![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 1, 2022, 3:25 PM IST
ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ”ಭಾರತ್ ಜೋಡೋ” ಯಾತ್ರೆ ರಾಷ್ಟ್ರ ರಾಜಕಾರಣದಲ್ಲಿ ಗೇಮ್ ಚೇಂಜರ್ ಆಗಲಿದೆ ಎಂದು ಭಾರತ್ ಜೋಡೋ ಯಾತ್ರೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದರು.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಭಾರತ ಐಕ್ಯತಾ ಯಾತ್ರೆ ಹಿನ್ನೆಲೆಯಲ್ಲಿ ಕಾಂಗ್ರಸ್ ಗುರುವಾರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ, ದೇಶದ ಜನರನ್ನು ಒಗ್ಗೂಡಿಸುವ ಹಿನ್ನೆಲೆಯಲ್ಲಿ ದೇಶದಲ್ಲೆ ಅತಿದೊಡ್ಡ ಯಾತ್ರೆಯನ್ನು ರಾಹುಲ್ ಗಾಂಧಿ ಹಮ್ಮಿಕೊಂಡಿದ್ದಾರೆ. ಭ್ರಷ್ಟಾಚಾರ, ಜಿಎಸ್ ಟಿ,ನಿರುದ್ಯೋಗ, ಬಡತನ ಇವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತೇವೆ. ಬಿಜೆಪಿ ದೇಶದ ಜನರನ್ನ ವಿಭಜಿಸುತ್ತಿದೆ, ಕಾಂಗ್ರೆಸ್ ಪಕ್ಷದ ಮೂಲಕ ಒಂದು ಗೂಡಿಸುವ ಪ್ರಯತ್ನ ಮಾಡುತ್ತೇವೆ ಎಂದರು.
ಬಿಜೆಪಿ ಕೋಮುಭಾವನೆಗಳ ಆಧಾರದ ಮೇಲೆ ಧರ್ಮರಾಜಕಾರಣ ಮಾಡುತ್ತಿದೆ. ನಮ್ಮದು ಸರ್ವರನ್ನೊಳಗೊಂಡ ಅಭಿವೃದ್ಧಿ ಸಿದ್ಧಾಂತ. ಈ ಮೂರು ಸ್ಥರಗಳಲ್ಲಿ ಯಾತ್ರೆ ನಡೆಯಲಿದೆ. ಕರ್ನಾಟಕದಲ್ಲಿ 21 ದಿನ ಕಾಲ ಪಾದಯಾತ್ರೆ ನಡೆಯಲಿದೆ. ರಾಹುಲ್ ಗಾಂಧಿ ಜೊತೆ ಎಲ್ಲರೂ ಹೆಜ್ಜೆ ಹಾಕಲಿದ್ದಾರೆ. ಸಾವಿರಾರು ಜನ ಇದರಲ್ಲಿ ಪಾಲ್ಗೊಳ್ಳಬಹುದು. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದೆ, ಈ ಯಾತ್ರೆ ಎಲ್ಲರನ್ನೂ ತಲುಪಲಿದೆ. ಹಳ್ಳಿ,ಗ್ರಾಮ,ತಾಂಡ,ಕೇರಿ ಎಲ್ಲವನ್ನೂ ಸುತ್ತಲಿದೆ ಎಂದರು.
ಪ್ರತಿದಿನ 7 ಗಂಟೆಗೆ ಪಾದಯಾತ್ರೆ ನಡೆಯಲಿದ್ದು, ಮಧ್ಯಾಹ್ನ ಬಿಡುವಿನ ವೇಳೆಯಲ್ಲಿ 2 ಗಂಟೆ ವೇಳೆಗೆ ರಾಹುಲ್ ವಿಭಿನ್ನ ಕ್ಷೇತ್ರಗಳ ಜನರ ಜೊತೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 3.30 ಗೆ ಪಾದಯಾತ್ರೆ ಮುಂದುವರಿಯಲಿದೆ. ಮತ್ತೆ ಜನರ ಜೊತೆ ರಾಹುಲ್ ಮಾತುಕತೆ ನಡೆಯಲಿದೆ. ಅದರಲ್ಲಿ ಹಿಂದೂ,ಮುಸ್ಲಿಂ ಸೇರಿದಂತೆ ಇನ್ನಿತರ ಸಮುದಾಯದವರು ಭಾಗಿಯಾಗಲಿದ್ದಾರೆ. ರೈತರ ಜೊತೆಯೂ ಚರ್ಚೆ ನಡೆಸಲಿದ್ದಾರೆ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.