ಮಣಿಪಾಲ ಪಬ್: ಕುಡಿದ ಮತ್ತಿನಲ್ಲಿ ವಾಹನ ಚಾಲನೆ; ಎರಡು ಕಾರು ಜಖಂ, ಚಾಲಕ ವಶಕ್ಕೆ
Team Udayavani, Sep 4, 2022, 3:08 PM IST
ಉಡುಪಿ: ಪಬ್ನಲ್ಲಿ ಕುಡಿದ ಮತ್ತಿನಲ್ಲಿ ತನ್ನ ಇನ್ನೋವಾ ಕಾರನ್ನು ಹಿಮ್ಮುಖವಾಗಿ ಚಲಾಯಿಸಿ ಅಪಘಾತ ಮಾಡಿದ ಕಾರು ಚಾಲಕ ಸುಹಾಸ್ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.3ರಂದು ರಾತ್ರಿ ಮಣಿಪಾಲದ ಪಬ್ಗ ಬಂದಿದ್ದ ಗ್ರಾಹಕ ಪಬ್ನಿಂದ ಹೊರಗೆ ಹೋಗುವಾಗ ತನ್ನ ಇನ್ನೋವಾ ಕಾರನ್ನು ಕುಡಿದ ಮತ್ತಿನಲ್ಲಿ ಹಿಮ್ಮುಖವಾಗಿ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿದ್ದಾನೆ. ಪರಿಣಾಮ ಪಬ್ ನೌಕರ ವಿಕ್ರಾಂತ್ ಅವರ ಕಾಲಿಗೆ ಗಾಯ ಉಂಟು ಮಾಡಿದ್ದಲ್ಲದೆ ಪಾರ್ಕಿಂಗ್ನಲ್ಲಿದ್ದ ಸ್ಕೋಡಾ ಮತ್ತು ಫಾರ್ಚೂನರ್ ವಾಹನಕ್ಕೆ ಢಿಕ್ಕಿ ಹೊಡೆದಿದ್ದಾರೆ.
ಇದನ್ನೂ ಓದಿ: ಬಿಜೆಪಿ ಅಧಿಕಾರದಲ್ಲಿ ದೇಶದಲ್ಲಿ ದ್ವೇಷ ಹೆಚ್ಚಾಗಿದೆ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
ಜಿಎ08ಎಫ್ 3693 ನೋಂದಣಿ ಸಂಖ್ಯೆಯ ಕಪ್ಪು ಬಣ್ಣದ ಇನ್ನೋವಾ ಕಾರನ್ನು ಅವರು ಚಲಾಯಿಸುತ್ತಿದ್ದರು. ಚಾಲನೆ ವೇಳೆ ಸುಹಾಸ್ ಮದ್ಯ ಸೇವನೆ ಮಾಡಿದ್ದು ದೃಢಪಟ್ಟಿದೆ. ಇನ್ನಿತರ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ತಪಾಸಣೆಗೆ ಒಳಪಡಿಸಲಾಗಿದೆ. ಇನ್ನೋವಾ ಕಾರಿನಲ್ಲಿದ್ದ ಸುಹಾಸ್ ಅವರ ಸ್ನೇಹಿತರಾದ ಭರತ್, ನವೀನ್ ಕಲ್ಯಾಣ್, ನಿರ್ಮಲಾ, ಕವನಾ ಅವರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ.
ಇವರೆಲ್ಲರೂ ಬೆಂಗಳೂರು ಮತ್ತು ಶಿವಮೊಗ್ಗ ಮೂಲದವರಾಗಿದ್ದು, ಬೆಂಗಳೂರಿನಲ್ಲಿ, ಐಟಿ ಸೆಕ್ಟರ್ನಲ್ಲಿ ನೌಕರಿ ಮಾಡುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಇವರೆಲ್ಲರೂ ಸಂಬಂಧಿಕರ ಮದುವೆಗೆ ಉಡುಪಿಗೆ ಬಂದಿದ್ದು, ರಾತ್ರಿ ಪಬ್ಗೆ ಬಂದಿದ್ದರು. ಈ ಅಪಘಾತದಿಂದ 1 ಸ್ಕೋಡಾ ಕಾರು ಹಾಗೂ ಮತ್ತೂಂದು ಫಾರ್ಚುನರ್ ಕಾರು ಜಖಂಗೊಂಡಿದೆ. ಫಾರ್ಚೂನರ್ ಕಾರು ಚಾಲಕ ರೋಶನ್ ಅವರು ಠಾಣೆಯಲ್ಲಿ ದೂರು ನೀಡಿದ್ದಾರೆ. ಅಪಘಾತಪಡಿಸಿದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.