17ಕ್ಕೆ  ಬೃಹತ್‌ ಯೋಗಥಾನ್‌ ಕಾರ್ಯಕ್ರಮ


Team Udayavani, Sep 3, 2022, 5:01 PM IST

17ಕ್ಕೆ  ಬೃಹತ್‌ ಯೋಗಥಾನ್‌ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ಸೆ.17ರಂದು ಏಕಕಾಲಕ್ಕೆ ರಾಜ್ಯಾದ್ಯಂತ ಯೋಗಥಾನ್‌ ಕಾರ್ಯಕ್ರಮವನ್ನು ನಡೆಸುವ ಮೂಲಕ ಲಿಮ್ಕಾ ಮತ್ತು ಗಿಖಲೆ ಮಾಡಲು ಸರ್ಕಾರವು ಯೋಗಥಾನ್‌ ಕಾರ್ಯಕ್ರಮ ಯೋಜಿಸಿದೆ. ಈ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಕಾರ್ಯೋನ್ಮುಖರಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್‌ ಸೂಚನೆ ನೀಡಿದರು.

ಡೀಸಿ ಕಚೇರಿಯಲ್ಲಿ ನಡೆದ ಯೋಗಥಾನ್‌ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಜಿಲ್ಲಾ ಕೇಂದ್ರದ ಸರ್‌. ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗಥಾನ್‌ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಂದು ಬೆಳಗ್ಗೆ 8 ಗಂಟೆಗೆ ಜಿಲ್ಲೆಯ ವಿವಿಧೆಡೆಯಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಯೋಗಾಸಕ್ತರು ಪಾಲ್ಗೊಳ್ಳುವ ಮೂಲಕ ದಾಖಲೆ ಬರೆಯಬೇಕಾಗಿದೆ. ಇದಕ್ಕೆ ಸಾರ್ವಜನಿಕರು, ವಿದ್ಯಾರ್ಥಿಗಳು, ಯುವಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಿ, ಕಾರ್ಯ ಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ರೋಗ ಮುಕ್ತ ರಾಷ್ಟ್ರಕ್ಕೆ ಸಂಕಲ್ಪ: ಈಗಾಗಲೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲೆಯ ಐತಿಹಾಸಿಕ ಸ್ಥಳಗಳಲ್ಲಿ ಆಯೋಜಿಸುವ ಮೂಲಕ ಯಶಸ್ವಿಗೊಳಿಸಲಾಗಿದೆ. ಅದರ ಮುಂದುವರಿದ ಭಾಗವಾಗಿ ಯೋಗ ಕಾರ್ಯಕ್ರಮ ಜಿಲ್ಲೆಯಾ ದ್ಯಂತ ಸರ್ಕಾರದ ನಿರ್ದೇಶನದಂತೆ ಆಯೋಜಿಸಲಾಗುತ್ತಿದೆ. ಯೋಗವು ಒಂದು ಜೀವನ ಶೈಲಿಯಾಗಿದ್ದು, ಯೋಗದ ಮೂಲಕ ರೋಗ ಮುಕ್ತ ರಾಷ್ಟ್ರ ನಿರ್ಮಾಣದ ಸಂಕಲ್ಪದ ಉದ್ದೇಶದಿಂದ ಯೋಗಾಥಾನ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಿಂದ ರಾಜ್ಯದಲ್ಲಿ ಸುಮಾರು 10 ಲಕ್ಷ ಜನರು ಏಕಕಾಲದಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ಲಿಮ್ಕಾ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌ ಮತ್ತು ವಿಶ್ವದಾಖಲೆ ಮಾಡಲು ಸರ್ಕಾರ ಉದ್ದೇಶಿಸಿದೆ. ಅದರ ಭಾಗವಾಗಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಆಯುಷ್‌ ಇಲಾಖೆ, ನೆಹರೂ ಯುವ ಕೇಂದ್ರ, ಜಿಲ್ಲಾ ರಾಷ್ಟ್ರೀಯ ಸೇವಾ ಯೋಜನಾ (ಎನ್‌ಎಸ್‌ ಎಸ್‌) ಘಟಕ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಯೋಗಥಾನ್‌ ಕಾರ್ಯಕ್ರಮ ಜಿಲ್ಲೆಯಲ್ಲಿ ನಡೆಯಲಿದೆ ಎಂದರು.

ಪರಿಣಿತರಿಂದ ವಿಶೇಷ ಉಪನ್ಯಾಸ: ಯೋಗವು ಮಾನಸಿಕ ಆರೋಗ್ಯ, ಬೊಜ್ಜು ನಿಯಂತ್ರಣ, ಸಕಾರಾತ್ಮಕ ಚಿಂತನೆ, ಒತ್ತಡ ನಿರ್ವಹಣೆ, ರೋಗ ನಿರೋಧಕ ಶಕ್ತಿ ವೃದ್ಧಿ, ಆಧ್ಯಾತ್ಮ, ಸ್ಮರಣಶಕ್ತಿ ಈ ವಿಷಯಗಳ ಕುರಿತು ಯೋಗ ಪರಿಣಿತರು ಹಾಗೂ ನುರಿತ ವೈದ್ಯರಿಂದ ವಿಶೇಷ ಉಪನ್ಯಾಸ ನಡೆಯಲಿದೆ. ಇದರ ಪ್ರಯೋಜನವನ್ನು ಜನರು ಪಡೆದುಕೊಳ್ಳಬೇಕು. ಯೋಗ ಪಟುಗಳು, ತರಬೇತುದಾರರು, ಶಿಕ್ಷಕರು, ಯೋಗ ಸಂಸ್ಥೆಗಳು ಯೋಗಾಥಾನ್‌ನಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಯೋಗಥಾನ್‌-2022 ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ನೋಂದಾಯಿಸಿಕೊಂಡವರು ರಿಜಿಸ್ಟರ್‌ ಮಾಡಿದ ಕ್ಯೂ-ಆರ್‌ ಕೋಡ್‌ನ್ನು ಸ್ಕ್ಯಾನ್‌ ಮಾಡುವ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ, ಕುಡಿಯುವ ನೀರು, ಲಘು ಉಪಹಾರ, ಭದ್ರತೆ, ಸಂಚಾರ ದಟ್ಟಣೆ ನಿರ್ವಹಣೆ, ಜನಸಂದಣಿ ನಿರ್ವಹಣೆ, ಭದ್ರತೆ, ತುರ್ತು ಆರೋಗ್ಯ ಚಿಕಿತ್ಸೆ, ಆ್ಯಂಬುಲೆನ್ಸ್‌ ವ್ಯವಸ್ಥೆ, ಶೌಚಾಲಯ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಿ, ಸಮರ್ಪಕವಾಗಿ ಯೋಗಥಾನ್‌ ಕಾರ್ಯಕ್ರಮವನ್ನು ಆಯೋಜಿಸಲು ಸೂಚಿಸಿದರು. ಜಿಪಂ ಸಿಇಒ ಪಿ.ಶಿವಶಂಕರ್‌, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಅಮರೇಶ್‌, ಜಿಲ್ಲಾ ಆಯುಷ್‌ ಅಧಿಕಾರಿ ತಬೀಬಾ ಬಾನು ಸೇರಿದಂತೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ರೀಡಾ ಅಂಕಣವನ್ನು ನಿಗದಿತ ಜನರಿಗೆ ಒಂದೊಂದು ಅಂಕಣವನ್ನು ಮಾಡಿ, ಅದನ್ನು ವಿಭಾಗಿಸಿ ಪ್ರತಿ ವಿಭಾಗಕ್ಕೂ ಒಬ್ಬ ಯೋಗ ತರಬೇತುದಾರರನ್ನು ನಿಯೋಜಿಸಬೇಕು. ಸ್ವಯಂ ಸೇವಕರನ್ನು ಗುರುತಿಸಿ, ಅವರಿಗೆ ಸೂಕ್ತ ರೀತಿಯಲ್ಲಿ ಸೂಚನೆ ನೀಡಬೇಕು. ಯೋಗಪಟುಗಳಿಗೆ ಪ್ರಥಮ ಚಿಕಿತ್ಸೆ ಕಿಟ್‌, ಟೀ-ಶರ್ಟ್‌ ಸೌಲಭ್ಯ ಕಲ್ಪಿಸಬೇಕು. -ಎನ್‌.ಎಂ.ನಾಗರಾಜ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

M-Kharge-illeness

J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್‌ ಖರ್ಗೆ!

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

1-jjk

Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Police

Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

7

Mangaluru: ಟ್ರಾಫಿಕ್‌ ಸಿಗ್ನಲ್‌ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್‌

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

M-Kharge-illeness

J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್‌ ಖರ್ಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.