ಪಿಯು ಡಿಡಿಪಿಐ ಕಚೇರಿಗೆ 50 ಲಕ್ಷ ಅನುದಾನ; ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ

ಶಿಕ್ಷಕರ ಕೆಲಸ ಮಾಡುವುದಕ್ಕೆ ನಾನು ಆಯ್ಕೆ ಆಗಿದ್ದೇನೆ

Team Udayavani, Sep 1, 2022, 5:56 PM IST

ಪಿಯು ಡಿಡಿಪಿಐ ಕಚೇರಿಗೆ 50 ಲಕ್ಷ ಅನುದಾನ

ಚಿಕ್ಕೋಡಿ: ಇಲ್ಲಿನ ಪಿಯು ಡಿಡಿಪಿಐ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 25 ಲಕ್ಷ ಹಾಗೂ ನನ್ನ ನಿಧಿಯಿಂದ 25ಲಕ್ಷದಂತೆ ಒಟ್ಟು 50 ಲಕ್ಷ ರೂ. ನೀಡಲು ನಾವು ಬದ್ಧರಾಗಿದ್ದೇವೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಂಡು ಕಚೇರಿ ಕಟ್ಟಡ ನಿರ್ಮಾಣ ಮಾಡಿಕೊಳ್ಳಬೇಕೆಂದು ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ ಸೂಚನೆ ನೀಡಿದರು.

ಪಟ್ಟಣದಲ್ಲಿ ಆಯೋಜಿಸಿದ್ದ ಚಿಕ್ಕೋಡಿ ಉಪವಿಭಾಗದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿಕ್ಷಕರ ಕೆಲಸ ಮಾಡುವುದಕ್ಕೆ ನಾನು ಆಯ್ಕೆ ಆಗಿದ್ದೇನೆ. ಅದನ್ನು ಪ್ರಾಮಾಣಿಕತೆಯಿಂದ ಮಾಡುತ್ತೇನೆ.

ಆದರೆ ನನಗೆ ಸನ್ಮಾನ, ಅಭಿನಂದನೆ ಮಾಡಲು ಸಮಯ ವ್ಯರ್ಥ ಮಾಡಬೇಡಿ ಎಂದರು. ನಿಮಗೆ ಸಮಸ್ಯೆ ಇದ್ದರೆ ನೇರವಾಗಿ ನನ್ನನ್ನು ಸಂಪರ್ಕಿಸಿ ಅಥವಾ ನಮ್ಮ ಕಚೇರಿಗೆ ಬನ್ನಿ. ಅತ್ಯಂತ ಸಂತೋಷದಿಂದ ನಿಮ್ಮ ಕೆಲಸ ಮಾಡುತ್ತೇನೆ. ನಿಮ್ಮ ಸಮಸ್ಯೆ ಬಗೆಹರಿಸದಿದ್ದರೆ ಕುರ್ಚಿ ಖಾಲಿ ಮಾಡುತ್ತೇನೆ ಎಂದರು. ರಾಜ್ಯದಲ್ಲಿ ಯಾವುದೇ ಸರ್ಕಾರ ಇರಲಿ, ನನಗೆ ಮತ ಕೊಟ್ಟ ಮತದಾರರ ಸೇವೆ ಹಾಗೂ ಚಿಕ್ಕೋಡಿ ಭಾಗದ ಅಭಿವೃದ್ಧಿ ಮಾಡುವಲ್ಲಿ ಹಿಂದೆ ಬಿದ್ದಿಲ್ಲ. ಹಿಂದೆ ಬೀಳುವ ಪ್ರಶ್ನೆಯೂ ಇಲ್ಲ ಎಂದು ಪ್ರಕಾಶ್‌ ಹುಕ್ಕೇರಿ ನುಡಿದರು.

ಶಾಸಕ ಗಣೇಶ್‌ ಹುಕ್ಕೇರಿ ಮಾತನಾಡಿ, ಶಿಕ್ಷಣ ರಂಗದಲ್ಲಿ ಅಭಿವೃದ್ಧಿ ಮಾಡುವ ಉದ್ದೇಶದಿಂದ ವಿಧಾನ ಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ನಿಮ್ಮೆಲ್ಲರ ಧ್ವನಿಯಾಗಿ ನಾವಿಬ್ಬರು ಪ್ರಾಮಾಣಿಕವಾಗಿ ಸೇವೆ ಮಾಡುತ್ತೇವೆ ಎಂದು ತಿಳಿಸಿದರು.

ಸಿಟಿಇ ಸಂಸ್ಥೆಯ ಉಪಾಧ್ಯಕ್ಷ ವಿಜಯ ಮಾಂಜ್ರೆಕರ, ಚಿಕ್ಕೋಡಿ ಶಿಕ್ಷಣ ಇಲಾಖೆ ಪಿಯು ಉಪನಿರ್ದೇಶಕ ಬಿ.ಎಸ್‌ ಭಂಡಾರೆ , ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಮಧುಸೂದನ ಬಿಳಗಿ. ಉಪನ್ಯಾಸಕ ಸಂಘದ ಅಧ್ಯಕ್ಷ ಅಪ್ಪು ಗುರಕನವರ್‌, ಉಪನ್ಯಾಸಕಿ ಸಂಘದ ಅಧ್ಯಕ್ಷೆ ಸಮಾಜೆ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.