆ ಪೂರ್ವ ಭಾವಿಯಾಗಿ ‘ಉದ್ಘಾಟನಾ ಅಭಿಯಾನ’ ನಡೆಸಲಿದೆ. ಸೆ.1ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಂದ ಹಸಿರು ನಿಶಾನೆ ಕಾಣಲಿರುವ ಅಭಿಯಾನವು ರಾಜ್ಯದ 31 ಜಿಲ್ಲೆಗಳಲ್ಲೂ ನಡೆಯಲಿದೆ. ಇದಕ್ಕೆ ಪೂರಕವಾಗಿ ಅದು “ನಾಡ ಕಟ್ಟೋಣ ಬನ್ನಿ’ ಘೋಷವಾಕ್ಯ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರೂಪಿಸಿದೆ.

ಅಭಿಯಾನದ ಅಡಿಯಲ್ಲಿ ಎಲ್ಲ ಜಿಲ್ಲೆಗಳ ಪ್ರತಿ ಹಳ್ಳಿಯ ಪವಿತ್ರ ಮೃತ್ತಿಕೆ (ಮಣ್ಣು) ಆಯಾ ಊರುಗಳಲ್ಲಿ ರುವ ಕೆರೆಕಟ್ಟೆ, ಕಲ್ಯಾಣಿ, ನದಿ, ಪುಷ್ಕರಿಣಿ, ಕೊಳ, ಚಿಲುಮೆ ಮತ್ತು ಝರಿಗಳಿಂದ ಸಂಗ್ರಹಿಸಲು ಯೋಜನೆ ರೂಪಿಸಲಾಗುತ್ತಿದೆ. ಜತೆಗೆ ನಾಡಿನ ಉದ್ದಗಲಕ್ಕೂ ಇರುವ ಅನುಕರಣೀಯ ಸಾಧಕರ ಮನೆಗಳಿಂದಲೂ ಪವಿತ್ರ ಮಣ್ಣನ್ನು ಸಂಗ್ರಹಿಸಲಾಗುತ್ತದೆ. ಇದಕ್ಕಾಗಿ ಬೃಹತ್‌ ಎಲ್‌ಇಡಿ ಪರದೆಯನ್ನು ಅಳ ವಡಿಸಿರುವ ತಲಾ ಒಂದು ವಾಹನವನ್ನು ಪ್ರತಿ ಜಿಲ್ಲೆಗೂ ನಿಯೋಜಿಸಲಾಗುವುದು. ಇದರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ, ಸಚಿವ ಮತ್ತು ಈ ಪರಿಕಲ್ಪನೆಯ ರೂವಾರಿ ಡಾ.ಸಿ.ಎನ್‌. ಅಶ್ವತ್ಥ ನಾರಾ ಯಣ ಮತ್ತು ನಾಡಿನ ಪ್ರಮುಖ ಸ್ವಾಮೀಜಿಗಳ ಸಂದೇಶಗಳು ಬಿತ್ತರವಾಗಲಿವೆ.

ಜೊತೆಗೆ, ಕೆಂಪೇಗೌಡರಿಗೆ ಸಂಬಂಧಿಸಿದ ಸಾಕ್ಷ್ಯಚಿತ್ರವೂ ಪ್ರಸಾರವಾಗಲಿದೆ ಎಂದು ತಿಳಿದುಬಂದಿದೆ. ಇದಲ್ಲದೆ, ಎಲ್ಲ ಜಿಲ್ಲೆಗಳಲ್ಲೂ ಇರುವ ಮಠ ಮಾನ್ಯ ಗಳ ಶ್ರೀಗಳು, ದೇವಸ್ಥಾನಗಳು, ಸ್ವಾತಂತ್ರ ಹೋರಾಟ ಗಾರರು, ತಾರಾ ವರ್ಚಸ್ಸಿನ ಸಾಧಕರನ್ನು ಕೂಡ ಒಳ ಗೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಳ್ಳಿಗಳಲ್ಲಿ ನಡೆಯಲಿರುವ “ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನ’ವು ಗಿನ್ನಿಸ್‌ ದಾಖಲೆಯಾಗ ಲಿದೆ. ಈ ಅಭಿಯಾನ ನಡೆಯುವ ಒಂದೂವರೆ ತಿಂಗಳುದ್ದಕ್ಕೂ ರಾಜ್ಯದ 10 ಸಾವಿರ ದೇಗುಲಗಳಲ್ಲಿ ನಂದಾದೀಪಗಳು ಪ್ರಜ್ವಲಿಸಲಿದೆ.

ಸೆ.1ರ ಗುರುವಾರ ದೇವನಹಳ್ಳಿಯ ವಿಮಾನ ನಿಲ್ದಾಣದ ಬಳಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಇದಾದ ಬಳಿಕ, ನವೆಂಬರ್‌ ಅಥವಾ ಡಿಸೆಂಬರ್‌ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿ, ವಿಮಾನ ನಿಲ್ದಾಣದ ಸಮುಚ್ಚಯದಲ್ಲಿ ತಲೆ ಎತ್ತುತ್ತಿರುವ ಕೆಂಪೇಗೌಡರ ಭವ್ಯವಾದ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸುವುದು ಸರ್ಕಾರದ ಉದ್ದೇಶ ಎಂದು ಹೇಳಲಾಗಿದೆ.

ನಾಡಪ್ರಭು ಕೆಂಪೇಗೌಡರೆಂದರೆ ಪ್ರಗತಿ ಮತ್ತು ಅಭ್ಯುದಯದ ನಾಗಾಲೋಟ ಕ್ಕೊಂದು ಸಂಕೇತ. ಅವರು ಒಂದು ದಿವ್ಯವಾದ ಘಳಿಗೆಯಲ್ಲಿ ಬೆಂಗಳೂರಿನ ಸ್ಥಾಪನೆಗೆ ಶ್ರೀಕಾರ ಹಾಕಿದರು. ಇದರ ಫಲವಾಗಿ ಬೆಂಗಳೂರು ಇಂದು ವಿಶ್ವ ಮಟ್ಟದಲ್ಲಿ ರಾರಾಜಿಸುತ್ತಿದೆ. ಹೀಗಾಗಿಯೇ, ಈ ಪ್ರತಿಮೆಗೆ ‘ಪ್ರಗತಿ ಪ್ರತಿಮೆ’ ಎಂದು ಹೆಸರಿಡಲಾಗುತ್ತಿದೆ. – ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಸಚಿವ ಹಾಗೂ ಉಪಾಧ್ಯಕ್ಷರು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bng

Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್‌

10-bng

Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್‌

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

8-bng

Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

7-bng

Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.