ಕಾಶ್ಮೀರದಲ್ಲಿ 370 ನೇ ವಿಧಿ ಪುನಃ ಸ್ಥಾಪಿಸಲು ಯಾವುದೇ ಪಕ್ಷದಿಂದ ಸಾಧ್ಯವಿಲ್ಲ: ಆಜಾದ್
ಶೋಷಣೆ ಮತ್ತು ಸುಳ್ಳಿನ ರಾಜಕೀಯದ ವಿರುದ್ಧ ಹೋರಾಡುತ್ತೇನೆ
Team Udayavani, Sep 11, 2022, 8:03 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಹೆಚ್ಚಿನ ಸ್ವಾಯತ್ತತೆಯನ್ನು ನೀಡಿದ ಸಂವಿಧಾನದ 370 ನೇ ವಿಧಿಯನ್ನು ಕೇಂದ್ರದ ಬಿಜೆಪಿ ಸರ್ಕಾರವು ಮೂರು ವರ್ಷಗಳ ಹಿಂದೆ ಹಿಂತೆಗೆದುಕೊಂಡಿದೆ ಆದರೆ ಅದನ್ನು ಪುನಃ ಸ್ಥಾಪಿಸಲು ಸಾಧ್ಯವಿಲ್ಲ.ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.
ತಮ್ಮದೇ ಆದ ರಾಜಕೀಯ ಸಂಘಟನೆಯನ್ನು ಪ್ರಾರಂಭಿಸಲು ಸಿದ್ಧರಾಗಿರುವ ಆಜಾದ್ ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ ತಮ್ಮ ಮೊದಲ ಸಾರ್ವಜನಿಕ ಸಭೆಯಲ್ಲಿ, ಆರ್ಟಿಕಲ್ 370 ರ ಮರುಸ್ಥಾಪನೆಗೆ ಒತ್ತಾಯಿಸುವುದಾಗಿ ಭರವಸೆ ನೀಡುವ ಮೂಲಕ ಪ್ರಾದೇಶಿಕ ಪಕ್ಷಗಳನ್ನು ಗುರಿಯಾಗಿಸಿದರು.
“ಗುಲಾಂ ನಬಿ ಆಜಾದ್ ಯಾರನ್ನೂ ದಾರಿ ತಪ್ಪಿಸುವುದಿಲ್ಲ, ಮತಕ್ಕಾಗಿ, ನಾನು ನಿಮ್ಮನ್ನು ದಾರಿ ತಪ್ಪಿಸುವುದಿಲ್ಲ ಮತ್ತು ಶೋಷಣೆ ಮಾಡುವುದಿಲ್ಲ. ದಯವಿಟ್ಟು ಸಾಧಿಸಲಾಗದ ಸಮಸ್ಯೆಗಳನ್ನು ಕೆದಕಬೇಡಿ. 370 ಅನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ. ಇದಕ್ಕೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಆಜಾದ್ ಹೇಳಿದರು.
ಪ್ರತಿ ಚುನಾವಣೆಯಲ್ಲೂ ಕಾಂಗ್ರೆಸ್ ಕೆಳಗಿಳಿಯುತ್ತಿದೆ ಮತ್ತು ಸಂಸತ್ತಿನಲ್ಲಿ ಬಹುಮತ ಪಡೆಯುವ ಮತ್ತು 370 ನೇ ವಿಧಿಯನ್ನು ಮರುಸ್ಥಾಪಿಸುವ ಯಾವುದೇ ಪಕ್ಷ ಭಾರತದಲ್ಲಿ ಇಲ್ಲ ಎಂದರು.
“ಶೋಷಣೆ ಮತ್ತು ಸುಳ್ಳಿನ ರಾಜಕೀಯದ ವಿರುದ್ಧ ಹೋರಾಡಲು” ಮುಂದಿನ 10 ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ತನ್ನ ಪಕ್ಷವನ್ನು ಪ್ರಾರಂಭಿಸುತ್ತೇನೆ. ಶೋಷಣೆಯ ರಾಜಕೀಯವು ಕಾಶ್ಮೀರದಲ್ಲಿ ಒಂದು ಲಕ್ಷ ಜನರ ಹತ್ಯೆಗೆ ಕಾರಣವಾಗಿದೆ. ಇದು ಐದು ಲಕ್ಷ ಮಕ್ಕಳನ್ನು ಅನಾಥರನ್ನಾಗಿ ಮಾಡಿದೆ ಮತ್ತು ಭಾರೀ ಗೊಂದಲವನ್ನು ಉಂಟುಮಾಡಿದೆ” ಎಂದು ಆಜಾದ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ
Bengaluru: 2.5 ಕೋಟಿ ರೂ. ಮೌಲ್ಯದ ಕೆರೆ ಒತ್ತುವರಿ ಜಾಗ ತೆರವು ಕಾರ್ಯಾಚರಣೆ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.