ಮೀನುಗಾರರ ಸಾಲ ಮನ್ನಾ: 1.50 ಕೋಟಿ ರೂ. ವಂಚನೆ


Team Udayavani, Sep 10, 2022, 12:27 AM IST

ಮೀನುಗಾರರ ಸಾಲ ಮನ್ನಾ: 1.50 ಕೋಟಿ ರೂ. ವಂಚನೆ

ಉಪ್ಪುಂದ: ಮಹಿಳಾ ಮೀನುಗಾರರ ಸಾಲ ಮನ್ನಾ ಯೋಜನೆ ದುರುಪಯೋಗಪಡಿಸಿಕೊಂಡು 1.50 ಕೋ.ರೂ. ವಂಚನೆ ಮಾಡಿರುವುದಾಗಿ ಉಪ್ಪುಂದ ಶ್ರೀ ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್‌ ವಿರುದ್ಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮೊತ್ತದ ವಂಚನೆ ಆಗಿರುವುದರಿಂದ ಪ್ರಕರಣದ ತನಿಖೆಯನ್ನು ಉಡುಪಿಯ ಸೆನ್‌ ಠಾಣೆಗೆ ವರ್ಗಾಯಿಸಲಾಗಿದೆ.

ಮೂಕಾಂಬಿಕಾ ವಿವಿದೋದ್ಧೇಶ ಸಹಕಾರಿ ಸಂಘದ ಉಪಾಧ್ಯಕ್ಷ ರಾಮ ಖಾರ್ವಿ ಅವರು ನೀಡಿದ ದೂರಿನಂತೆ ಸಂಘದ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಶ್ರೀ ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್‌ ರಚಿಸಿಕೊಂಡಿದ್ದು, ಅದರ ಹೆಸರಲ್ಲಿ ಚೇರ್ಮನ್‌ ಬೇಬಿ ಕೊಠಾರಿ, ಕಾರ್ಯದರ್ಶಿ ಹರೀಶ್‌ ಖಾರ್ವಿ, ಖಜಾಂಚಿ ರಾಮದಾಸ ಖಾರ್ವಿ ಅವರು ಯೂನಿಯನ್‌ ಬ್ಯಾಂಕಿನ ಕೊಲ್ಲೂರು ಶಾಖಾ ವ್ಯವಸ್ಥಾಪಕ ರಾಮಕೃಷ್ಣ ದೇವಾಡಿಗರೊಂದಿಗೆ ಒಳ ಒಪ್ಪಂದ ಮಾಡಿಕೊಂಡು, ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸಾಲ ಮನ್ನಾ ಮಾಡಿಸಿಕೊಂಡು ಹಣ ದುರ್ಬಳಕೆ ಮಾಡಿರುವುದಾಗಿ ತಿಳಿಸಿದ್ದಾರೆ.

ವಂಚನೆ ಹೇಗೆ?
ಈ ಟ್ರಸ್ಟ್‌ ಕೊಲ್ಲೂರು ಯೂನಿಯನ್‌ ಬ್ಯಾಂಕ್‌ನಲ್ಲಿ 100ಕ್ಕೂ ಹೆಚ್ಚು ಮಹಿಳಾ ಮೀನುಗಾರರು ಹೊರತಾಗಿರುವ ಸಂಘಗಳ ಸಾಲವನ್ನು ಮೀನುಗಾರರ ಸಾಲ ಎಂದು ಅರ್ಜಿ ಸಲ್ಲಿಸಿ ಮನ್ನಾ ಮಾಡಿಸಿಕೊಂಡಿದೆ. ಸುಮಾರು 1.50 ಕೋ.ರೂ.ಗೂ ಮಿಕ್ಕಿ ಸಾಲ ಮನ್ನಾ ಆಗಿರುವುದು ಕಂಡುಬಂದಿದೆ. ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಕಡಿಮೆ ಬಡ್ಡಿಗೆ ಶೇ. 10ಕ್ಕೆ ಸಾಲ ಮಂಜೂರು ಮಾಡಿಸಿ, ತಮ್ಮ ಟ್ರಸ್ಟ್‌ ಸಾಲ ಕೊಟ್ಟ ರೀತಿ ಬಿಂಬಿಸಿ, ಸಾಲ ಮರುಪಾವತಿ ಸಮಯದಲ್ಲಿ ಶೇ. 14 ಬಡ್ಡಿ ದರದಂತೆ ಟ್ರಸ್ಟ್‌ ಹೆಸರಿನ ಪಾಸ್‌ ಪುಸ್ತಕದಲ್ಲಿ ಅಸಲು ಮತ್ತು ಬಡ್ಡಿ ನಮೂದಿಸಿ ಸಾಲ ವಸೂಲಿ ಮಾಡುತ್ತಿದ್ದಾರೆ. ಮಾತ್ರವಲ್ಲದೇ ರಾಷ್ಟ್ರೀಕೃತ ಬ್ಯಾಂಕಿನಿಂದ ತೆಗೆದ ಸಾಲದ ಎಲ್ಲ ವಿವರವನ್ನು ತಮ್ಮಲ್ಲಿ ಇಟ್ಟುಕೊಂಡು ಟ್ರಸ್ಟ್‌ ಹೆಸರಿನ ಪಾಸ್‌ ಪುಸ್ತಕದಲ್ಲಿ ಸಾಲದ ವಿವರ ತಿಳಿಸಿದ್ದಾರೆ ಎಂಬ ಬಗ್ಗೆ ದೂರು ದಾಖಲಾಗಿದೆ.

ಸರಕಾರದಿಂದ ಸಾಲ ಮನ್ನಾ ಆಗಿರುವ ಹಣವು ಸ್ವಸಹಾಯ ಸಂಘಗಳ ಬ್ಯಾಂಕ್‌ ಖಾತೆಗೆ ಜಮೆಯಾಗಿದೆ. ಆದರೆ ಇದನ್ನು ಸಂಘದ ಸದಸ್ಯರ ಗಮನಕ್ಕೆ ತರದೆ ಡ್ರಾ ಮಾಡಿರುವುದು ಮತ್ತು ಟ್ರಸ್ಟ್‌ನ ಖಾತೆಗೆ ವರ್ಗಾವಣೆ ಮಾಡಿದ್ದರಿಂದ ವಂಚನೆ ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Gangolli: Disgusted person commits suicide

Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.