ಪುನೀತ್ ‘ಲಕ್ಕಿಮ್ಯಾನ್’ ಗೆ ‘ಯು’ ಸರ್ಟಿಫಿಕೇಟ್
Team Udayavani, Sep 6, 2022, 4:36 PM IST
ಪುನೀತ್ ರಾಜ್ಕುಮಾರ್ ಪ್ರಮುಖ ಪಾತ್ರವೊಂದರಲ್ಲಿ ನಟಿಸಿರುವ “ಲಕ್ಕಿಮ್ಯಾನ್’ ಚಿತ್ರ ಸೆ. 09ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್, ಟ್ರೇಲರ್ಗಳಿಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಇತ್ತೀಚೆಗೆ ಈ ಚಿತ್ರಕ್ಕೆ ಸೆನ್ಸಾರ್ ಆಗಿದ್ದು, “ಯು’ ಪ್ರಮಾಣ ಪತ್ರ ಸಿಕ್ಕಿದೆ.
ಸಾಮಾನ್ಯವಾಗಿ ಬಹುತೇಕ ಸಿನಿಮಾಗಳಿಗೆ “ಯು/ಎ’ ಸಿಗುತ್ತದೆ. ಆದರೆ, “ಲಕ್ಕಿಮ್ಯಾನ್’ ಔಟ್ ಅಂಡ್ ಔಟ್ ಫ್ಯಾಮಿಲಿ ಡ್ರಾಮಾವಾಗಿದ್ದು, ಈಗ “ಯು’ ಪ್ರಮಾಣ ಪತ್ರ ಪಡೆದುಕೊಂಡಿದೆ. ಈ ಚಿತ್ರದಲ್ಲಿ ಪುನೀತ್ ರಾಜ್ಕುಮಾರ್ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರವೇ ದೇವರಾಗಿರುವುದರಿಂದ ಅಭಿಮಾನಿ ಗಳು ಕೂಡಾ ತಮ್ಮ ನೆಚ್ಚಿನ “ದೇವರ’ನ್ನು ತೆರೆಮೇಲೆ ನೋಡಲು ಉತ್ಸುಕರಾಗಿದ್ದಾರೆ.
ಇನ್ನು, ಈ ಚಿತ್ರದಲ್ಲಿ “ಡಾರ್ಲಿಂಗ್’ ಕೃಷ್ಣ ನಾಯಕರಾಗಿ ನಟಿಸಿದ್ದಾರೆ. ಇವರಿಗೆ ಜೋಡಿಯಾಗಿ ಸಂಗೀತಾ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಕೂಡಾ ಈ ಚಿತ್ರದ ಬಗ್ಗೆ ಸಾಕಷ್ಟು ಎಕ್ಸೈಟ್ ಆಗಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಾಯಕ ಕೃಷ್ಣ, “ಪುನೀತ್ ಅವರ ಜೊತೆ ಒಂದೆರಡು ಸಿನಿಮಾಗಳಲ್ಲಿ ನಟಿಸಿದ್ದೆ. ಆದರೆ, ಹೆಚ್ಚು ದೃಶ್ಯಗಳಿರಲಿಲ್ಲ. “ಲಕ್ಕಿಮ್ಯಾನ್’ನಲ್ಲಿ ಪುನೀತ್ ಅವರೊಂದಿಗೆ ತುಂಬಾ ಸೀನ್ಗಳಿವೆ. ಇವತ್ತು ಅವರಿಲ್ಲ ಎಂಬುದನ್ನು ಊಹಿಸಿಕೊಳ್ಳಲು ಕಷ್ಟವಾಗುತ್ತಿದೆ’ ಎಂದ ಕೃಷ್ಣ “ಲಕ್ಕಿಮ್ಯಾನ್’ ಎಲ್ಲರಿಗೂ ಇಷ್ಟವಾಗುವ ಸಿನಿಮಾ ಎನ್ನಲು ಮರೆಯಲಿಲ್ಲ.
ಅಂದಹಾಗೆ, ಇದು “ಓ ಮೈ ಕಡವುಳೆ’ ಎಂಬ ತಮಿಳು ಚಿತ್ರದ ರೀಮೇಕ್. ಈ ಚಿತ್ರವನ್ನು ನೋಡಿ ಕೃಷ್ಣ ತುಂಬಾ ಇಷ್ಟಪಟ್ಟಿದ್ದರಂತೆ. ಜೊತೆಗೆ ಈ ಪಾತ್ರ ತನಗೆ ಸಿಕ್ಕರೆ ಚೆನ್ನಾಗಿರುತ್ತದೆ ಎಂದುಕೊಂಡಿದ್ದರಂತೆ. ಅದಾಗಿ ಮೂರು ತಿಂಗಳಲ್ಲೇ “ಲಕ್ಕಿಮ್ಯಾನ್’ ಕುರಿತಾಗಿ ಕರೆ ಬಂತಂತೆ.
ನಾಯಕಿ ಸಂಗೀತಾ ಶೃಂಗೇರಿ ಇಲ್ಲಿ ಶ್ರೀಮಂತ ಹುಡುಗಿಯಾಗಿ, ಮದುವೆ ಬಗ್ಗೆ ತನ್ನದೇ ಆದ ಒಂದಷ್ಟು ಸಂದೇಹಗಳನ್ನಿಟ್ಟುಕೊಂಡಿರುವ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರಂತೆ. ಚಿತ್ರದಲ್ಲಿ ರೋಶನಿ ಪ್ರಕಾಶ್ ಕೂಡಾ ನಟಿಸಿದ್ದಾರೆ. ಈ ಚಿತ್ರವನ್ನು ಮೀನಾಕ್ಷಿ ಸುಂದರಂ ಹಾಗೂ ಆರ್.ಸುಂದರಂ ಕಾಮರಾಜ್ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.