ಬ್ಯಾಂಕ್ ಸಿಬಂದಿ ಯಡವಟ್ಟು; ಕೋಟ್ಯಧಿಪತಿಯಾದ ವಿದ್ಯಾರ್ಥಿನಿ

ಸದ್ದಿಲ್ಲದೇ ಹಣವನ್ನೆಲ್ಲಾ ಖರ್ಚು ಮಾಡಿ, ಕೋರ್ಟ್ ಕೇಸನ್ನೂ ಗೆದ್ದಳು...!!

Team Udayavani, Sep 15, 2022, 3:40 PM IST

1-dfdfdf

ಸಿಡ್ನಿ: ಬ್ಯಾಂಕ್ ನ ಸಿಬಂದಿಯ ತಪ್ಪಿನಿಂದಾಗಿ ಹುಡುಗಿಯೊಬ್ಬಳಿಗೆ ಕೋಟ್ಯಂತರ ರೂಪಾಯಿ ಶಾಪಿಂಗ್ ಮಾಡುವ ಅವಕಾಶ ಸಿಕ್ಕಿದೆ. ಸದ್ದಿಲ್ಲದೇ ಅವಳು ತನ್ನ ಖಾತೆಯಿಂದ 18 ಕೋಟಿ ರೂ.ಗೂ ಹೆಚ್ಚು ಹಣ ಖರ್ಚು ಮಾಡಿ ಐಷಾರಾಮಿ ಜೀವನ ನಡೆಸಿದ್ದಾಳೆ.

ಆಸ್ಟ್ರೇಲಿಯಾದ ವೆಸ್ಟ್‌ಪ್ಯಾಕ್ ಬ್ಯಾಂಕ್ ಆಕಸ್ಮಿಕವಾಗಿ  ಮಲೇಷ್ಯಾ ಮೂಲದ 21 ವರ್ಷದ ಕ್ರಿಸ್ಟಿನ್ ಜಿಯಾಕ್ಸಿನ್ ಎಂಬ ವಿದ್ಯಾರ್ಥಿನಿಗೆ ಈ ಓವರ್‌ಡ್ರಾಫ್ಟ್ ಸೌಲಭ್ಯವನ್ನು ನೀಡಿದ್ದು, ಅದು ಕೂಡ ಅನಿಯಮಿತವಾಗಿತ್ತು!. ಕ್ರಿಸ್ಟಿನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಲು ಆಸ್ಟ್ರೇಲಿಯಾದ ಸಿಡ್ನಿಗೆ ಹೋಗಿದ್ದಳು.

ವೆಸ್ಟ್‌ಪ್ಯಾಕ್ ಬ್ಯಾಂಕ್ ತಪ್ಪಾಗಿ ಕ್ರಿಸ್ಟೀನ್ ಖಾತೆಯಲ್ಲಿ ಅನಿಯಮಿತ ಓವರ್‌ಡ್ರಾಫ್ಟ್ ಸೌಲಭ್ಯವನ್ನು ಅನುಮತಿಸಿತ್ತು. ವಿಷಯ ತಿಳಿದಾಗ, ಅವಳು ಬ್ಯಾಂಕ್‌ಗೆ ತಿಳಿಸದೆ  ಹಣವನ್ನು ಎಗರಿಸಲು ಪ್ರಾರಂಭಿಸಿದ್ದು, ಪಾರ್ಟಿ, ಟ್ರಾವೆಲಿಂಗ್,ಶಾಪಿಂಗ್ , ಚಿನ್ನಾಭರಣ ಸೇರಿ ಐಷಾರಾಮಿ ಜೀವನವನ್ನು ಪ್ರಾರಂಭಿಸಿ ಹಣವನ್ನು ಮನಬಂದಂತೆ ವ್ಯಯಿಸಿದ್ದಾಳೆ. ಅಷ್ಟೇ ಅಲ್ಲ ಕ್ರಿಸ್ಟಿನ್ ದುಬಾರಿ ಅಪಾರ್ಟ್ ಮೆಂಟ್ ಕೂಡ ತೆಗೆದುಕೊಂಡಿದ್ದಾಳೆ. ಇದರೊಂದಿಗೆ ಅವಳ ಇನ್ನೊಂದು ಖಾತೆಗೆ ಸುಮಾರು 2.5 ಲಕ್ಷ ರೂ.ಟ್ರಾನ್ಸ್ ಫರ್ ಮಾಡಿಕೊಂಡಿದ್ದಾಳೆ.

ಸುಮಾರು 11 ತಿಂಗಳುಗಳವರೆಗೆ, ಕ್ರಿಸ್ಟಿನ್ ಬ್ಯಾಂಕ್‌ನಿಂದ ಹಣವನ್ನು ವಂಚನೆ ಮತ್ತು ಸುಲಿಗೆ ಮಾಡುತ್ತಲೇ ಇದ್ದಳು. ಆದಾಗ್ಯೂ, ಇದು ಬಹಿರಂಗವಾದಾಗ, ಕ್ರಿಸ್ಟಿನ್ ಅನ್ನು ಬಂಧಿಸಲಾಯಿತು. ವಿಷಯ ನ್ಯಾಯಾಲಯದ ಮೆಟ್ಟಿಲೇರಿದಾಗ, ಕ್ರಿಸ್ಟೀನ್ ವಿರುದ್ಧದ ಎಲ್ಲಾ ಆರೋಪಗಳನ್ನು ವಜಾಗೊಳಿಸಲಾಯಿತು. ಅವಳನ್ನು ಬಿಡುಗಡೆ ಮಾಡಲಾಯಿತು.

ನನ್ನ ಪೋಷಕರು ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಿದ್ದಾರೆ ಎಂದು ನಾನು ಭಾವಿಸಿದೆ ಎಂದು ಕ್ರಿಸ್ಟಿನ್ ತನ್ನ ವಿವರಣೆಯಲ್ಲಿ ಹೇಳಿದ್ದಾರೆ. ಅದೇ ಸಮಯದಲ್ಲಿ, ಬ್ಯಾಂಕ್ ತಪ್ಪು ಮಾಡಿದ್ದರಿಂದ ಕ್ರಿಸ್ಟಿನ್ ವಂಚನೆಯಲ್ಲಿ ತಪ್ಪಿತಸ್ಥಳಲ್ಲ ಎಂದು ಅವರ ವಕೀಲರು ವಾದಿಸಿದರು. ಮತ್ತೊಂದೆಡೆ, ಕ್ರಿಸ್ಟಿನ್ ಅವರ ಗೆಳೆಯ ವಿನ್ಸೆಂಟ್ ಕಿಂಗ್ ಅವರು ಕ್ರಿಸ್ಟಿನ್ ಬಳಿಯಿರುವ ಇಷ್ಟು ದೊಡ್ಡ ಪ್ರಮಾಣದ ಹಣದ ಬಗ್ಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

ನಂತರ, ಕ್ರಿಸ್ಟಿನ್ ಸಿಡ್ನಿಯಿಂದ ಮಲೇಷ್ಯಾದ ತನ್ನ ಮನೆಗೆ ಮರಳಿದ್ದಾಳೆ. ಆದಾಗ್ಯೂ, ತನಿಖಾ ಸಂಸ್ಥೆಗಳು ಕ್ರಿಸ್ಟಿನ್ ಳಿಂದ 9 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿವೆ.

ಟಾಪ್ ನ್ಯೂಸ್

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

1-ewwss

India vs Australia; ಟೆಸ್ಟ್‌  ಸರಣಿಗೆ ಗ್ರೀನ್‌ ಸಂಶಯ

1-ucchil

Uchchila Dasara: ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ

1-asdsad

Arctic Open ಬ್ಯಾಡ್ಮಿಂಟನ್‌; ಲಕ್ಷ್ಯ ಸೇನ್‌ಗೆ ಸೋಲು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

1-ewwss

India vs Australia; ಟೆಸ್ಟ್‌  ಸರಣಿಗೆ ಗ್ರೀನ್‌ ಸಂಶಯ

1-ucchil

Uchchila Dasara: ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ

1-asdsad

Arctic Open ಬ್ಯಾಡ್ಮಿಂಟನ್‌; ಲಕ್ಷ್ಯ ಸೇನ್‌ಗೆ ಸೋಲು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.