ಟಿ 20 ರ್ಯಾಂಕಿಂಗ್;ಬಾಬರ್ ಅಜಮ್ 2ನೇ ಸ್ಥಾನಕ್ಕೆ: ಸೂರ್ಯಕುಮಾರ್ ಗೆ 4 ನೇ ಸ್ಥಾನ
Team Udayavani, Sep 7, 2022, 4:33 PM IST
ದುಬೈ: ಪಾಕಿಸ್ತಾನದ ವಿಕೆಟ್ಕೀಪರ್-ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಬುಧವಾರ (ಸೆ 7) ವಾರದ ನವೀಕರಣದ ನಂತರ ಐಸಿಸಿ ಪುರುಷರ ಟಿ 20 ಆಟಗಾರರ ಶ್ರೇಯಾಂಕದಲ್ಲಿ ಬ್ಯಾಟ್ಸ್ ಮ್ಯಾನ್ ಗಳ ಪೈಕಿ ತಮ್ಮ ಆರಂಭಿಕ ಪಾಲುದಾರ ಮತ್ತು ನಾಯಕ ಬಾಬರ್ ಅಜಮ್ ಅವರನ್ನು ಹಿಂದಿಕ್ಕಿದ್ದಾರೆ.
ದುಬೈನಲ್ಲಿ ನಡೆದ ಸೂಪರ್ ಫೋರ್ ಪಂದ್ಯದಲ್ಲಿ ಭಾರತದ ವಿರುದ್ಧ 51 ಎಸೆತಗಳಲ್ಲಿ 71 ರನ್, ಗ್ರೂಪ್ ಎ ಪಂದ್ಯದಲ್ಲಿ 57 ಎಸೆತಗಳಲ್ಲಿ 78 ರನ್ ಗಳಿಸಿದ ರಿಜ್ವಾನ್ ಪ್ಲೇಯರ್ ಆಫ್ ದಿ ಮ್ಯಾಚ್ ಆಗುವ ಮೂಲಕ ಮೊದಲ ಬಾರಿಗೆ ಉನ್ನತ ಸ್ಥಾನವನ್ನು ಪಡೆದುಕೊಂಡರು.
ಒಟ್ಟು 1,155 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದ ಬಾಬರ್ ಮತ್ತು 313 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದ ಮಿಸ್ಬಾ-ಉಲ್-ಹಕ್ ನಂತರ ಟಿ20 ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ನಂ.1 ಸ್ಥಾನ ಪಡೆದ ಪಾಕಿಸ್ತಾನದ ಮೂರನೇ ಬ್ಯಾಟ್ಸ್ ಮ್ಯಾನ್ ರಿಜ್ವಾನ್ ಅವರಾಗಿದ್ದಾರೆ.
ಏಷ್ಯಾಕಪ್ನಲ್ಲಿ ಕೆಲವು ಉತ್ತಮ ಪ್ರದರ್ಶನಗಳ ನಂತರ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನದ ಆಟಗಾರರು ಉತ್ತಮ ಪ್ರಗತಿ ಸಾಧಿಸಿದ್ದು, ಭಾರತದ ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ.
ಬಾಬರ್ ಅಜಮ್ (ಪಾಕಿಸ್ತಾನ) – 794 ಪಾಯಿಂಟ್ಸ್ ಗಳೊಂದಿಗೆ 2 ನೇ ಸ್ಥಾನ, ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಾಮ್ 792 ಪಾಯಿಂಟ್ಸ್ ಗಳೊಂದಿಗೆ 3 ನೇ ಸ್ಥಾನ, 775 ಪಾಯಿಂಟ್ಸ್ ಗಳೊಂದಿಗೆ ಸೂರ್ಯಕುಮಾರ್ ಯಾದವ್ 4 ನೇ ಸ್ಥಾನ, 731 ಪಾಯಿಂಟ್ಸ್ ಗಳೊಂದಿಗೆ ಇಂಗ್ಲೆಂಡ್ ನ ಡೇವಿಡ್ ಮಲಾನ್ 5ನೇ ಸ್ಥಾನದಲ್ಲಿದ್ದಾರೆ.
ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಮ್ಮ ಸೂಪರ್ ಫೋರ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 72 ರನ್ ಗಳಿಸಿ ನಾಲ್ಕು ಸ್ಥಾನಗಳ ಮುಂದೆ ಬಂದು 13 ನೇ ಸ್ಥಾನಕ್ಕೆ ತಲುಪಿದ್ದಾರೆ ಮಾಜಿ ನಾಯಕ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧ 60 ರನ್ ಗಳಿಸಿ ನಾಲ್ಕು ಸ್ಥಾನಗಳನ್ನು ಗಳಿಸಿ ಪಟ್ಟಿಯಲ್ಲಿ 29 ನೇ ಸ್ಥಾನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Womens T20 World Cup: ಪಾಕ್ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತ ಭಾರತ
INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್ ಯಾರು?
T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್
Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್ ಸವಾಲು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.