ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಕನ್ನಡಿಗ ರಾಬಿನ್‌ ಉತ್ತಪ್ಪ


Team Udayavani, Sep 14, 2022, 7:47 PM IST

ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಕನ್ನಡಿಗ ರಾಬಿನ್‌ ಉತ್ತಪ್ಪ

ಮುಂಬಯಿ: ಕ್ರಿಕೆಟಿಗ ರಾಬಿನ್ ಉತ್ತಪ್ಪ ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ಬುಧವಾರ ನಿವೃತ್ತಿ ಘೋಷಿಸಿದ್ದಾರೆ.

2006 ರಲ್ಲಿ ಇಂಗ್ಲೆಂಡ್‌ ವಿರುದ್ಧದ ಏಕದಿನ ಪಂದ್ಯದ ಮೂಲಕ ಭಾರತ ತಂಡಕ್ಕೆ ಪಾದರ್ಪಣೆ ಮಾಡಿದ ರಾಬಿನ್‌ ಉತ್ತಪ್ಪ, 46  ಏಕದಿನ ಪಂದ್ಯಗಳನ್ನು ಆಡಿದ್ದು, 934 ರನ್‌ ಗಳನ್ನು ಗಳಿಸಿದ್ದಾರೆ. 86 ಅವರ ಸರ್ವಾಧಿಕ ರನ್.‌

2007 ರ ಟಿ-20 ವಿಶ್ವಕಪ್‌  ತಂಡಕ್ಕೆ ಆಯ್ಕೆಯಾಗಿದ್ದ ಉತ್ತಪ್ಪ ಪಾಕಿಸ್ತಾನ ವಿರುದ್ಧದ ಸಮಬಲಗೊಂಡ ಪಂದ್ಯದಲ್ಲಿ ಬಾಲ್‌ ಶೂಟೌಟ್‌ ನಲ್ಲಿ ಗೆಲ್ಲಲು ಪ್ರಧಾನ ಪಾತ್ರ ವಹಿಸಿದ್ದರು. 13 ಅಂತಾರಾಷ್ಟ್ರೀಯ ಟಿ-20 ಪಂದ್ಯವನ್ನಾಡಿರುವ ಅವರು, 118.01 ಸ್ಟ್ರೈಕ್‌ ರೇಟ್‌ ನೊಂದಿಗೆ 249 ರನ್‌ ಗಳಿಸಿದ್ದಾರೆ.

2015 ರಲ್ಲಿ ಕೊನೆಯ ಬಾರಿ ಜಿಂಬಾಬ್ಬೆ ವಿರುದ್ಧದ ಏಕದಿನ ಹಾಗೂ ಟಿ-20 ಯನ್ನು ಆಡಿದ್ದರು. ಐಪಿಎಲ್‌ ನಲ್ಲಿ  ಮಂಬಯಿ, ಆರ್‌ ಸಿಬಿ, ಕೆಕೆಆರ್‌, ರಾಜಸ್ಥಾನ್‌ ರಾಯಲ್ಸ್‌, ಸಿಎಸ್‌ ಕೆ ಪರವಾಗಿ ಆಡಿದ್ದರು. ಐಪಿಎಲ್‌ ನಲ್ಲಿ 205 ಪಂದ್ಯವನ್ನಾಡಿ ಒಟ್ಟು 4952 ರನ್‌ ಗಳನ್ನು ಮಾಡಿದ್ದಾರೆ.

ಟ್ವೀಟ್‌ ನಲ್ಲಿ ನಿವೃತ್ತಿ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ನಾನು ಕ್ರಿಕೆಟ್‌ ಆಡಲು ಶುರು ಮಾಡಿ 20 ವರ್ಷವಾಯಿತು. ನನ್ನ ದೇಶ, ರಾಜ್ಯಕ್ಕಾಗಿ ಆಡಿರುವುದು ನನ್ನ ಪಾಲಿಗೆ ದೊಡ್ಡ ಹೆಮ್ಮೆಯ ಸಂಗತಿ. ಈ ಜರ್ನಿಯಲ್ಲಿ ಹಲವಾರು ಬಾರಿ ಏರು – ತಗ್ಗನ್ನು ಕಂಡಿದ್ದೇನೆ. ವ್ಯಕ್ತಿಯಾಗಿ ಕ್ರಿಕೆಟ್‌ ಬೆಳೆಯಲು ಅವಕಾಶ ನೀಡಿದೆ. ಎಲ್ಲಾ ಒಳ್ಳೆಯ ವಿಷಯಕ್ಕೆ ಅಂತ್ಯವೆನ್ನುವುದು ಬರುತ್ತದೆ.  ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ನನ್ನ ಕುಟುಂಬದೊಂದಿಗೆ ಸಮಯ ಕಳೆಯುತ್ತೇನೆ. ಜೀವನದ ಮುಂದಿನ ಹಂತವನ್ನು ಆರಂಭಿಸಲಿದ್ದೇನೆ ಎಂದಿದ್ದಾರೆ.

ಇಷ್ಟು ವರ್ಷ ಕ್ರಿಕೆಟ್‌ ವೃತ್ತಿ ಬೆಳೆಯಲು ಅವಕಾಶ ಕೊಟ್ಟ ಬಿಸಿಸಿಐ ಅಧ್ಯಕ್ಷ, ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ, ಸೌರಾಷ್ಟ್ರ ಕ್ರಿಕೆಟ್ ಮಂಡಳಿ ,ಕೇರಳಕ್ರಿಕೆಟ್ ಮಂಡಳಿಗೆ ಧನ್ಯವಾದಗಳು. ಇದರೊಂದಿಗ ಐಪಿಎಲ್‌ ನಲ್ಲಿ ಆಡಿದ ತಂಡಗಳಿಗೂ, ಕುಟುಂಬ ವರ್ಗಕ್ಕೂ ಧನ್ಯವಾದವನ್ನು ಹೇಳಿದ್ದಾರೆ.

ಟಾಪ್ ನ್ಯೂಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.