ಮೂಲ ನಕಾಶೆ ಬದಲಿಸಿ ಅಂಬೇಡ್ಕರ್‌ ಭವನ ನಿರ್ಮಾಣ


Team Udayavani, Sep 5, 2022, 2:10 PM IST

ಮೂಲ ನಕಾಶೆ ಬದಲಿಸಿ ಅಂಬೇಡ್ಕರ್‌ ಭವನ ನಿರ್ಮಾಣ

ಪಿರಿಯಾಪಟ್ಟಣ: ಮೂಲ ನಕಾಶೆ ಬದಲಿಸಿ ತರಾತುರಿಯಲ್ಲಿ ಡಾ.ಅಂಬೇಡ್ಕರ್‌ ಭವನ ನಿರ್ಮಾಣ ಕಾಮಗಾರಿ ಮುಗಿಸಿ ಕೈ ತೊಳೆದುಕೊಳ್ಳಲು ಅವಣಿಸುತ್ತಿರುವ ನಿರ್ಮಿತಿ ಕೇಂದ್ರದ ಅಧಿಕಾರಿಗಳ ವಿರುದ್ಧ ಅಂಬೇಡ್ಕರ್‌ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಬಿ.ಎಂ.ರಸ್ತೆ, ರಾಜ್ಯ ಹೆದ್ದಾರಿಗೆ ಹೊಂದಿಕೊಂಡಂತೆ ಭವನ ನಿರ್ಮಿಸುತ್ತಿದ್ದು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಮಾಜಿ ಶಾಸಕ ಕೆ.ವೆಂಕಟೇಶ್‌ ಅವರು 5 ಕೋಟಿ ರೂ.ನಲ್ಲಿ ಮೂಲ ನಕಾಶೆ ತಯಾರಿಸಿ, ನಿರ್ಮಿತಿ ಕೇಂದ್ರಕ್ಕೆ ಭವನ ನಿರ್ಮಾಣದ ಜವಾಬ್ದಾರಿ ನೀಡಿದ್ದರು. ಆದರೆ, ಸರ್ಕಾರ ನಿಗದಿತ ವೇಳೆಗೆ ಪೂರ್ಣ ಪ್ರಮಾಣದ ಹಣ ಬಿಡುಗಡೆ ಮಾಡದ ಕಾರಣ, ಮೊದಲ ಮಹಡಿ ಮುಗಿಸಿ, 2ನೇ ಹಂತದ ಚಾವಣಿ ಕಾಮಗಾರಿ ಆರಂಭ ಆಗುವಷ್ಟರಲ್ಲಿ ಬಿಡುಗಡೆ ಆದ ಹಣ ಪೂರ್ಣ ಖರ್ಚಾಗಿ, ಹಲವು ವರ್ಷ ಭವನದ ಕಾಮಗಾರಿ ನನೆಗುದಿಗೆ ಬಿದ್ದಿತ್ತು.

ಗುಣಮಟ್ಟದ ಕಾಮಗಾರಿಗೆ ಸೂಚನೆ: ಈ ಸಂದರ್ಭದಲ್ಲಿ ಶಾಸಕ ಕೆ.ಮಹದೇವ್‌, ಭವನ ಹಾಗೆ ಉಳಿಯುವುದು ಬೇಡ ಎಂದು ಮೂಲ ನೀಲ ನಕಾಶೆ ಬದಲಾಯಿಸಿ, ಗುಣಮಟ್ಟದ ಕಾಮಗಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 1.50 ಕೋಟಿ ರೂ. ಅನ್ನು ಆರಂಭಿಕವಾಗಿ ಸರ್ಕಾರದಿಂದ ಬಿಡುಗಡೆ ಮಾಡಿಸಿ, ಕಾಮಗಾರಿ ಚುರುಕುಗೊಳಿಸುವಂತೆ ಸೂಚನೆ ನೀಡಿದರು. ಆದರೆ, ಭವನ ನಿರ್ಮಾಣ ಮಾಡುತ್ತಿರುವ ಮುಂಭಾಗ ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮದ ಎಂಜಿನಿಯರ್‌ಗಳು ನಡೆಸಿರುವ ರಸ್ತೆ, ಚರಂಡಿ ಕಾಮಗಾರಿಯೂ ಅವೈಜ್ಞಾನಿಕವಾಗಿದೆ.

ಎತ್ತರದಲ್ಲಿ ಚರಂಡಿ ನಿರ್ಮಾಣ: ಇದನ್ನು ಗಮನಿಸಿದ ಕರ್ನಾಟಕ ದಲಿತ ಚಳವಳಿ ನವ ನಿರ್ಮಾಣ ವೇದಿಕೆಯ ಮುಖಂಡರು, ಪ್ರತಿಭಟನೆ ನಡೆಸಿದ ಪರಿಣಾಮ, ತಹಶೀಲ್ದಾರ್‌ ಕೆ.ಚಂದ್ರಮೌಳಿ, ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮದ ಅಧಿಕಾರಿಗಳು, ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಭವನದ ಆವರಣದಲ್ಲಿ ಯಾವುದೇ ನೀರು ನಿಲ್ಲದೆ ಹೊರಗೆ ಹೋಗುವಂತೆ ಸೂಕ್ತ ಚರಂಡಿ ವ್ಯವಸ್ಥೆ ಮಾಡ ಬೇಕೆಂದು ಹೇಳಿದ್ದರು. ಆದರೆ, ಭವನದ ಕಟ್ಟಡದಿಂದ 4 ಅಡಿ ಎತ್ತರಕ್ಕೆ ನಿರ್ಮಿಸಿರುವ ಚರಂಡಿಯಿಂದ ಆಗುತ್ತಿರುವ ತೊಂದರೆ ಸರಿಪಡಿ ಸುವಂತೆ ವೇದಿಕೆ ಮುಖಂಡರು ಹೇಳಿಕೊಂಡರೂ, ನಿರ್ಮಿತಿ ಕೇಂದ್ರದ ಎಂಜಿನಿಯರ್‌, ಹಿರಿಯ ಅಧಿಕಾರಿಗಳು ಯಾವುದೇ ಕ್ರಮ ವಹಿಸಿಲ್ಲ.

ಮೂಲ ನಕಾಶೆ ಬದಲಾವಣೆ: ಇಷ್ಟೆಲ್ಲ ಅವ್ಯವಸ್ಥೆಯ ನಡುವೆ ಕಾಟಾಚಾರಕ್ಕೆ ಭವನದ ಕಾಮಗಾರಿ ಮುಗಿಸಿ ನವೆಂಬರ್‌ ತಿಂಗಳಲ್ಲಿ ಕಟ್ಟಡ ಉದ್ಘಾಟಿಸಿ ಕೈ ತೊಳೆದುಕೊಳ್ಳಬೇಕೆಂಬ ಆತುರದಲ್ಲಿ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಇದ್ದಾರೆ. ಹಣದ ಕೊರತೆಯಿಂದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನ ಕಟ್ಟಡದ ಮೂಲ ನಕಾಶೆಯನ್ನು ಬದಲಾಯಿಸಿ, ನಿರ್ಮಾಣ ಮಾಡಲಾಗುತ್ತಿದೆ. ಹಣದ ಅನುಕೂಲಕ್ಕೆ ತಕ್ಕಂತಾದರೂ ಗುಣಮಟ್ಟದಲ್ಲಿ ಭವನದ ಕಟ್ಟಡ ನಿರ್ಮಾಣ ಮಾಡಿ ಸೂಕ್ತ ಚರಂಡಿ ವ್ಯವಸ್ಥೆ ಮಾಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ವೇದಿಕೆಯ ಮುಖಂಡರು ಪತ್ರಿಕೆಗೆ ತಿಳಿಸಿದ್ದಾರೆ.

 

-ಪಿ.ಎನ್‌.ದೇವೇಗೌಡ

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.