ಹೊಸಪೇಟೆ: ಮೂರ್ತಿ ಸಮೇತ ವಾಲಿದ ಕ್ರೇನ್; ಯುವಕನ ದಾರುಣ ಸಾವು
Team Udayavani, Sep 11, 2022, 10:59 AM IST
ಹೊಸಪೇಟೆ: 11ನೇ ದಿನದ ಗಣೇಶ ವಿಸರ್ಜನಾ ಸಮಯದಲ್ಲಿ ಮೂರ್ತಿ ಸಮೇತ ಕ್ರೇನ್ ಕಾಲುವೆಗೆ ವಾಲಿದ ಕಾರಣ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ತಾಲೂಕಿನಲ್ಲಿ ನಡೆದಿದೆ.
ಸಮೀಪದ ಟಿಬಿ ಡ್ಯಾಂನ ಇ.ವಿ.ಕ್ಯಾಂಪ್ ಬಳಿ ಪ್ರತಿಷ್ಠಾಪಿಸಿದ್ದ 34 ಅಡಿ ಎತ್ತರದ ಗಣೇಶ ಮೂರ್ತಿಯ 11ನೇ ದಿನದ ವಿಸರ್ಜನೆ ಕಾರ್ಯಕ್ರಮ ನಡೆದಿದ್ದು, ಈ ಸಮಯದಲ್ಲಿ ಅದ್ಧೂರಿ ಡಿಜೆ ಮೆರವಣಿಗೆ ಮೂಲಕ ಟಿಬಿ ಡ್ಯಾಂ ಸಮೀಪ ಬಂದು ಗಣೇಶ ದೇವಸ್ಥಾನದ ಕಾಲುವೆಯಲ್ಲಿ ಕ್ರೇನ್ ಮೂಲಕ ವಿಸರ್ಜನೆ ವೇಳೆ ಈ ಘಟನೆ ನಡೆದಿದೆ.
ತಡರಾತ್ರಿ ಈ ಘಟನೆ ನಡೆದಿದ್ದು, ಕ್ರೇನ್ ಮತ್ತು ಸೇತುವೆ ತಡೆಗೋಡೆ ನಡುವೆ ಸಿಲುಕಿದ ಅಶೋಕ್ (18) ಮೃತಪಟ್ಟಿದ್ದಾನೆ. ಸಾಯಿ ನಿಖಿಲ್ (18) ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಆಸ್ಪತ್ರೆಗೆ ಸಾಗಿಸಲಾಗಿದೆ.
ಪೊಲೀಸ್ ಸಿಬ್ಬಂದಿ ಸೇರಿದಂತೆ ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ನೆರವಿನಿಂದ ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಕ್ರೇನಿನಲ್ಲಿ ಸಿಲುಕಿದ್ದವರನ್ನು ಹೊರತೆಗೆಯಲಾಯಿತು. ಘಟನೆ ನಡೆದ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ನಿರ್ಲಕ್ಷ್ಯ ಹಾಗೂ ಸುರಕ್ಷಾ ಕ್ರಮ ಕೈಗೊಳ್ಳದ ಕಾರಣ ಕ್ರೇನ್ ಆಪರೇಟರ್ ರಾಜು ಹಾಗೂ ಶ್ರೀ ಮಹಾಗಣಪತಿ ಸಂಘದ ಆರ್.ನೂಕರಾಜು ವಿರುದ್ಧ ಟಿಬಿ ಡ್ಯಾಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.