ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಿ
Team Udayavani, Sep 15, 2022, 1:24 PM IST
ಸೇಡಂ: ಅಪೌಷ್ಟಿಕತೆಯಿಂದ ಯಾವ ಮಗುವೂ ಬಳಲಬಾರದು ಎನ್ನುವ ಸಂಕಲ್ಪ ಮಾಡಬೇಕು. ಅಪೌಷ್ಟಿಕತೆ ಕುರಿತು ಜನ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕರಣ ಗುಜ್ಜರ್ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಅಪೌಷ್ಟಿಕ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ತಾಲೂಕಿನಲ್ಲಿರುವ ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಸಕಾಲಕ್ಕೆ ಪೌಷ್ಟಿಕ ಆಹಾರ ನೀಡಬೇಕು. ಈ ಕುರಿತಂತೆ ತಹಶೀಲ್ದಾರ್, ಸಿಡಿಪಿಒ ಜವಾಬ್ದಾರಿ ಹೆಚ್ಚು ಇರುತ್ತದೆ. ಸಮರ್ಪಕ ಆಹಾರ ಪೂರೈಕೆ ಮಾಡಲಾಗುತ್ತಿದೆಯಾ? ಪೂರೈಕೆಯಾಗುವ ಆಹಾರದಲ್ಲಿ ಸಪರ್ಮಕವಾದ ಪೌಷ್ಟಿಕತೆ ಇದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಹೇಳಿದರು. ಸರ್ಕಾರದ ಬಹುತೇಕ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಪ್ರಾಮಾಣಿಕವಾಗಿ ಮಾಡುತ್ತಾರೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಆದೇಶ ಪ್ರತಿ ನೀಡಲಾಯಿತು. ನಂತರ ಅಂಗನವಾಡಿ ಕಾರ್ಯಕರ್ತೆಯರು ಮಾಡಿದ ವಿವಿಧ ಖಾದ್ಯಗಳನ್ನು ನ್ಯಾಯಾಧೀಶರು ಸವಿದರು. ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಎಸ್. ಜಟ್ಲಾ, ಸಿವಿಲ್ ನ್ಯಾಯಾಧೀಶ ಸುನೀಲ ಎಸ್. ತಳವಾರ, ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ, ನ್ಯಾಯವಾದಿಗಳ ಸಂಘದ ಸತೀಶ ಪಾಟೀಲ ತರನಳ್ಳಿ, ಸಹಾಯಕ ಸರ್ಕಾರಿ ಅಭಿಯೋಜಕ ರಾಜಕುಮಾರ ಸ್ವಾಮಿ, ಸಿಡಿಪಿಒ ಗೌತಮ ಸಿಂಧೆ, ಸಿಪಿಐ ಎಸ್. ಎನ್. ಆನಂದರಾವ್, ಹಿರಿಯ ನ್ಯಾಯವಾದಿ ಎನ್.ಬಸಿರೋದ್ದಿನ್ ಇದ್ದರು. ಸಿಡಿಪಿಒ ಗೌತಮ ಸಿಂಧೆ ಪ್ರಾಸ್ತವಿಕ ಮಾತನಾಡಿದರು. ಅನಿತಾ ಪ್ರಾರ್ಥಿಸಿದರು. ಪದ್ಮಾವತಿ ಸ್ವಾಗತಿಸಿದರು. ಇಂದುಮತಿ ನಿರೂಪಿಸಿದರು. ಭಾಗ್ಯಲಕ್ಷ್ಮೀ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.