ಸಹಕಾರಿ ಸಂಸ್ಥೆ ಅಭಿವೃದ್ದಿಗೆ ಗ್ರಾಹಕರ ಸಹಕಾರ ಅಗತ್ಯ
Team Udayavani, Sep 10, 2022, 5:23 PM IST
ಸಿಂದಗಿ: ಸಹಕಾರ ಕ್ಷೇತ್ರ ಅಭಿವೃದ್ಧಿಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಎ.ಎಸ್. ಬಿರಾದಾರ ಹೇಳಿದರು.
ಪಟ್ಟಣದ ಅನಂತಲಕ್ಷ್ಮೀ ಸಭಾಭವನದಲ್ಲಿ ಜರುಗಿದ ಗಜಾನನ ವಿವಿಧೋದ್ದೇಶ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ 17ನೇ ವಾರ್ಷಿಕ ಸರ್ವಸಾಧಾರಣ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸೌಹಾರ್ದ ಸಹಕಾರಿ ಸಂಸ್ಥೆಗಳು ಬೆಳೆಯಬೇಕಾದಲ್ಲಿ ಗ್ರಾಹಕರ ಸಹಕಾರ ಅಗತ್ಯ. ಗ್ರಾಹರು ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಸದುಪಯೋಗ ಪಡೆದುಕೊಳ್ಳಬೇಕು. ಇಲ್ಲಿ ಸಾಲ ಪಡೆದು ಅದನ್ನು ಸದುಪಯೋಗ ಮಾಡಿಕೊಂಡು ಜೀವನದಲ್ಲಿ ಆರ್ಥಿಕ ಜೀವನ ಸುಧಾರಿಸಿಕೊಳ್ಳಬೇಕು ಎಂದು ಹೇಳಿದರು. ಪಟ್ಟಣದ ಗಜಾನನ ವಿವಿಧೋದ್ದೇಶ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದೆ. ಪ್ರತಿ ವರ್ಷ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹ ನೀಡುತ್ತಿರುವ ಕಾರ್ಯ ಶ್ಲಾಘನಿಯ ಎಂದು ಹೇಳಿದರು.
ಕಸಾಪ ತಾಲೂಕಾಧ್ಯಕ್ಷ ರಾಜಸೇಖರ ಕೂಚಬಾಳ ಮಾತನಾಡಿ, ಸೌಹಾರ್ದ ಪತ್ತಿನ ಸಹಕಾರಿ ಸಂಸ್ಥೆಗಳು ಆರ್ಥಿಕ ವ್ಯವಸ್ಥೆ ಅಭಿವೃದ್ಧಿಯಲ್ಲಿ ತನ್ನದೆಯಾದ ಪಾತ್ರ ವಹಿಸುತ್ತಿದೆ. ಸಿಂದಗಿ ಪಟ್ಟಣದ ಮದ್ಯಮ ವರ್ಗದ ಜನತೆಗೆ ಆರ್ಥಿಕ ಸಹಾಯ ಮಾಡುವ ಕಾಮಧೇನು, ಕಲ್ಪವೃಕ್ಷವಾಗಿ ಗಜಾನನ ವಿವಿಧೋದ್ದೇಶ ಸೌಹಾರ್ದ ಪತ್ತಿನ ಸಹಕಾರಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.
ಗಜಾನನ ವಿವಿಧೋದ್ದೇಶ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಮಾತನಾಡಿ, 2005 ರಲ್ಲಿ 4 ಲಕ್ಷ ಬಂಡವಾಳದೊಂದಿಗೆ ಆರಂಭವಾದ ಈ ಸಂಸ್ಥೆ 17 ವರ್ಷದಲ್ಲಿ ಸಂಸ್ಥೆಯ ಒಟ್ಟು ದುಡಿಯುವ ಬಂಡವಾಳ 20.20 ಕೋಟಿ ರೂ. ಆಗಿದೆ. ಪ್ರಸಕ್ತ ವರ್ಷದಲ್ಲಿ 54.57 ಲಕ್ಷ ರೂ. ಲಾಭದಲ್ಲಿದೆ ಎಂದರು.
ಇದೇ ಸಂದರ್ಭದಲ್ಲಿ 2021-22 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.80 ಅಂಕ ಪಡೆದು ಉತ್ತಮ ಸಾಧನೆ ಮಾಡಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಸಂಸ್ಥೆ ಉಪಾಧ್ಯಕ್ಷ ಎಸ್.ಆರ್. ಪೋತದಾರ, ನಿರ್ದೇಶಕರಾದ ಡಾ| ಗಿರೀಶ ಕುಲಕರ್ಣಿ, ವಿಜಯಕುಮಾರ ಕುಲಕರ್ಣಿ, ಶರದ್ ನಾಡಗೌಡ, ಚಿಂತಾಮಣಿ ಕುಲಕರ್ಣಿ, ಆನಂದರಾವ್ ಕುಲಕರ್ಣಿ, ವಿವೇಕಾನಂದ (ನಾರಾಯಣ) ಕುಲಕರ್ಣಿ, ಭೀಮಾಶಂಕರ ಕುಲಕರ್ಣಿ, ದಯಾನಂದ ಪತ್ತಾರ, ಎಂ.ಎ. ಸಿಂದಗೇರಿ, ಎಸ್.ಎಸ್. ಸೋಮಯಾಜಿ, ವಿ.ವೈ. ಮಿರ್ಜಿಕರ, ವ್ಯವಸ್ಥಾಪಕ ಅವಧೂತ ಜೋಶಿ ವೇದಿಕೆಯಲ್ಲಿದ್ದರು. ಹಿರಿಯರಾದ ಪಂಡಿತ್ ಕುಲಕರ್ಣಿ, ಎಚ್.ಟಿ. ಕುಲಕರ್ಣಿ ಸೇರಿದಂತೆ ಸಹಕಾರಿ ಸದಸ್ಯರು, ಬ್ಯಾಂಕ್ ಸಿಬ್ಬಂ ದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪವನ್ ಕುಲಕರ್ಣಿ ಸ್ವಾಗತಿಸಿದರು. ಸತೀಶ ಕುಲಕರ್ಣಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ
Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ
Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.