ಯುವಿಸಿಇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲಿ; ಮುಖ್ಯಮಂತ್ರಿ ಬೊಮ್ಮಾಯಿ

ಇಂಗ್ಲಿಷರು ಬಂಡ ವಾಳಶಾಹಿಗಳಾಗಿ ದೇಶವನ್ನು ಆಳಿದರು.

Team Udayavani, Sep 16, 2022, 12:56 PM IST

ಯುವಿಸಿಇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲಿ; ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು (ಯುವಿಸಿಇ) ವಿಶ್ವವಿದ್ಯಾಲಯವನ್ನು ಅಮೆರಿಕದ ಹಾರ್ವರ್ಡ್‌, ಎಂಆರ್‌ಟಿ ವಿಶ್ವವಿದ್ಯಾಲಯ ದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಹುಬ್ಬೇರಿಸುವಂತೆ ಅಗ್ರಸಂಸ್ಥೆಯನ್ನಾಗಿ ಬೆಳೆಸಬೇಕಿದೆ. ಇದಕ್ಕಾಗಿ ಬೇಕಾದ ಎಲ್ಲ ರೀತಿಯ ಸಹಕಾರ, ಸ್ವಾತಂತ್ರ್ಯವನ್ನು ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಕೆ.ಆರ್‌. ವೃತ್ತದಲ್ಲಿರುವ ಯುವಿಸಿಇ ಅನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಕ್ಕಾಗಿ ಯುವಿಸಿಇ ವಿಶ್ವವಿದ್ಯಾಲಯಕ್ಕೆ ಚಾಲನೆ ನೀಡಿ ಹಾಗೂ ಯುವಿಸಿಇ-2030 ವಿಷನ್‌ ಡಾಕ್ಯುಮೆಂಟ್‌ ಅನ್ನು ಮುಖ್ಯಮಂತ್ರಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಈ ವಿ.ವಿ.ಯನ್ನು ಮೊದಲ ಹಂತದಲ್ಲಿ ಮೂರು ವರ್ಷಗಳಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎನ್ನುವುದು ಸರ್ಕಾರದ ಗುರಿಯಾಗಿದೆ. ಹೀಗಾಗಿ, 2030ಕ್ಕೆ ಇಟ್ಟುಕೊಂಡಿದ್ದ ಗುರಿಯ ಕಾಲಾವಧಿಯನ್ನು ಇಳಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿಯೇ ಮೊದಲ ಹಂತದ ಅಭಿವೃದ್ಧಿಯಾಗುವಂತೆ ಯುವಿಸಿಇ ಆಡಳಿತ ಮಂಡಳಿ ಅಧ್ಯಕ್ಷ ಮುತ್ತುರಾಮನ್‌ ಅವರಿಗೆ ಸಮಯ ನೀಡಿದರು.

6 ಕಾಲೇಜು ಐಐಟಿ ಮಾದರಿಗೆ ಸಂಕಲ್ಪ: ಅಭಿವೃದ್ಧಿಗೆ ಬೇಕಾದ ಸಿಬ್ಬಂದಿ, ಬೋಧಕ ವೃಂದ, ಮೂಲ ಸೌಕರ್ಯ ಕಲ್ಪಿಸುವ ಜತೆಗೆ ಕಿಂಚಿತ್ತೂ
ಹಸ್ತಕ್ಷೇಪ ಮಾಡುವುದಿಲ್ಲ. ಸಂಪೂರ್ಣವಾಗಿ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆ ನೀಡಲಾಗುತ್ತದೆ. ನಮ್ಮ ವಿದ್ಯಾರ್ಥಿಗಳು ಉತ್ಕೃಷ್ಟ ಶಿಕ್ಷಣಕ್ಕೆ ಐಐಟಿ ತರಹದ ಸಂಸ್ಥೆಗಳನ್ನು ಹುಡುಕಿಕೊಂಡು ಹೋಗಬೇಕಾಗಿಲ್ಲ. ಯುವಿಸಿಇ ಜತೆಗೆ ರಾಜ್ಯದ ಇನ್ನೂ ಆರು ಎಂಜಿನಿಯರಿಂಗ್‌ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಬೆಳೆಸುವ ಸಂಕಲ್ಪ ಮಾಡಲಾಗಿದೆ ಎಂದು ಹೇಳಿದರು.

ಯುವಿಸಿಇ ಎಂದೋ ಬದಲಾಗಬೇಕಿತ್ತು: ನಗರದಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲದಿರುವುದರಿಂದ ಯುವಿಸಿಇ ಯನ್ನು ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ಬೆಳೆಸುವ ಕೆಲಸ ಎಂದೋ ಆಗಬೇಕಿತ್ತು. ಆದರೆ, ಹಿಂದಿನ ಸರ್ಕಾರಗಳ ವ್ಯವಸ್ಥೆಯಲ್ಲಿ ಇಚ್ಛಾಶಕ್ತಿಯ ಕೊರತೆ ಇದ್ದರಿಂದ ಅಭಿವೃದ್ಧಿ ಕಂಡಿರಲಿಲ್ಲ ಎಂದು ಆರೋಪ ಮಾಡಿದರು.

ತಾಂತ್ರಿಕ ಮತ್ತು ವಿಶ್ಲೇಷಣಾತ್ಮಕ ಆಲೋಚನೆಗಳನ್ನು ಅಳವಡಿಸಿಕೊಂಡಾದ ಅತ್ಯುತ್ತಮ ಎಂಜಿನಿಯರ್‌ಗಳು ಸೃಷ್ಟಿಯಾಗುತ್ತಾರೆ. ರಾಜಮಹಾರಾಜರ ಕಾಲ ಭೂ ಮಾಲೀಕರು, ಇಂಗ್ಲಿಷರು ಬಂಡ ವಾಳಶಾಹಿಗಳಾಗಿ ದೇಶವನ್ನು ಆಳಿದರು. ಈಗ 21ನೇ ಶತಮಾನ ಜ್ಞಾನದ ಯುಗವಾಗಿದೆ. ಇದನ್ನು ಅರ್ಥಮಾಡಿಕೊಂಡರೆ ಯುವ ಜನತೆ ದೇಶ ವನ್ನೇ ಆಳಬಹುದು. ಯುವಿಸಿಇ ವಿದ್ಯಾರ್ಥಿಗಳು ಇದನ್ನು ಸಾಧ್ಯ ಮಾಡಿ ತೋರಿಸಲಿದ್ದಾರೆ ಎನ್ನುವ ವಿಶ್ವಾಸ ತಮ್ಮದಾಗಿದೆ ಎಂದು ಅವರು ಹೇಳಿದರು.

ಸಿಇಟಿ ವಿದ್ಯಾರ್ಥಿಗಳು ಮೊದಲ ಆದ್ಯತೆ: ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ಮಾತನಾಡಿ, ಸಿಇಟಿ ಪರೀಕ್ಷೆಯಲ್ಲಿ
ಉನ್ನತ ಶ್ರೇಣಿಯ ರ್‍ಯಾಂಕ್‌ ಪಡೆಯುವ ವಿದ್ಯಾರ್ಥಿಗಳು ಎಂಜಿನಿಯರಿಂಗ್‌ ಶಿಕ್ಷಣಕ್ಕೆ ಯುವಿಸಿಇಯನ್ನು ಮೊದಲು ಆಯ್ಕೆ ಮಾಡಿಕೊಳ್ಳುವಂತೆ ಮಾಡಲಿದ್ದೇವೆ. ಈ ಬಗ್ಗೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಕೂಡ ಅಪಾರ ಆಸಕ್ತಿ ತೋರಿಸುತ್ತಿದ್ದಾರೆ ಎಂದು ಹೇಳಿದರು.

ಯುವಿಸಿಇಯನ್ನು ಸ್ವಾಯತ್ತ ವಿವಿ ಮಾಡುವ ಬಗ್ಗೆ 20 ವರ್ಷಗಳಿಂದಲೂ ಪ್ರಯತ್ನ ಮಾಡುತ್ತಿದ್ದರು. ಆದರೆ, ಸರ್ಕಾರ ಈ ವಿಚಾರದಲ್ಲಿ ಬದ್ಧತೆ ತೋರಿಸಿರಲಿಲ್ಲ. ಈ ವಿ.ವಿ.ಯ ಪರಿಪೂರ್ಣ ಅಭಿವೃದ್ಧಿಗೆ ಶೀಘ್ರದಲ್ಲಿಯೇ ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು. ಈ ಮೂಲಕ ಐಐಟಿಯನ್ನು ಮೀರಿ ಬೆಳೆಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಯುವಿಸಿಇ ಆಡಳಿತ ಮಂಡಳಿ ಅಧ್ಯಕ್ಷ ಬಿ.ಮುತ್ತುರಾಮನ್‌, ಯುವಿಸಿಇ ಉನ್ನತೀಕರಿಸಿದ ಸಮಿತಿ ಅಧ್ಯಕ್ಷ ಪ್ರೊ.ಎಸ್‌. ಸದಗೋಪನ್‌, ಬೆಂಗಳೂರು ವಿವಿ ಕುಲಪತಿ ಡಾ. ಎಸ್‌.ಎಂ. ಜಯಕರ್‌, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ ಪ್ರಸಾದ್‌, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್‌, ಪ್ರಾಂಶುಪಾಲ ಪ್ರೊ.ಎಚ್‌.ಎನ್‌. ರಮೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.