ವಿಜಯಪುರ : ಸಿಮೆಂಟ್ ಲಾರಿ ಹರಿದು ಕುರಿಗಾರ, 18 ಕುರಿ ಸಾವು
Team Udayavani, Sep 1, 2022, 9:19 PM IST
ವಿಜಯಪುರ : ಸಿಮೆಂಟ್ ಲಾರಿ ಹರಿದು ಸ್ಥಳದಲ್ಲೇ ಒಬ್ಬ ಕುರಿಗಾರ ಹಾಗೂ 18 ಕುರಿಗಳು ಸಾವಿಗೀಡಾದ ದುರ್ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 218 ರ ಯುಕೆಪಿ ವೃತ್ತದ ಬಳಿ ಗುರುವಾರ ಸಂಜೆ ನಡೆದಿದೆ.
ಚಾಲಕನ ನಿರ್ಲಕ್ಷತನದಿಂದ ವೇಗವಾಗಿ ಬಂದ ಸಿಮೆಂಟ್ ಲಾರಿ ಕುರಿ ಹಿಂಡಿನ ಮೇಲೆ ಹರಿದ ಕಾರಣ ಹೋದ ರಭಸಕ್ಕೆ ಕೊಲ್ಹಾರದ ಕುರಿಗಾರ ರಾಮು ಯಲ್ಲವ್ವ ಗೊಲ್ಲರ (19) ತೆಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹಿಂಡು ಕುರಿ ಮೇಯಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಹಿಂಡಿನಲ್ಲಿದ್ದ 18 ಕುರಿಗಳು ಸ್ಥಳದಲ್ಲೇ ಸಾವಿಗೀಡಾಗಿವೆ. ಅಲ್ಲದೇ ಹಲವು ಕುರಿಗಳು ತೀವ್ರ ಗಾಯಗೊಂಡಿವೆ.
ದುರಂತ ಸಂಭವಿಸುತ್ತಲೇ ಲಾರಿ ಚಾಲಕ ಕೃಷ್ಣಾ ನದಿ ಸೇತುವೆ ಬಳಿಯ ಕೊರೆಮ್ಮ ದೇವಸ್ಥಾನದ ಬಳಿ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
ಸುದ್ದಿ ತಿಳಿಯುತ್ತಲೇ ಕೊಲ್ಹಾರ ಪೊಲೀಸ್ ಠಾಣೆ ಪಿಎಸ್ಐ ಪ್ರೀತಮ್ ನಾಯಕ ಸಿಬಂದಿ ಜತೆ ಘಟನಾ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಕುರಿಗಳನ್ನು ಪಶು ಆಸ್ಪತ್ರೆಗೆ ರವಾನಿಸಿದ್ದಾರೆ. ಲಾರಿಯನ್ನು ವಶಕ್ಕೆ ಪಡೆದಿರುವ ಕೊಲ್ಹಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ
Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ
Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.