ನರೇಗಾದಡಿ ಕಾಲುಸಂಕ ನಿರ್ಮಾಣಕ್ಕೆ ಸಿದ್ಧತೆ : ಕಾಮಗಾರಿಗೆ ಮಳೆ ಅಡ್ಡಿ


Team Udayavani, Sep 11, 2022, 12:32 PM IST

ನರೇಗಾದಡಿ ಕಾಲುಸಂಕ ನಿರ್ಮಾಣಕ್ಕೆ ಸಿದ್ಧತೆ : ಕಾಮಗಾರಿಗೆ ಮಳೆ ಅಡ್ಡಿ

ಉಡುಪಿ: ಕಾಲು ಸಂಕಗಳನ್ನು ನರೇಗಾದಡಿ ನಿರ್ಮಿಸಲು ಈಗಾಗಲೇ ಜಿ.ಪಂ.ನಿಂದ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದರೂ ನಿರಂತರ ಮಳೆ ಹಾಗೂ ನದಿ, ತೊರೆಗಳಲ್ಲಿ ನೀರಿನ ಪ್ರಮಾಣ ಹೆಚ್ಚಿರುವುದರಿಂದ ನಿರ್ಮಾಣ ಸಾಧ್ಯ ವಾಗುತ್ತಿಲ್ಲ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ದುಃಸ್ಥಿತಿಯಲ್ಲಿರುವ ಕಾಲುಸಂಕ ಹಾಗೂ ಕಾಲುಸಂಕ ಅಗತ್ಯ ಇರುವ ಗ್ರಾ.ಪಂ.ಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಎಲ್ಲ ಗ್ರಾ.ಪಂ.ಗಳ ಪಿಡಿಒಗಳು ಈ ಸಂಬಂಧ ವರದಿಯನ್ನು ಜಿ.ಪಂ. ಸಿಇಒ ಅವರಿಗೆ ಸಲ್ಲಿಸಿದ್ದಾರೆ. ಸಾಧ್ಯವಾದ ಎಲ್ಲ ಕಡೆಗಳಲ್ಲೂ ನರೇಗಾ ಯೋಜನೆಯಡಿ ಕಾಲುಸಂಕ ನಿರ್ಮಿಸಲು ಸೂಚನೆಯನ್ನು ನೀಡಲಾಗಿದೆ. ಅದರಂತೆ ಗ್ರಾ.ಪಂ. ಹಂತದಲ್ಲಿ ನರೇಗಾದಡಿ ಕಾಲು ಸಂಕಗಳ ನಿರ್ಮಾಣಕ್ಕೆ ಕಾರ್ಯಯೋಜನೆಯನ್ನು ಸಿದ್ಧಪಡಿಸಲಾಗಿದೆ.
ಈವರೆಗೂ ಕಾಲುಸಂಕ ನಿರ್ಮಾಣವನ್ನು ನರೇಗಾದಡಿ ಮಾಡುತ್ತಿರಲಿಲ್ಲ. ಈ ವರ್ಷ ಸುಮಾರು 3.50 ಲಕ್ಷ ರೂ. ವರೆಗಿನ ಕಾಮಗಾರಿಯನ್ನು ನರೇಗಾದ ಅಡಿ ಮಾಡಲು ಅವಕಾಶ ನೀಡಿರುವ ಜತೆಗೆ ಕಾಮಗಾರಿಗೆ ಸಂಬಂಧಿಸಿದ ಪರಿಕರಗಳ ಬಿಲ್‌ ಪಾವತಿಯನ್ನೂ ಶೀಘ್ರ ಮಾಡುವ ಬಗ್ಗೆ ಸರಕಾರದ ಹಂತದಲ್ಲಿ ಚಿಂತನೆ ನಡೆಯುತ್ತಿದೆ. ಕೂಲಿ ಹಣ ಶೀಘ್ರ ಉದ್ಯೋಗ ಕಾರ್ಡ್‌ ಹೊಂದಿದವರ ಖಾತೆಗೆ ನೇರ ಜಮಾ ಆಗಲಿದೆ. ಪರಿಕರ ಬಿಲ್‌ ವಿಳಂಬವಾಗುತ್ತಿದೆ. ಅದನ್ನೂ ಶೀಘ್ರ ನೀಡಬೇಕು ಎಂಬ ಆಗ್ರಹವೂ ಇದೆ.

ಮಾನವ ದಿನ ಸೃಜನೆಗೆ ಅನುಕೂಲ
ಉಭಯ ಜಿಲ್ಲೆಯಲ್ಲಿ 20 ಲಕ್ಷಕ್ಕೂ ಅಧಿಕ ಮಾನವದಿನ ಸೃಜನೆಯ ಗುರಿ ಯನ್ನು ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾಮಗಾರಿ ಅಡಿಯಲ್ಲಿ ಕಾಲುಸಂಕಗಳ ನಿರ್ಮಾಣವೂ ನಡೆಯಲಿರುವುದರಿಂದ ಮಾನವದಿನ ಸೃಜನೆಗೂ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ.

ನರೇಗಾದಡಿಯಲ್ಲಿ ಕಾಲುಸಂಕ ನಿರ್ಮಾಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಮಳೆ ಹಾಗೂ ನೀರು ಹೆಚ್ಚಿರುವುದರಿಂದ ಕಾಮಗಾರಿ ನಡೆಸಲು ಸಾಧ್ಯವಾಗು ತ್ತಿಲ್ಲ. ಮಳೆ ಕಡಿಮೆ ಆಗುತ್ತಿದಂತೆ ಹಂತಹಂತವಾಗಿ ಕಾಮಗಾರಿ ಆರಂಭಿಸಲಿದ್ದೇವೆ.
– ಪ್ರಸನ್ನ ಎಚ್‌., ಜಿ.ಪಂ. ಸಿಇಒ, ಉಡುಪಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.